ಮೊಬೈಲ್ ದರಗಳು ನಮ್ಮದೇಶದಲ್ಲೇ ಅಗ್ಗ: ಬೇರೆ ದೇಶಗಳಲ್ಲಿ ಎಷ್ಟಿದೆ ಗೊತ್ತಾ ರೇಟು?


Team Udayavani, Dec 3, 2019, 5:14 PM IST

Mobile-Network-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ದೇಶದ ವಿವಿಧ ಟೆಲಿಕಾಂ ಕಂಪೆನಿಗಳು ತಮ್ಮ ಸೇವಾ ಶುಲ್ಕಗಳನ್ನು 10 ರಿಂದ 45 ಪ್ರತಿಶತದಷ್ಟು ಹೆಚ್ಚಿಸಿದ ಬಳಿಕವೂ ವಿಶ್ವದ ಇತರೇ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲೇ ಮೊಬೈಲ್ ಸೇವಾ ದರಗಳು ಅಗ್ಗದಲ್ಲಿ ಗ್ರಾಹಕರಿಗೆ ಲಭಿಸುತ್ತಿವೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌  ಹೇಳಿಕೆ ನೀಡಿದ್ದಾರೆ.

ಖಾಸಗಿ ನೆಟ್ ವರ್ಕ್ ಕಂಪೆನಿಗಳು ತಮ್ಮ ಶುಲ್ಕವನ್ನು ಹೆಚ್ಚಿಸಿದ್ದನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಟ್ವಿಟ್ಟರ್ ಮೂಲಕ ಖಂಡಿಸಿದ್ದರು ಮತ್ತು ಕೇಂದ್ರ ಸರಕಾರವು ಖಾಸಗಿಯವರಿಗೆ ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಕೊಡುವ ಮೂಲಕ ಸಾರ್ವಜನಿಕ ರಂಗದ ಮೊಬೈಲ್ ನೆಟ್ ವರ್ಕ್ ಸೇವಾ ಸಂಸ್ಥೆ ಬಿ.ಎಸ್.ಎನ್.ಎಲ್. ಮತ್ತು ಎಂ.ಟಿ.ಎನ್.ಎಲ್.ಗಳನ್ನು ನಷ್ಟಕ್ಕೆ ದೂಡುತ್ತಿದೆ ಎಂದು ಆರೋಪಿಸಿದ್ದರು.

ಆದರೆ ಇದಕ್ಕೆ ತಿರುಗೇಟು ನೀಡಿರುವ ಸಚಿವ ರವಿಶಂಕರ್ ಪ್ರಸಾದ್ ಅವರು ಯುಪಿಎ ಅವಧಿಗಿಂತ ನರೇಂದ್ರ ಮೋದಿ ಅಧಿಕಾರಾವಧಿಯಲ್ಲಿ ದೇಶದ ಇಂಟರ್ನೆಟ್ ಬಳಕೆದಾರರಿಗೆ ಕಡಿಮೆ ದರದಲ್ಲಿ ಇಂಟರ್ನೆಟ್ ಲಭ್ಯವಾಗುತ್ತಿದೆ ಎಂದು ಉದಾಹರಣೆಗಳ ಮೂಲಕ ವಿವರಿಸಿದ್ದಾರೆ. 2014ರಲ್ಲಿ ಪ್ರತೀ ಒಂದು ಜಿಬಿ ಇಂಟರ್ನೆಟ್ ಗೆ 268.97 ರೂಪಾಯಿಗಳಿದ್ದರೆ ಇದೀಗ 11.78 ರೂಪಾಯಿಗಳಿಗೆ ಒಂದು ಜಿಬಿ ಇಂಟರ್ನೆಟ್ ಡಾಟಾ ಗ್ರಾಹಕರಿಗೆ ಲಭ್ಯವಿದೆ ಎಂದು ಅವರು ಪ್ರಿಯಾಂಕ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ವಿಶ್ವದಲ್ಲಿನ ಮೊಬೈಲ್ ತಾರೀಫಿಗೆ ಸಂಬಂಧಿಸಿದಂತೆ ಇಂಗ್ಲೆಡ್‌ ಮೂಲದ ಕೇಬಲ್‌.ಕೋ.ಯುಕೆ ಎಂಬ ಸಂಸ್ಥೆ ಸಮೀಕ್ಷೆಯೊಂದನ್ನು ನಡೆಸಿದೆ. ಆ ಸಮೀಕ್ಷೆಯ ಪ್ರಕಾರ ರಷ್ಯಾದಲ್ಲಿ 0.91 ಡಾಲರ್‌ಗೆ ಒಂದು ಜಿಬಿ ಡೇಟಾ ಸಿಕ್ಕರೆ, ಇಟಲಿಯಲ್ಲಿ 1.73 ಡಾಲರ್‌, ನೈಜಿರಿಯಾದಲ್ಲಿ 2.2 ಡಾಲರ್, ಆಸ್ಟ್ರೇಲಿಯಾದಲ್ಲಿ 2.47 ಡಾಲರ್, ಇಂಗ್ಲೆಂಡ್‌ನ‌ಲ್ಲಿ 6.66 ಡಾಲರ್, ಅಮೆರಿಕಾದಲ್ಲಿ 12.37 ಡಾಲರ್ ಹಾಗೂ ಸ್ವಿಝರ್ಲ್ಯಾಂಡ್ ನಲ್ಲಿ 20.22 ಡಾಲರ್‌ಗಳಿಗೆ ಒಂದು ಬಿಜಿ ಡೇಟಾ ಗ್ರಾಹಕರಿಗೆ ಸಿಗುತ್ತಿದೆ ಎಂದು ಯುಕೆ ಸಂಸ್ಥೆಯೊಂದು ಸಮೀಕ್ಷೆಯಲ್ಲಿ ಹೇಳಿದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.