ಕಲಾವಿದರ ಕೈ ಹಿಡಿದ ಮಾಸಾಶನ

1500 ರೂ. ಇದ್ದ ಮಾಸಾಶನ 2000ಕ್ಕೆ ಹೆಚ್ಚಳಅ.1ರಿಂದಲೇ ಜಾರಿ ಬರುವಂತೆ ಆದೇಶ

Team Udayavani, Dec 5, 2019, 1:18 PM IST

5-December-5

ಶಶಿಕಾಂತ ಬಂಬುಳಗೆ

ಬೀದರ: ಸಾಂಸ್ಕೃತಿಕ ರಾಯಭಾರಿಗಳಾಗಿರುವ ಕಲಾವಿದರು, ಸಾಹಿತಿಗಳ ಮಾಸಾಶನ ಏರಿಸುವ ಮೂಲಕ ರಾಜ್ಯ ಸರ್ಕಾರ ಅವರ ಘನತೆ ಹೆಚ್ಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ಎಸ್‌. ಮಾಲತಿ ಅವರು ನ.16ರಂದು ಆದೇಶ ಹೊರಡಿಸಿದ್ದು, ತಿಂಗಳಿಗೆ 1500 ಇದ್ದ ಮಾಸಾಶನವನ್ನು ಅಕ್ಟೋಬರ್‌ 1ರಿಂದಲೇ ಜಾರಿಗೆ ಬರುವಂತೆ 2000 ರೂ.ಗಳಿಗೆ ಹೆಚ್ಚಿಸಲು ಮಂಜೂರಾತಿ ನೀಡಿದ್ದಾರೆ.

ಇದರಿಂದ ಕಲಾವಿದರಿಗೆ ಬದುಕು ಕಟ್ಟಿಕೊಳ್ಳಲು ಒಂದಿಷ್ಟು ನೆರವಾಗಲಿದೆ. ತನ್ನೆಲ್ಲ ಸಂಕಟ ಮರೆತು ಪ್ರೇಕ್ಷಕರ ಮನಸ್ಸು ಹಗುರಗೊಳಿಸುವ ಕಲಾವಿದರು ವೃದ್ಧಾಪ್ಯದಲ್ಲಿ ಗೌರವಯುತ ಜೀವನ ನಿರ್ವಹಣೆ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಸಾಶನ ಯೋಜನೆ ಜಾರಿಗೊಳಿಸಿ ಊರುಗೋಲಾಗಿದೆ.

ಬೆಲೆ ಏರಿಕೆ ಈ ದಿನಗಳಲ್ಲಿ ಸಂಕಷ್ಟದಲ್ಲಿರುವ ಕಲಾವಿದರ ಸಂಭಾವನೆ ಹೆಚ್ಚಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ಸಾಂಸ್ಕೃತಿಕ ನೀತಿಯಲ್ಲೂ ಈ ಕುರಿತಂತೆ ಪ್ರಸ್ತಾಪಿಸಲಾಗಿತ್ತು. ಆರಂಭದಲ್ಲಿ ಮಾಸಿಕ 300 ರೂ. ಮಾಸಾಶನ ಪಡೆಯುತ್ತಿದ್ದ ಕಲಾವಿದರಿಗೆ 2013ರಲ್ಲಿ 1500 ರೂ.ಗಳಿಗೆ ಏರಿಸಲಾಗಿತ್ತು.

8.21 ಕೋಟಿ ಹೆಚ್ಚುವರಿ ಹೊರೆ: ಬೀದರ ಜಿಲ್ಲೆಯಲ್ಲಿ 522 ಮಂದಿ ಸೇರಿದಂತೆ ರಾಜ್ಯದಲ್ಲಿ ಸುಮಾರು 15 ಸಾವಿರ ಕಲಾವಿದರು ಮಾಸಾಶನ ಪಡೆಯುತ್ತಿದ್ದಾರೆ. ಈಗ 2 ಸಾವಿರ ಮಾಸಿಕ ಸಂಭಾವನೆ ಏರಿಕೆ ಮಾಡಿರುವುದರಿಂದ ಸರ್ಕಾರಕ್ಕೆ 8,21,82,000 ರೂ. ಹೆಚ್ಚುವರಿ ಅನುದಾನದ ಹೊರೆ ಬೀಳಲಿದೆ. ಸದರಿ ವೆಚ್ಚವನ್ನು ಲೆಕ್ಕ ಶೀರ್ಷಿಕೆ 2205-00-102-01-18-251 ರಡಿ ಭರಿಸಲು ಆದೇಶದಲ್ಲಿ ಸೂಚಿಸಲಾಗಿದೆ.

ವೃದ್ಧಾಪ್ಯದಲ್ಲಿ ಕಲಾವಿದರಿಗೆ ಬೇರೆ ಆದಾಯ ಇಲ್ಲ. ಅವರು ಸರ್ಕಾರದ ಮಾಸಾಶನವನ್ನೇ ನಂಬಿ ಬದುಕುತ್ತಿದ್ದಾರೆ. ಅಗತ್ಯ ಔಷಧೋಪಚಾರ ಸೇರಿದಂತೆ ಜೀವನ ನಿರ್ವಹಣೆಗೆ ಅಗತ್ಯವಾದಷ್ಟು ಗೌರವಧನ ನೀಡಬೇಕೆಂದು ಕಲಾವಿದರ ಸಂಘಟನೆಗಳ ಒತ್ತಾಯವಾಗಿತ್ತು. ಕನಿಷ್ಠ ಒಂದು ಸಾವಿರ ರೂ.ವರೆಗೆ ಹೆಚ್ಚಿಸಬಹುದೆಂಬ ನಿರೀಕ್ಷೆ ಇತ್ತು. ಆದರೆ, ರಾಜ್ಯದಲ್ಲಿ ನೆರೆ-ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಆರ್ಥಿಕ ಸಂಪನ್ಮೂಲಕ್ಕೆ ಸೀಮಿತವಾಗಿ ಮಾಸಾಶನವನ್ನು 500 ರೂ.ಗೆ ಹೆಚ್ಚಿಸಿದೆ.

ಸಂಭಾವನೆ ಹೆಚ್ಚಳ ಜತೆಗೆ ಕಲಾವಿದರ ವಯೋಮಿತಿಯನ್ನು 60 ರಿಂದ 55ಕ್ಕೆ ಇಳಿಸಬೇಕು ಎನ್ನುವುದು ಬೇಡಿಕೆಗಳಲ್ಲಿ ಒಂದಾಗಿತ್ತು. ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಉಮಾಶ್ರೀ ಅವರಿಂದ ಭರವಸೆಯೂ ಸಿಕ್ಕಿತ್ತು. ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

ಮಾಸಾಶನ 5 ಸಾವಿರ ರೂ. ಗಳಿಗೆ ಹೆಚ್ಚಿಸಿ ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವಂತೆ ಕರ್ನಾಟಕ ಜಾನಪದ ಅಕಾಡೆಮಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಸರ್ಕಾರ 2 ಸಾವಿರಕ್ಕೆ ಏರಿಸಿದೆ. ಮುಂದಿನ ದಿನದಲ್ಲಿ ಜೀವನ ನಿರ್ವಹಣೆಗೆ ಅನುಕೂಲ ತಕ್ಕಂತೆ ಮತ್ತೂಮ್ಮೆ ಪರಿಷ್ಕರಣೆ ಮಾಡಬೇಕು. ಶೀಘ್ರ ಗೌರವಧನ ಪಡೆಯಲು ಕಲಾವಿದರ ವಯೋಮಿತಿಯನ್ನು 55 ವರ್ಷಕ್ಕೆ ಇಳಿಕೆ ಮಾಡಬೇಕು.
.ವಿಜಯಕುಮಾರ ಸೋನಾರೆ,
ಮಾಜಿ ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.