![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 28, 2019, 11:51 AM IST
ನವದೆಹಲಿ: ಲೋಕಸಭೆಯ ಚರ್ಚೆಯ ವೇಳೆ ಮಹಾತ್ಮ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಸಂಸದೀಯ ಪಕ್ಷದ ಸಭೆಗೆ ಹಾಜರಾಗುವುದಕ್ಕೆ ನಿರ್ಬಂಧ ವಿಧಿಸಿ, ಸಂಸದೀಯ ರಕ್ಷಣಾ ಸಲಹಾ ಸಮಿತಿಯಿಂದ ಕೈಬಿಟ್ಟಿರುವುದಾಗಿ ಬಿಜೆಪಿ ತಿಳಿಸಿದೆ.
ಬುಧವಾರ ಲೋಕಸಭೆಯಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ನೀಡಿರುವ ಹೇಳಿಕೆಯನ್ನು ನಾವು ಖಂಡಿಸುತ್ತವೆ. ಅಲ್ಲದೇ ಸಿಂಗ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಗುರುವಾರ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ರಕ್ಷಣಾ ಸಲಹಾ ಸಮಿತಿಗೆ ಆಯ್ಕೆಯಾಗಿದ್ದ ಪ್ರಜ್ಞಾ ಠಾಕೂರ್ ಅವರನ್ನು ಆ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಹೇಳಿದರು.
ನಿನ್ನೆ ಲೋಕಸಭೆಯಲ್ಲಿ ಎಸ್ ಪಿಜಿ ತಿದ್ದುಪಡಿ ವಿಧೇಯಕದ ಚರ್ಚೆ ವೇಳೆ ಡಿಎಂಕೆ ಸದಸ್ಯ ಎ.ರಾಜಾ ಅವರು ಗೋಡ್ಸೆ ಕುರಿತು ಪ್ರಸ್ತಾಪಿಸಿದಾಗ ಅವರನ್ನು ತಡೆದ ಪ್ರಜ್ಞಾ, ನೀವು ದೇಶಭಕ್ತನೊಬ್ಬನ ಉದಾಹರಣೆ ನೀಡಬೇಡಿ ಎಂದಿದ್ದರು. ಇದಕ್ಕೆ ಪ್ರತಿಪಕ್ಷಗಳ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದರು. ಸ್ಪೀಕರ್ ಬಿರ್ಲಾ ಅವರು ಪ್ರಜ್ಞಾ ಹೇಳಿಕೆಯನ್ನು ಕಡತದಿಂದ ಅಳಿಸುವಂತೆ ಸೂಚಿಸಿ ವಿವಾದಕ್ಕೆ ತೆರೆ ಎಳೆದಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.