ಹಾವಿನ ಭಯದ ಭೀತಿಯಲ್ಲಿ ಉದ್ಯಾವರ ಗೇಟ್‌ ಶಾಲೆ ವಿದ್ಯಾರ್ಥಿಗಳು

ವಯನಾಡಿನ ಘಟನೆ ಮರುಕಳಿಸುವ ಸಾಧ್ಯತೆ

Team Udayavani, Nov 28, 2019, 4:36 AM IST

aa-7

ಮಂಜೇಶ್ವರ: ಕೇರಳದ ವಯನಾಡ್‌ ಸರಕಾರಿ ಶಾಲಾ ಕೊಠಡಿಯಲ್ಲಿ ಹಾವು ಕಚ್ಚಿ ಹತ್ತು ವರ್ಷದ ಬಾಲಕಿ ಮೃತಪಟ್ಟು ನಾಡನ್ನು ನಡುಗಿಸಿದ ಪ್ರಕರಣ ನಡೆದ ಬಳಿಕ ಇನ್ನು ಎಚ್ಚೆತ್ತುಕೊಳ್ಳದ ಅಧಿಕೃತರ ಅನಾಸ್ಥೆಯಿಂದಾಗಿ ಮಂಜೇಶ್ವರ ಉದ್ಯಾವರ ಗೇಟ್‌ ಜಿ.ಎಲ್‌.ಪಿ. ಶಾಲೆಯ ವಿದ್ಯಾರ್ಥಿಗಳು ಹಾವಿನ ಭೀತಿಯಲ್ಲಿ ಕಳೆಯುತ್ತಿದ್ದಾರೆ.

ಈ ಶಾಲೆಯ ವಿದ್ಯಾರ್ಥಿಗಳು ಕಲಿಯುವ ಕೊಠಡಿಯ ಹಿಂಬಾಗ ಕಾಡು ಪೊದರುಗಳಿಂದ ತುಂಬಿದ್ದು, ಜೊತೆಯಾಗಿ ಅಲ್ಲಲ್ಲಿ ದೊಡ್ಡ ದೊಡ್ಡ ಕಲ್ಲುಗಳು ರಾಶಿ ಬಿದ್ದುಕೊಂಡಿದೆ. ಈ ಭಾಗದಲ್ಲಿ ಸ್ಥಳೀಯರು ಹಾಗೂ ಹಳೆ ವಿದ್ಯಾರ್ಥಿಗಳು ಹಾವುಗಳನ್ನು ಹಲವು ಸಲ ಕಂಡಿದ್ದಾರೆ. ಇದಕ್ಕೆ ತಾಗಿಕೊಂಡೇ ಮಕ್ಕಳು ಕಿಟಿಕಿಯ ಭಾಗದಲ್ಲಿ ಕುಳಿತು ಕಲಿಯುತ್ತಿದ್ದಾರೆ. ಈ ಕಿಟಿಕಿಯ ಬಾಗಿಲನ್ನು ಮುಚ್ಚುವ ಸ್ಥಿತಿ ಕೂಡಾ ಇಲ್ಲದಂತಾಗಿದೆ. ರಾತ್ರಿ ವೇಳೆಗಳಲ್ಲೂ ಕಿಟಿಕಿಯ ಭಾಗದಲ್ಲಿ ಹಾವು ಕಂಡಿರುವುದಾಗಿ ಪರಿಸರವಾಸಿಗಳು ಹೇಳುತ್ತಿದ್ದಾರೆ. ಕಿಟಿಕಿಯ ಭಾಗದಲ್ಲೇ ಮಕ್ಕಳು ಶಾಲಾ ಬ್ಯಾಗುಗಳನ್ನು ಕೂಡಾ ಇಡುತ್ತಿದ್ದಾರೆ. ಕಿಟಿಕಿ ಮುಚ್ಚಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾಡು ಪೊದರಿನಲ್ಲಿರುವ ವಿಷ ಪೂರಿತ ಹಾವುಗಳು ರಾತ್ರಿ ಕಾಲದಲ್ಲೂ ಅದೇ ರೀತಿ ತರಗತಿ ನಡೆಯುವ ಸಂದರ್ಭಗಳಲ್ಲೂ ವಿದ್ಯಾರ್ಥಿಗಳ ಹತ್ತಿರ ಸುಳಿಯುವ ಸಾಧ್ಯತೆ ತೋರುತ್ತಿದೆ. ತರಗತಿ ನಡೆಯುವ ಸಂದರ್ಭಗಳಲ್ಲೂ ಹಾವುಗಳನ್ನು ಕಂಡಿರುವ ಬಗ್ಗೆ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.

ಈ ಸ್ಥಳದಲ್ಲಿ ಹಾವನ್ನು ಕಂಡಂತಹ ಸ್ಥಳೀಯರು ಶಾಲಾ ರಕ್ಷಕ ಶಿಕ್ಷಕ ಸಂಘಕ್ಕೆ ಮಾಹಿತಿ ನೀಡಿದ್ದಾರೆ. ಜೊತೆಯಾಗಿ ಮಾಧ್ಯಮ ಪ್ರತಿನಿಧಿಗಳಿಗೂ ಮಾಹಿತಿ ನೀಡಿದ್ದಾರೆ. ಮಂಜೇಶ್ವರ ಗ್ರಾ.ಪಂ.ನ ಮೇಲ್ನೋಟದಲ್ಲಿರುವ ಈ ಶಾಲೆಯ ಬಗ್ಗೆ ಈಗಾಗಲೇ ಅಧಿಕೃತರಿಗೆ ಮಾಹಿತಿಯನ್ನು ನೀಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲವೆಂಬುದಾಗಿ ಶಾಲಾ ಅಧಿಕೃತರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಪಂ. ಅಧ್ಯಕ್ಷರನ್ನು ಸಂಪರ್ಕಿಸಿದಾಗ ನಮಗೆ ಅಂತಹ ಯಾವುದೇ ದೂರು ಲಭಿಸಿಲ್ಲವೆಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ಶಾಲೆಯ ಮಕ್ಕಳಿಗಾಗಿ ಮೀಸಲಿಟ್ಟ ಆಟದ ಮೈದಾನ ಕೂಡಾ ಕಾಡು ಪೊದರುಗಳಿಂದ ತುಂಬಿಕೊಂಡಿದೆ.

ಅವಘಡ ಸಂಭವಿಸಿದ ಬಳಿಕ ಎಚ್ಚೆತ್ತುಕೊಳ್ಳುವ ಚಾಳಿಯನ್ನು ಅಭ್ಯಾಸಮಾಡಿಕೊಂಡಿರುವ ಅಧಿಕೃತರು ಇದೊಂದು ರಾಷ್ಟ್ರ ಮಟ್ಟದ ಸುದ್ದಿಯಾಗುವುದಕ್ಕಿಂತ ಮೊದಲು ಮಕ್ಕಳನ್ನು ವಿಷಪೂರಿತ ಹಾವುಗಳ ಕಾಟದಿಂದ ರಕ್ಷಿಸುವರೇಎಂಬುದು ಇಲ್ಲಿಯ ಸ್ಥಳೀಯರ ಪ್ರಶ್ನೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.