![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 3, 2019, 1:21 PM IST
“ಯಜಮಾನ…’ ಕನ್ನಡ ಚಿತ್ರರಂಗದಲ್ಲಿ ಈ ಹೆಸರು ಕೇಳಿದಾಕ್ಷಣ, ನೆನಪಾಗೋದೇ ಡಾ.ವಿಷ್ಣುವರ್ಧನ್. ಹೌದು, “ಯಜಮಾನ‘ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಯಶಸ್ವಿ ಕಂಡ ಸಿನಿಮಾ. ಎಲ್ಲಾಸರಿ, ಈಗ ಯಾಕೆ ಈ ಚಿತ್ರದ ಸುದ್ದಿ ಎಂಬ ಪ್ರಶ್ನೆ ಎದುರಾಗಬಹುದು. ಚಿತ್ರ ಬಿಡುಗಡೆಯಾಗಿ 19 ವರ್ಷಗಳು ಕಳೆದಿವೆ.
ಇವತ್ತಿಗೂ ಈ ಚಿತ್ರ ಜನಮಾನಸದಲ್ಲಿದೆ ಅಂದರೆ, ಅದಕ್ಕೆ ಕಾರಣ,ಚಿತ್ರದ ಕಥೆ ಮತ್ತು ಹಾಡುಗಳು. ಡಿಸೆಂಬರ್ 1, 2000 ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಲ್ಲೆಡೆಯಿಂದಲೂ ಭರ್ಜರಿ ಮೆಚ್ಚುಗೆ ಸಿಕ್ಕಿತ್ತು. ಈ ಚಿತ್ರದಲ್ಲಿ ವಿಷ್ಣುವರ್ಧನ್ ಅವರುದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು.ಆರ್. ಶೇಷಾದ್ರಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಚಿತ್ರದಲ್ಲಿ ವಿಷ್ಣುವರ್ಧನ್ ಅವರ ಸಹೋದರರಾಗಿ ಶಶಿಕುಮಾರ್, ಅಭಿಜಿತ್ ಕಾಣಿಸಿಕೊಂಡಿದ್ದರು. ಪ್ರೇಮಾ ನಾಯಕಿಯಾಗಿ ದ್ದರು. ಈ ಚಿತ್ರ ನೋಡಿದ ಅದೆಷ್ಟೋ ಜನ, ಸಹೋ ದರರ ಜೊತೆ ಪ್ರೀತಿಯಿಂದ ಬದುಕಬೇಕು ಎಂಬ ಬಗ್ಗೆ ಹೇಳಿಕೊಂಡಿದ್ದರು.
ಪಕ್ಕಾ ಕೌಟುಂಬಿಕ ಸಿನಿಮಾ ಆಗಿದ್ದ “ಯಜಮಾನ‘ ಆ ದಿನಗಳಲ್ಲೇ ಎಲ್ಲರ ಮನಸ್ಸನ್ನು ಗೆದ್ದಿತ್ತು. ಚಿತ್ರಕ್ಕೆ ಸಂಗೀತ ನೀಡಿದ್ದ ರಾಜೇಶ್ ರಾಮನಾಥ್ ಅವರ ಹಾಡುಗಳು ಇಂದಿಗೂ ಜನಪ್ರಿಯತೆ ಪಡೆದುಕೊಂಡಿವೆ. ಇದೇ “ಯಜಮಾನ‘ ಚಿತ್ರದ ಶೀರ್ಷಿಕೆಯ ಚಿತ್ರದಲ್ಲಿ ದರ್ಶನ್ ಕೂಡ ನಟಿಸಿದ್ದರು. ಆ ಚಿತ್ರ ಕೂಡ ಹೆಸರಿಗೆ ತಕ್ಕಂತೆಯೇ ಹೆಸರು ಮಾಡಿದ್ದಲ್ಲದೆ, ಅದೂ ಕೂಡ ಸಂದೇಶ ಇರುವಂತಹ ಚಿತ್ರವಾಗಿ ಬಿಡುಗಡೆಯಾಗಿತ್ತು. ಇಷ್ಟಾದರೂ, ದರ್ಶನ್ ಅವರು, ಕನ್ನಡ ಚಿತ್ರರಂಗಕ್ಕೆ ಒಬ್ಬರೇ “ಯಜಮಾನ‘ರು. ಅದು ವಿಷ್ಣುವರ್ಧನ್ ಅವರು ಎಂದು ಹೇಳಿದ್ದರು. ವಿಷ್ಣುವರ್ಧನ್ ಅವರು ಇಂದುನಮ್ಮೊಂದಿಗಿಲ್ಲವಾದರೂ, ಅವರ ಚಿತ್ರಗಳ ಮೂಲಕ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಆ ಮೂಲಕ ಅವರು ಜೀವಂತವಾಗಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.