ಕಲುಷಿತವಾಗುತ್ತಿದೆ ಹೇಮಾವತಿ ನದಿ


Team Udayavani, Nov 26, 2019, 3:00 AM IST

kalushita

ಹೊಳೆನರಸೀಪುರ: ಪಟ್ಟಣದಲ್ಲಿ ಶೇಖರಣೆಯಾಗುವ ಚರಂಡಿ ನೀರು ಹೇಮಾವತಿ ನದಿಗೆ ಸೇರುತ್ತಿದ್ದು, ನದಿ ಕಲುಷಿತವಾಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಪಟ್ಟಣದ ಚರಂಡಿ ನೀರು ನೇರವಾಗಿ ನದಿ ಸೇರುತ್ತಿದೆ. ಈ ಬಗ್ಗೆ ಸಾರ್ವಜನಿಕರು ಅನೇಕ ಬಾರಿ ಜಿಲ್ಲಾಡಳಿತದ ಗಮನ ಸೆಳೆದಿದ್ದರೂ ಚರಂಡಿ ನೀರು ನದಿಗೆ ಸೇರುವುದನ್ನು ತಡೆಗಟ್ಟುವಲ್ಲಿ ಪುರಸಭೆ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳದೇ ಇರುವುದು ಆತಂಕಕಾರಿ ವಿಷಯವಾಗಿದೆ.

ಸಂಸ್ಕರಣ ಘಟಕವಿದ್ದರೂ ಪ್ರಯೋಜನವಿಲ್ಲ: ಪ್ರಸ್ತುತ ಪಟ್ಟಣದಲ್ಲಿ ಒಳಚರಂಡಿ ಯೋಜನೆ ಕೈಗೊಂಡು ಹತ್ತಾರು ವರ್ಷಗಳೇ ಕಳೆದಿದೆ. ಈ ಒಳಚರಂಡಿ ನೀರನ್ನು ಸಂಸ್ಕರಣೆ ಮಾಡಿ ನದಿಗೆ ಬಿಡಲು ಸಂಸ್ಕರಣೆ ಮಾಡಲು ಚನ್ನರಾಯಪಟ್ಟಣದ ರಸ್ತೆಯಲ್ಲಿ ದೊಡ್ಡದಾದ ಮೂರು ಗುಂಡಿಗಳನ್ನು ತೆರದು ಮೂರು ಹಂತದಲ್ಲಿ ಸಂಸ್ಕರಣೆ ಮಾಡಲು ಪುರಸಭೆ ಮುಂದಾಗಿದೆ. ಆದರೆ ಈ ಸಂಸ್ಕರಣೆ ಗುಂಡಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ಒಳಚರಂಡಿಯಲ್ಲಿ ಬರುವ ಕೊಳಚೆ ನೀರು ಹೇಮಾವತಿ ನದಿಯನ್ನು ಸೇರುತ್ತಿದೆ. ಇದರಿಂದ ಹೇಮಾವತಿ ನದಿಯ ನೀರು ಸೇವಿಸಲೂ ಸಾಧ್ಯವಾಗಷ್ಟು ಮಲಿನವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ಈ ಹಿಂದೆ ಕೊಳಚೆ ನೀರು ನದಿ ಮಡಿಲು ಸೇರುತ್ತಿರುವ ಬಗ್ಗೆ ಅನೇಕ ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ ಜಿಲ್ಲಾಡಳಿತ ಮತ್ತು ಕೊಳಚೆ ನಿಮೂರ್ಲನಾ ಮಂಡಳಿ ಕಠಿಣ ಕ್ರಮ ಕೈಗೊಳ್ಳದೇ ಇದ್ದುದರಿಂದ ನದಿ ಕಲುಷಿತಗೊಂಡು ವಿಷಕಾರಿಯಾಗುತ್ತಿದೆ. ಈ ಹಿಂದೆ ಹೇಮಾವತಿ ನದಿ ನೀರು ಕುಡಿಯಲು ಪನ್ನೀರಿನ ರುಚಿ ಇತ್ತು ಆದರೆ ಇಂದು ನದಿ ನೀರನ್ನು ನೇರವಾಗಿ ಸೇವಿಸಿದರೆ ರೋಗದಿಂದ ಬಳಲುವುದು ಖಚಿತವಾಗಿದೆ.

ನದಿಯಲ್ಲಿ ಈಜಿದರೆ ರೋಗ ಖಚಿತ: ದಶಕದ ಹಿಂದೆ ಪಟ್ಟಣದ ಯುವಕರು ನದಿಗೆ ಈಜಾಡಲು ತೆರಳುತ್ತಿದ್ದರು. ಆದರೆ ಇಂದು ನದಿಯಲ್ಲಿ ಈಜಲು ಹೋದರೆ ಚರ್ಮ ರೋಗಗಗಳು ಬರುವುದು ಖಚಿತವಾಗಿದೆ.

ಪುರಸಭೆ ಮಾಜಿ ಸದಸ್ಯರಿಂದ ಲಿಖಿತ ದೂರು: ಹೇಮಾವತಿ ನದಿಗೆ ಚರಂಡಿ ಹಾಗೂ ಒಳ ಚರಂಡಿ ನೀರು ಸೇರ್ಪಡೆ ಯಾಗುತ್ತಿರುವ ಬಗ್ಗೆ ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ಮುಜಾಹಿದ್‌ಪಾಷಾ ಜಿಲ್ಲಾಧಿಕಾರಿ ಹಾಗೂ ಕೊಳಚೆ ನಿಮೂರ್ಲನಾ ಮಂಡಳಿಗೆ ಲಿಖಿತ ದೂರು ನೀಡಿ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ನದಿ ಸಂಪೂರ್ಣ ವಿಷಕಾರಿಯಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.

ಅಕ್ರಮ ಮರಳು ಮಾಫಿಯಾ: ಅಕ್ರಮ ಮರಳು ತುಂಬುವ ಮಾಫಿಯಾ ನದಿಯಲ್ಲಿದ್ದ ಮರಳನ್ನೆಲ್ಲಾ ಬಗೆದು ತೆಗೆದಿದ್ದರಿಂದ ನದಿಯ ನೀರು ಕಲುಷಿತಗೊಳ್ಳಲು ಕಾರಣವಾಗಿದೆ. ಕೆಲವು ಮಂದಿ ನದಿ ದಡದಲ್ಲಿ ಅನಧಿಕೃತವಾಗಿ ದನಗಳನ್ನು ಕಡಿಯುತ್ತಿರುವುದರಿಂದ ದನಗಳ ರಕ್ತ ನದಿಯ ನೀರು ಸೇರುತ್ತಿದೆ. ಜಿಲ್ಲಾಡಳಿತ ಅಕ್ರಮ ಕಸಾಯಿ ಖಾನೆಗಳ ಮೇಲೆ ಹಲವಾರು ಬಾರಿ ದಾಳಿ ನಡೆಸಿದರೂ ಮತ್ತೆ ಕೆಲ ದಿನಗಳಲ್ಲೇ ಕಸಾಯಿ ಖಾನೆ ಆರಂಭವಾಗುತ್ತಿದೆ.

ಹೇಮಾವತಿ ನದಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪುರಸಭೆಯಿಂದ ನದಿಗೆ ಕೊಳಚೆ ನೀರು ಸೇರುತ್ತಿರುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ವಸಂತ, ಪುರಸಭೆ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.