ಮುಳಿ ಹುಲ್ಲಿನ ಛಾವಣಿಯ ಶಾಲೆಗೆ ಈಗ ಸುಸಜ್ಜಿತ ಕಟ್ಟಡ

ದ.ಕ. ಜಿ.ಪಂ. ಮಾದರಿ ಹಿ.ಪ್ರಾ. ಶಾಲೆ ಮಾಣಿ

Team Udayavani, Nov 27, 2019, 5:35 AM IST

as-16

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1908 ಶಾಲೆ ಆರಂಭ
ಊರ ಗಣ್ಯರ ಶ್ರಮದ ಫ‌ಲವಾಗಿ ಆರಂಭಗೊಂಡ ಶಾಲೆ

ಮಾಣಿ: ಬಂಟ್ವಾಳ ತಾಲೂಕು ಮಾಣಿ ಪರಿಸರದ ಮಕ್ಕಳ ವಿದ್ಯಾರ್ಜನೆಗಾಗಿ ನೂಜಿಬೈಲು ಮನೆತನದ ಬೆಂಬಲ, ಕಾಂತಪ್ಪ ಶೆಟ್ಟಿ ಅಲೈತ್ತಿಮಾರು ಕಲ್ಲಾಜೆ ಹಾಗೂ ಊರ ಗಣ್ಯರ ಶ್ರಮದ ಫ‌ಲವಾಗಿ 1908ರಲ್ಲಿ ಮುಳಿ ಹುಲ್ಲಿನ ಛಾವಣಿಯ ನೂಜಿಬೈಲು ಬೋರ್ಡ್‌ ಶಾಲೆ ಆರಂಭಗೊಂಡಿತು.

1935ರಲ್ಲಿ ನಾರಾಯಣ ಭಂಡಾರಿ, ಮನೆಯವರು, ಊರಿನವರ ಸಹಕಾರದಿಂದ ಹೈಯರ್‌ ಪ್ರೈಮರಿ ಶಾಲೆಯಾಗಿ ಉನ್ನತೀಕರಣಗೊಂಡಿತು. ನಾರಾಯಣ ಭಂಡಾರಿ ಅವರು ಶಾಲೆಯ ಪುನರ್‌ ನಿರ್ಮಾಣದ ಶಿಲ್ಪಿ ಎಂದೇ ಕರೆಯಲ್ಪಡುತ್ತಾರೆ. ಪ್ರಸ್ತುತ 7 ಶಿಕ್ಷಕರು, ಓರ್ವ ಮುಖ್ಯ ಶಿಕ್ಷಕಿ ಇದ್ದಾರೆ. 157 ವಿದ್ಯಾರ್ಥಿಗಳು ಮತ್ತು ಈ ವರ್ಷ ಪ್ರಾರಂಭಗೊಂಡ ಎಲ್‌ಕೆಜಿ-ಯುಕೆಜಿಯಲ್ಲಿ 20 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಸುಸಜ್ಜಿತ ಕಟ್ಟಡ
ಈಗ ಮಾಣಿ ದ.ಕ. ಜಿ.ಪಂ. ಮಾದರಿ ಹಿ.ಪ್ರಾ. ಶಾಲೆಯು 0.76 ಸೆಂಟ್ಸ್‌ ಜಾಗ ಹೊಂದಿದ್ದು, ರಂಗಮಂದಿರ, ಹೈಟೆಕ್‌ ಶೌಚಾಲಯ, ವಿಶಾಲವಾದ ಮೈದಾನ ಮತ್ತು ಕೈತೋಟ ಇದೆ. ಎಸ್‌.ಡಿ.ಎಂ.ಸಿ. ಮತ್ತು ಹಳೆ ವಿದ್ಯಾರ್ಥಿಗಳ ಪರಿಶ್ರಮದಿಂದ 50 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡಿದೆ. ಅಕ್ಕಪಕ್ಕದ ಶಾಲೆಗಳಾದ ನೇರಳಕಟ್ಟೆ ಹಿ.ಪ್ರಾ. ಶಾಲೆ, ಅನಂತಾಡಿ ಹಿ.ಪ್ರಾ. ಶಾಲೆ, ಪೆರಾಜೆ ಹಿ.ಪ್ರಾ. ಶಾಲೆ, ಶೇರಾ ಹಿ.ಪ್ರಾ. ಶಾಲೆ, ಬರಿಮಾರು ಶಾಲೆಗಳಿಗೆ ಕೇಂದ್ರ ಬಿಂದುವಾಗಿದೆ.

ಹಳೆ ವಿದ್ಯಾರ್ಥಿಗಳು
ಏಷ್ಯಾಡ್‌ನ‌ 100 ಮೀ. ಓಟದಲ್ಲಿ ಚಿನ್ನದ ಪದಕ ವಿಜೇತ ಆನಂದ ಶೆಟ್ಟಿ, ಏಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟ್ರಿಯ ಕಬಡ್ಡಿ ಆಟಗಾರ ಉದಯ ಚೌಟ, ಶಾಲಾ ಕಟ್ಟಡ ಸಮಿತಿ ಅಧ್ಯಕ್ಷ ಜಗನ್ನಾಥ ಚೌಟ, ಸಾಹಿತಿ, ಪತ್ರಕರ್ತ ಜಯಾನಂದ ಪೆರಾಜೆ, ಎಸ್‌ಡಿಎಂಸಿ ಅಧ್ಯಕ್ಷ ಜನಾರ್ದನ ಪೆರಾಜೆ, ಹೈಕೋರ್ಟ್‌ ಸಿವಿಲ್‌ ಜಡ್ಜ್ ಮನೋಹರ ಕೆ. ಹೈಕೋರ್ಟ್‌ ವಕೀಲ ಸುಧಾಕರ ಪೈ, ಸುದೀಪ್‌ ಕುಮಾರ್‌ ಶೆಟ್ಟಿ, ಬಾಲಕೃಷ್ಣ ಆಳ್ವ, ಇಬ್ರಾಹಿಂ ಕೆ., ಬದ್ರುದ್ದೀನ್‌, ಸಂಜೀವ ಶೆಟ್ಟಿ, ಪ್ರಹ್ಲಾದ ಶೆಟ್ಟಿ, ಡಾ| ಜಗದೀಶ ಭಟ್‌, ಮಹಾವೀರ ಪ್ರಸಾದ್‌, ನಾರಾಯಣ ಶೆಟ್ಟಿ ತೋಟ ಮತ್ತಿತರರು ಈ ಶಾಲೆಯಲ್ಲಿ ವಿದ್ಯಾರ್ಜನೆಗೈದು ಸಾಧನೆ ಮಾಡಿದ್ದಾರೆ. ಎಸ್‌.ಡಿ.ಎಂ.ಸಿ.ಯವರು ಎಲ್ಲ ಕೆಲಸ ಕಾರ್ಯಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಯಕ್ಷಗಾನ, ನೃತ್ಯ, ಸಂಗೀತ ತರಬೇತಿ, ಶಾಲಾ ಪ್ರವಾಸ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕರು
ಎಚ್‌.ಡಿ. ಭಕ್ತ, ತಿರುಮಲೇಶ ಭಟ್‌, ಅನ್ನು ಗೌಡ, ಬೆಳ್ಳಿಯಪ್ಪ ಗೌಡ, ಗಂಗಾಧರ, ಆನಂದ ರೈ, ಶಕುಂತಳಾ ಎಚ್‌., ಕಸ್ತೂರಿ, ಲಕ್ಷ್ಮೀ ಟೀಚರ್‌, ಶಾಂತಪ್ಪ ನಾಯ್ಕ, ಶ್ರೀಧರ ಭಟ್‌, ಬಾಲಕೃಷ್ಣ ಕೊಂಡೆ ಮೊದಲಾದವರು ಸೇವೆ ಸಲ್ಲಿಸಿದ್ದಾರೆ.

ಊರಿನವರಿಂದ ಹಾಗೂ ಎಸ್‌.ಡಿ.ಎಂ.ಸಿ. ವತಿಯಿಂದ ಸರ್ವ ರೀತಿಯ ಸಹಕಾರ ದೊರೆಯುತ್ತಿದೆ. ತರಗತಿಗಳು ಅಡಚಣೆ ಇಲ್ಲದೆ ನಿರಂತರವಾಗಿ ನಡೆಯುತ್ತಿವೆ. ಈ ವಿದ್ಯಾಸಂಸ್ಥೆ ಸದೃಢವಾಗಿ ಬೆಳೆಯಲಿ ಎಂಬುದು ನನ್ನ ಆಶಯ.
-ಚಂದ್ರಾವತಿ, ಮುಖ್ಯ ಶಿಕ್ಷಕಿ.

1950ರ ಅವಧಿಯಲ್ಲಿ ಈ ಶಾಲೆಯ ವಿದ್ಯಾರ್ಥಿನಿಯಾಗಿದ್ದೆ. ನನ್ನ ಯಶಸ್ವೀ ಜೀವನದಲ್ಲಿ ಹಲವಾರು ಪ್ರಶಸ್ತಿಗಳು ನನಗೆ ದೊರೆತಿವೆ. ಅದಕ್ಕೆ ಮೂಲ ಕಾರಣರಾದ ಶಿಕ್ಷಕರು ಹಾಗೂ ಈ ಶಾಲೆಗೆ ಚಿರಋಣಿ.
-ಪ್ರಪುಲ್ಲಾ ರೈ,
ಹಿರಿಯ ವಿದ್ಯಾರ್ಥಿನಿ

- ಮಹೇಶ್‌ ಮಾಣೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.