“ಪರಂಪರೆ ನಾಶಕ್ಕೆ ವ್ಯವಸ್ಥಿತ ಷಡ್ಯಂತ್ರ”

ಕನ್ನಡ ಮಕ್ಕಳ ಪ್ರಥಮ ಸಾಹಿತ್ಯ ಸಮ್ಮೇಳನ: ವಿಚಾರ ಸಂಕಿರಣ

Team Udayavani, Dec 3, 2019, 8:21 PM IST

rt-20

ಕಾಸರಗೋಡು: ಬಹು ಭಾಷಾ ಸಂಗಮ ಭೂಮಿಯಾದ ಗಡಿನಾಡು ಕಾಸರಗೋಡಿನ ಮೂಲ ಪರಂಪರೆ ಯಾದ ಕನ್ನಡ-ತುಳು ಭಾಷೆ ಗಳ ಸಮೃದ್ಧ ನಾಡು ನುಡಿಯ ಸೇವೆ ಗಳಿಂದ ಶ್ರೀಮಂತಗೊಂಡಿದೆ. ಆದರೆ ವರ್ತಮಾನದ ಹಲವು ತಲ್ಲಣಗಳಂತೆ ಪರಂಪರೆಯ ನಾಶಕ್ಕೆ ವ್ಯವಸ್ಥಿತ ಷಡ್ಯಂತ್ರಗಳು ಕಾರ್ಯವೆಸಗುತ್ತಿರುವುದರಿಂದ ಗಡಿನಾಡಿನ ಕನ್ನಡ-ತುಳು ಭಾಷೆಗಳ ಬೆಳವಣಿಗೆಗೆ ಧಕ್ಕೆಗಳು ಉಂಟಾಗುತ್ತಿವೆೆ ಎಂದು ಹಿರಿಯ ಸಾಹಿತಿ, ಪತ್ರಕರ್ತ, ಸವಿ ಹೃದಯದ ಕವಿಮಿತ್ರರು ವೇದಿಕೆಯ ನಿರ್ದೇಶಕ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು ಆದಿ ಚುಂಚನಗಿರಿ ಮಹಾಸಂಸ್ಥಾನ ಹಾಸನದ ನೇತೃತ್ವದಲ್ಲಿ ಎರಡು ದಿನಗಳ ಅಖೀಲ ಭಾರತ ಕನ್ನಡ ಮಕ್ಕಳ ಪ್ರಥಮ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ಪ್ರಸಕ್ತ ಕನ್ನಡ ನಾಡಿನ ಸ್ಥಿತಿಗತಿ ವಿಷಯದ ವಿಚಾರ ಸಂಕಿರಣದಲ್ಲಿ ಪ್ರಧಾನ ಭಾಷಣಗೈದು ಅವರು ಮಾತನಾಡಿದರು.

ಸತತ ಪರಿಶ್ರಮದ ಫಲ
ಸಾವಿರಾರು ವರ್ಷಗಳ ಬೃಹತ್‌ ಇತಿಹಾಸವಿರುವ, ಕನ್ನಡ ಸಾಹಿತ್ಯ, ಕಲೆ, ಆಡಳಿತ, ವ್ಯಾಪಾರ, ಸಾಂಸ್ಕೃತಿಕ ಚರಿತ್ರೆಗಳಲ್ಲಿ ಗಮನಾರ್ಹ ಕೊಡುಗೆಗಳ ಮೂಲಕ ಶ್ರೀಮಂತ ಪರಂಪರೆಯ ಕಾಸರಗೋಡಿನ ಕನ್ನಡಿಗರು ಇಂದು ಭಾಷಾ ಅಲ್ಪಸಂಖ್ಯಾಕತೆಯ ಬೇಗುದಿಗೆ ಒಳಗಾಗಿದ್ದಾರೆ. ತಮ್ಮ ಸಾಂವಿಧಾನಿಕ ಹಕ್ಕು ಸಹಿತ ದೈನಂದಿನ ಚಟುವಟಿಕೆಗಳಲ್ಲಿ ಸರಕಾರದ ಮಲತಾಯಿ ಧೋರಣೆಗಳಿಂದ ಕಷ್ಟದಲ್ಲಿದ್ದಾರೆ. ಆದರೂ ಹಲವಾರು ಸಂಘಟನೆಗಳ ಸತತ ಪರಿಶ್ರಮದ ಫಲವಾಗಿ ತಮ್ಮತನವನ್ನು ಉಳಿಸುವಲ್ಲಿ ಕಟಿಬದ್ದರಾಗಿ ಕನ್ನಡ ನಾಡು-ನುಡಿಯ ಸೇವೆಯನ್ನು ಮುನ್ನಡೆಸುತ್ತಿದ್ದಾರೆ. ಸವಿ ಹೃದಯದ ಕವಿಮಿತ್ರರಂತಹ ಬಳಗಗಳು ನಿರಂತರ ಚಟುವಟಿಕೆಯ ಮೂಲಕ ಕನ್ನಡ ಸಾಹಿತ್ಯ-ಸಾಂಸ್ಕೃತಿಕ ಪರಿಸರ ನಿರ್ಮಾಣದಲ್ಲಿ ಸಕ್ರಿಯರಾಗಿದ್ದಾರೆ ಎಂದು ಅವರು ತಿಳಿಸಿದರು.

ಬಾಲಕ ಅನೀಶ್‌ ಬಿ. ಕೊಪ್ಪ ಅಧ್ಯಕ್ಷತೆ ವಹಿಸಿದ್ದ ವಿಚಾರ ಸಂಕಿರಣದಲ್ಲಿ ರುಚಿತಾ ಎಸ್‌. ಚಾಮರಾಜನಗರ ಹಾಗೂ ಯಶ್ವಂತ್‌ ಗುಲಸಿಂದ ವಿಷಯ ಮಂಡನೆಗೈದರು. ಹಿರಿಯ ಸಾಹಿತಿ ಬೇಂದ್ರೆ ಕೃಷ್ಣಪ್ಪ ಸಮನ್ವಯಕಾರರಾಗಿದ್ದರು. ಕಾವ್ಯಾ ಸಿ.ಎಚ್‌., ಬಲರಾಮು, ಶಿವನಂಜೇಗೌಡ, ತಿಮ್ಮೇಶ್‌ ಪ್ರಭು, ಮಲ್ಲಿಕಾರ್ಜುನ್‌, ಸುಬ್ಬುಸ್ವಾಮಿ, ಶಿವಕುಮಾರ್‌ ಕಣಸೋಗಿ, ಡಾ| ಮಹೇಶ್‌, ಡಾ| ವಿಜಯಕುಮಾರ್‌, ಎಸ್‌.ಎ.ಸಚಿನ್‌, ಸಿ.ಎಸ್‌. ಮನೋಹರ್‌, ಕೃಷ್ಣಪ್ಪ, ಚೆನ್ನೇನಹಳ್ಳಿಸ್ವಾಮಿ, ಶೀತಲ್‌ ಕುಮಾರ್‌, ನಾರಾಯಣ್‌ ನಾಯಕ್‌, ಸಂಜೀವ್‌ ದುಮಕನಾಳ, ಜಿ.ಹಂಪೇಶ್‌, ಮಂಜುನಾಥ್‌, ರವೀಶ್‌, ಎಚ್‌.ಎಂ.ಗೌಡಯ್ಯ, ರಾಮು ಮೊದಲಾದವರು ಉಪಸ್ಥಿತರಿದ್ದು ಮಾತನಾಡಿದರು. ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸಿ.ಎನ್‌.ಅಶೋಕ್‌, ಆದಿಚುಂಚನಗಿರಿ ಮಠದ ಶಾಖಾ ಧಿಕಾರಿ ಎಚ್‌.ಕೆ. ಚಂದ್ರಶೇಖರ್‌, ಕೇಂದ್ರ ಮಕ್ಕಳ ಸಾಹಿತ್ಯ ಪರಿಷತ್ತಿನ ಸಂಚಾಲಕ ಎ.ಎಂ. ಜಯರಾಮ್‌, ಹಾಸನ ತಾಲೂಕು ಅಧ್ಯಕ್ಷ ಚಂದ್ರಶೇಖರ್‌, ಅರಸೀಕೆರೆ ತಾಲೂಕು ಅಧ್ಯಕ್ಷ ಅನಂತಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು. ಜಾಹ್ನವಿ ಕೆ.ಪಿ. ಕುಂದೂರ್‌ ಸ್ವಾಗತಿಸಿ, ಆದಿತ್ಯ ಬ್ಯಾಡರಹಳ್ಳಿ ವಂದಿಸಿದರು. ರೇಖಾಶ್ರೀ ಚಾಮರಾಜನಗರ ಕಾರ್ಯಕ್ರಮ ನಿರೂಪಿಸಿದರು. ಯಶೋದಾ ಜೈನ್‌ ಸಹಕರಿಸಿದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.