ರಾಷ್ಟ್ರೀಯ ಶಿಕ್ಷಣ ನೀತಿ ಅಂತಿಮ ವರದಿ ಶೀಘ್ರ ಸಲ್ಲಿಕೆ: ಡಾ| ಕಸ್ತೂರಿ ರಂಗನ್‌


Team Udayavani, Dec 5, 2019, 5:09 AM IST

fd-36

ಮಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು 200ಕ್ಕೂ ಅಧಿಕ ಮಂದಿ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕ್ರೋಢೀಕರಿಸಿ ಅಂತಿಮ ವರದಿ ತಯಾರಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ, ರಾಷ್ಟ್ರೀಯ ನೂತನ ಶಿಕ್ಷಣ ನೀತಿಯ ರಚನಾ ಸಮಿತಿ ಅಧ್ಯಕ್ಷ ಡಾ| ಕಸ್ತೂರಿರಂಗನ್‌ ಹೇಳಿದರು.

ಅವರು ಬುಧವಾರ ನಗರದ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಬಾಹ್ಯಾಕಾಶ ಮತ್ತು ಅದರಾಚೆಗೆ ಲಗ್ಗೆ’ ಎಂಬ ವಿಷಯದ ಕುರಿತು ಮಾತನಾಡಿದರು.

ಆತ್ಮಸ್ಥೈರ್ಯದಿಂದ ಸಾಧನೆ
ಆಧುನಿಕ ಬದುಕಿನ ವಿವಿಧ ಕ್ಷೇತ್ರಗಳಲ್ಲಿ ಹಿಂದೆಂದಿಗಿಂತ ಹೆಚ್ಚು ಸವಾಲುಗಳಿವೆ. ಹೆಚ್ಚು ನಿರೀಕ್ಷೆಗಳು ಕೂಡ ಸಹಜ. ಇಂತಹ ಪರಿಸ್ಥಿತಿಯಲ್ಲಿ ನಮ್ಮಿಂದ ಈ ಕೆಲಸ ಸಾಧ್ಯವೇ, ಅಸಾಧ್ಯವೇ ಎಂಬ ಸಂದೇಹ, ಹಿಂಜರಿಕೆ ಬೇಡ. ಜ್ಞಾನದ ತಳಹದಿಯ ಮೇಲೆ ಸಮಾಜವನ್ನು ಮುಂದಕ್ಕೆ ಕೊಂಡೊಯ್ಯುವ ಹೊಣೆಗಾರಿಕೆ ನಮ್ಮ ಯುವ ಜನಾಂಗದ ಮೇಲಿದೆ. ಆತ್ಮಸ್ಥೈರ್ಯದಿಂದ ಯುವಜನರು ಮುನ್ನುಗ್ಗಬೇಕು ಎಂದರು.

ಭಾರತವು ಅಮೆರಿಕ ಮತ್ತು ಫ್ರಾನ್ಸ್‌ ದೇಶಗಳಿಗೆ ಸಮಾನವಾದ ಉಪಗ್ರಹಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಜಗತ್ತಿನ ವಿವಿಧ ಮೂಲೆಗಳ ಮಾಹಿತಿಗಳನ್ನು ಸಚಿತ್ರವಾಗಿ ಸಂಗ್ರಹಿಸಿ ರವಾನಿಸುವ ಆಧುನಿಕ ಕೆಮರಾಗಳನ್ನು ಉಪಗ್ರಹಗಳು ಹೊಂದಿದ್ದು, ಇದರಿಂದ ಪ್ರಕೃತಿ ವಿಕೋಪಗಳ ಮಾಹಿತಿಯನ್ನು ಮುಂಚಿತವಾಗಿ ಪಡೆಯಲು ಸಾಧ್ಯವಾಗಿದೆ ಎಂದು ಡಾ| ಕಸ್ತೂರಿ ರಂಗನ್‌ ಅವರು ಹೇಳಿದರು.

ಸಂತ ಅಲೋಶಿಯಸ್‌ ಶಿಕ್ಷಣ ಸಂಸ್ಥೆಗಳ ರೆಕ್ಟರ್‌ ವಂ| ಗುರು ಡೈನೇಶಿಯಸ್‌ ವಾಸ್‌ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ವಂ| ಡಾ| ಪ್ರವೀಣ್‌ ಮಾರ್ಟಿಸ್‌, ಕಾರ್ಯಕ್ರಮದ ಸಂಚಾಲಕರಾದ ಡಾ| ವಿನೋಲಾ ರೋಡ್ರಿಗಸ್‌ ಉಪಸ್ಥಿತರಿದ್ದರು. ಕ್ಸೇವಿಯರ್‌ ಬ್ಲಾಕ್‌ನ ನಿರ್ದೇಶಕ ಡಾ| ಜಾನ್‌ ಇ. ಡಿ’ಸಿಲ್ವಾ ಸ್ವಾಗತಿಸಿ ಕಾರ್ಯಕ್ರಮದ ಸಂಯೋಜಕ ಡಾ| ರೊನಾಲ್ಡ್‌ ನಝೆತ್‌ ವಂದಿಸಿದರು. ರಾಸಾಯನ ಶಾಸ್ತ್ರ ವಿಭಾಗದ ಪ್ರೀಮಾ ಸಿಯೊಲಾ ಪಾಯ್ಸ ಅವರು ಕಾರ್ಯಕ್ರಮ ನಿರ್ವಹಿಸಿದರು.

ಚಂದ್ರಯಾನ-2 ದಾರಿದೀಪ
ಚಂದ್ರಯಾನ-2 ಮಿಷನ್‌ನಲ್ಲಿ ವಿಕ್ರಂ ಲ್ಯಾಂಡರ್‌ ಇಳಿಯುವ ಕೊನೆಯ ಘಳಿಗೆಯಲ್ಲಿ ಸಂಪರ್ಕ ಕಡಿದು ಚಂದ್ರನ ಮೇಲೆ ಬಿದ್ದಿರುವ ಘಟನೆ ನಮಗೆ ಅಸಮಾಧಾನ ತರುವ ಸಂಗತಿ ಆಗಿದ್ದರೂ ಚಂದ್ರನ ಅಂಗಳದವರೆಗೆ ಹೋಗಿರುವುದು ನಮ್ಮ ದೇಶದ ಪಾಲಿಗೆ ದೊಡ್ಡ ಸಾಧನೆಯೇ ಆಗಿದೆ. ಈ ಘಟನೆ ನಮ್ಮ ಮುಂದೆ ಸಂಭಾವ್ಯ ಅಡೆ-ತಡೆಗಳನ್ನು ತಿದ್ದಿಕೊಂಡು ಸಾಧನೆ ಮಾಡಲು ದಾರಿದೀಪವಾಗಿದೆ ಎಂದು ದತ್ತಿ ಉಪನ್ಯಾಸದಲ್ಲಿ ಕಸ್ತೂರಿರಂಗನ್‌ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.