ವೆಸ್ಟ್ ಇಂಡೀಸ್ ಮಣಿಸಿದ ಭಾರತ ತಂಡದ ವಿರುದ್ಧ ಯುವಿ ಕಿಡಿಕಾರಿದ್ಯಾಕೆ ?
Team Udayavani, Dec 7, 2019, 3:56 PM IST
ಹೈದರಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ ಟ್ವೆಂಟಿ ಪಂದ್ಯವನ್ನು ಭಾರತ ಆರು ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದಿತ್ತು. ವಿರಾಟ್ ಕೊಹ್ಲಿಯ ನಾಯಕನ ಆಟ, ಕನ್ನಡಿಗ ರಾಹುಲ್ ಅರ್ಧಶತಕದ ನೆರವಿನಿಂದ ಭಾರತದ ತಂಡ ಜಯಭೇರಿ ಬಾರಿಸಿತ್ತು.
ಆದರೆ ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಗೆ ಈ ಗೆಲುವು ಸಂತೋಷ ತಂದಿಲ್ಲ. ದಾಖಲೆಯ ಚೇಸಿಂಗ್ ಮಾಡಿ ಗೆದ್ದರೂ ಯುವಿ ಟೀಂ ಇಂಡಿಯಾ ವಿರುದ್ದ ಕಿಡಿಕಾರಿದ್ದಾರೆ.
ಯುವಿ ಟೀಕೆಗೆ ಕಾರಣ ಮೊದಲ ಟಿ ಟ್ವೆಂಟಿಯಲ್ಲಿ ಭಾರತದ ಕಳಪೆ ಫೀಲ್ಡಿಂಗ್. ಹೌದು ಹೈದರಾಬಾದ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 207 ರನ್ ಗಳ ಬೃಹತ್ ಮೊತ್ತ ಪೇರಿಸಲು ಭಾರತದ ಕಳಪೆ ಕ್ಷೇತ್ರ ರಕ್ಷಣೆ ಕೂಡಾ ಕಾರಣವಾಗಿತ್ತು.
ರೋಹಿತ್ ಶರ್ಮಾ ಮತ್ತು ವಾಶಿಂಗ್ಟನ್ ಸುಂದರ್ ತಲಾ ಎರಡು ಕ್ಯಾಚ್ ಗಳನ್ನು ಕೈಚೆಲ್ಲಿದ್ದರು. ನಾಯಕ ವಿರಾಟ್ ಕೊಹ್ಲಿಯ ಕ್ಷೇತ್ರ ರಕ್ಷಣೆ ಕೂಡಾ ಕಳಪೆಯಾಗಿತ್ತು.
ಈ ಬಗ್ಗೆ ಟ್ವಿಟ್ ಮಾಡಿರುವ ಯುವರಾಜ್ ಸಿಂಗ್, ಇದು ಟೀಂ ಇಂಡಿಯಾದ ಕಳಪೆ ಕ್ಷೇತ್ರ ರಕ್ಷಣೆ. ಯುವಕರು ಬಾಲ್ ಗೆ ಸ್ವಲ್ಪ ತಡವಾಗಿ ಪ್ರತಿಕ್ರಯಿಸುತ್ತಿದ್ದಾರೆ. ಕ್ರಿಕೆಟ್ ಪಂದ್ಯಗಳ ಸಂಖ್ಯೆ ಹೆಚ್ಚಾಯಿತೇ? ಎಂದು ಬರೆದುಕೊಂಡಿದ್ದಾರೆ.
India very poor on the field today ! Young guns reacting a bit late on the ball! Too much cricket ? ? Let’s get these runs come on lads
— yuvraj singh (@YUVSTRONG12) December 6, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.