ನಗರಸಭೆ ಆಯುಕ್ತರ ಮುಂದೆ ಸಮಸ್ಯೆಗಳ ಅನಾವರಣ


Team Udayavani, Dec 8, 2019, 3:00 AM IST

nagarasabhe

ಹಾಸನ: ನಗರಸಭೆಯ 2020-21ನೇ ಸಾಲಿನ ಆಯವ್ಯಯ ರೂಪಿಸಲು ನಗರಸಭೆಯ ಕುವೆಂಪು ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮೊದಲ ಸುತ್ತಿನ ಸಾರ್ವಜನಿಕ ಸಮಾಲೋಚನೆ ಸಭೆಯಲ್ಲಿ ನಾಗರಿಕರು ನಗರದ ಸಮಸ್ಯೆಗಳನ್ನು ಅನಾವರಣಗೊಳಿಸಿದರು.

ನಗರಸಭೆ ಆಯುಕ್ತ ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ 1ನೇ ವಾರ್ಡ್‌ನಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದರೂ ನಗರಸಭೆ ಸಿಬ್ಬಂದಿ ಮೂಕ ಪ್ರೇಕ್ಷಕರಂತೆ ತಿರುಗುತ್ತಾರೆ. ಮಾಹಿತಿ ನೀಡಿದರೂ ಸ್ಪಂದಿಸುವುದಿಲ್ಲ. ವಿದ್ಯುತ್‌ ದೀಪಗಳಂತೂ ಹಗಲು ರಾತ್ರಿ ಉರಿಯುತ್ತಲೇ ಇರುತ್ತವೆ. ರಸ್ತೆ ಬದಿಯಲ್ಲಿ ಕಸದ ರಾಶಿಗೆ ಬೆಂಕಿ ಹಚ್ಚುವ ಚಾಳಿಯನ್ನು ಬಿಡಿಸಿ ಎಂದು ಸಮಾಜ ಸೇವಕ ರಾಜೀವೇಗೌಡ ಅವರು ಗಮನ ಸೆಳೆದರು.

ಆಯುಕ್ತರ ಭರವಸೆ: ಈ ದೂರಿಗೆ ಪ್ರತಿಕ್ರಿಯಿಸಿದ ನಗರಸಭೆ ಆಯುಕ್ತ ಕೃಷ್ಣಮೂರ್ತಿ ಅವರು ಬೀದಿ ದೀಪ ನಿರ್ವಹಣೆ ನಗರಸಭೆ ವ್ಯಾಪ್ತಿಗೆ ಬರುವುದಿಲ್ಲ. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದವರು ನಿರ್ವಹಣೆ ಮಾಡುತ್ತಾರೆ. ಹಬ್ಬ-ಹರಿದಿನಗಳಲ್ಲಿ ವ್ಯಾಪಾರ ಮಾಡುವ ಬಗ್ಗೆ ವ್ಯಾಪಾರಿಗಳು ಕೆಲವು ಸಲಹೆ ನೀಡಿದ್ದಾರೆ. ಬೀದಿ ಬದಿ ವ್ಯಾಪಾರಸ್ಥರ ಕಾಯಿದೆ ಜಾರಿಗೆ ಬಂದಿದ್ದು, ಎಲ್ಲಿ ಟ್ರಾಫಿಕ್‌ ಸಮಸ್ಯೆ ಇದೆ ಎಂಬುದನ್ನು ನೋಡಿ ವ್ಯಾಪಾರಿಗಳಿಗೆ ಸೂಕ್ತ ಜಾಗ ಕಲ್ಪಿಸಲಾಗುವುದು ಎಂದರು.

ಸ್ಕೈವಾಕ್‌ ನಿರ್ಮಿಸಿ: ನಗರದ ಎನ್‌.ಆರ್‌. ವೃತ್ತದಲ್ಲಿ ಪಾದಚಾರಿಗಳು ರಸ್ತೆ ದಾಟುವುದೇ ಕಷ್ಟ. ಸ್ಕೈವಾಕ್‌ ನಿರ್ಮಿಸಲು ನಗರಸಭೆ ಕ್ರಮ ಕೈಗೊಳ್ಳಬೇಕು. ಕಸ್ತೂರ ಬಾ ರಸ್ತೆಯಲ್ಲಿ ಹೂವನ್ನು ಮಾರಾಟ ಮಾಡುವವರಿಗೆ ಶಾಶ್ವತ ಜಾಗ ಕಲ್ಪಿಸಿಕೊಡಬೇಕು. ನೀರುಗಂಟಿಗಳಿಗೆ ರಾತ್ರಿ ಸಮಯದಲ್ಲಿ ನೀರು ಹರಿಸಲು ಟಾರ್ಚ್‌ ಕೊಡುವ ವ್ಯವಸ್ಥೆ ಮಾಡಿ ಎಂದು ಮನೋಹರ್‌ ಎಂಬವರು ನಗರಸಭೆ ಆಯುಕ್ತರ ಗಮನಸೆಳೆದರು.

ನಗರಸಭೆ ಎರಡನೇ ವಾರ್ಡ್‌ ಸದಸ್ಯ ಮಂಜುನಾಥ್‌ ಮಾತನಾಡಿ, ನಿನ್ನೆ ಅಂಬೇಡ್ಕರ್‌ ಪುಣ್ಯ ತಿಥಿ ಕಾರ್ಯಕ್ರಮ ನಡೆದಿದೆ. ನಗರಸಭೆಯಲ್ಲಿರುವ ಅಂಬೇಡ್ಕರ್‌ ಭಾವಚಿತ್ರಕ್ಕೆ ಒಂದು ಹಾರ ಹಾಕುವ ಸೌಜನ್ಯವನ್ನೂ ನಗರಸಭೆ ಸಿಬ್ಬಂದಿ ತೋರಿಲ್ಲ ಎಂದು ವಿಷಾದಿಸಿದರು.

ಎಸ್ಸಿ,ಎಸ್ಟಿ ಅನುದಾನ ನೀಡಿ: ಪರಿಶಿಷ್ಟ ಜಾತಿ, ಪಂಗಡದವರಿಗೆ ನಿಗದಿಯಾಗಿರುವ ಅನುದಾನವನ್ನು ನಗರಸಭೆ ಎಲ್ಲಾ 35 ವಾರ್ಡುಗಳಿಗೂ ಸಮಾನವಾಗಿ ಹಂಚಿ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.ಈ ಬಗ್ಗೆ ಪ್ರತಿಕ್ರಿಯಿಸಿದ ನಗರಸಭೆ ಆಯುಕ್ತರು, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣ ಕಾರ್ಯಕ್ರಮಕ್ಕೆ ಕಳೆದ ವರ್ಷ 1.39 ಕೋಟಿ ರೂ. ಇಲ್ಲಿವರೆಗೂ 40 ಲಕ್ಷ ರೂ.ಖರ್ಚಾಗಿದೆ. ಮತ್ತೆ 42 ಲಕ್ಷ ರೂ.ಗಳನ್ನು ಸಮಾಜ ಕಲ್ಯಾಣ ಇಲಾಖೆಗೆ ಕೊಡಲಾಗುತ್ತಿದೆ. ಎಲ್ಲಾ ಕಾಮಗಾರಿಗಳು ನಡೆಯುತ್ತಿದೆ ಎಂದು ವಿವರ ನೀಡಿದರು.

ಬಜೆಟ್‌ ಪಾರದರ್ಶಕವಾಗಿರಲಿ: 2020-21ನೇ ಸಾಲಿನ ನಗರಸಭೆ ಬಜೆಟ್‌ ಪಾರದರ್ಶಕವಾಗಿರಲಿ, ಮೌಲ್ಯಾಧರಿತವಾಗಿರಲಿ. ಹಾಸನ ನಗರ ಬೆಳೆಯುತ್ತಿದೆ. ಮಹಾನಗರ ಪಾಲಿಕೆಯಾಗುವ ಅರ್ಹತೆ ಪಡೆದಿದೆ. ನಗರದ 35 ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳಿಲ್ಲ. ಬಿ.ಎಂ. ರಸ್ತೆ ಉದ್ದಕ್ಕೂ ಮದ್ಯದ ಅಂಗಡಿಗಳಿವೆ. ಸಂಜೆ ವೇಳೆ ತಿರುಗಾಡುವುದೇ ಕಷ್ಟವಾಗಿದೆ.

ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿ ಮಕ್ಕಳನ್ನು ಕಚ್ಚುತ್ತಿವೆ. ಕೆಲವು ಕಡೆ ಹಂದಿ ಕಾಟದಿಂದ ದಿನನಿತ್ಯ ಹೆದರುತ್ತಾ ತಿರುಗಾಡಬೇಕಾಗಿದೆ ಎಂದು ಸ್ವಾತಂತ್ರ ಹೋರಾಟಗಾರ ಎಚ್‌.ಎಂ. ಶಿವಣ್ಣ ಆತಂಕ ವ್ಯಕ್ತಪಡಿಸಿದರು. ಹೀಗೆ ಹಲವು ಸಮಸ್ಯೆಗಳನ್ನು ಸಭೆಯಲ್ಲಿ ನಾಗರಿಕರು ನಗರಸಭೆ ಆಯುಕ್ತರ ಮುಂದಿಟ್ಟು ಬಜೆಟ್‌ ರೂಪಿಸುವಾಗ ನಮ್ಮ ಸಲಹೆಗಳನ್ನು ಪರಿಗಣಿಸಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.