ರೋಗಿಗಳಿಗೆ ಕ್ಯಾನ್ಸರ್ ಭಯತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವೈದ್ಯ ಮಹಾಶಯ!


Team Udayavani, Dec 11, 2019, 12:41 PM IST

Bad-Doctor-11-12

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಂಡನ್: ವೈದ್ಯರ ಬಳಿಯಲ್ಲಿ ಹಾಗೂ ವಕೀಲರ ಬಳಿಯಲ್ಲಿ ನಾವು ಯಾವುದೇ ವಿಷಯಗಳನ್ನು ಮುಚ್ಚಿಡಬಾರದು ಎಂಬ ಮಾತೊಂದಿದೆ. ಹಾಗಾಗಿಯೇ ರೋಗಿಗಳು ತಾವು ವೈದ್ಯರಲ್ಲಿಗೆ ಹೋದಾಗ ಎಲ್ಲಾ ವಿಚಾರಗಳನ್ನು ಅವರಿಗೆ ತಿಳಿಸುತ್ತಾರೆ ಮತ್ತು ಅವರು ಮಾಡುವ ಎಲ್ಲಾ ಪರೀಕ್ಷೆಗಳಿಗೂ ಸಮ್ಮತಿಯನ್ನು ಸೂಚಿಸುತ್ತಾರೆ.

ಆದರೆ ಇಲ್ಲೊಬ್ಬ ವೈದ್ಯ ತನ್ನ ಬಳಿಗೆ ಬರುತ್ತಿದ್ದ ರೋಗಿಗಳ ಇದೇ ಮನಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅವರಿಗೆ ಲೈಂಗಿಕ ಕಿರುಕುಳ ನೀಡಿ ಇದೀಗ ವಿಚಾರಣೆಯನ್ನು ಎದುರಿಸುತ್ತಿರುವ ಘಟನೆ ಇಂಗ್ಲಂಡ್ ದೇಶದಲ್ಲಿ ನಡೆದಿದೆ. ಆದರೆ ವಿಚಿತ್ರವೆಂದರೆ ಇಂಗ್ಲಂಡ್ ನಲ್ಲಿ ಈ ರೀತಿಯ ಕೃತ್ಯ ಎಸಗಿರುವ ವ್ಯಕ್ತಿ ಭಾರತೀಯ ಮೂಲದವನೆಂಬುದೇ ಖೇದಕರ ಸಂಗತಿ.

ಪೂರ್ವ ಲಂಡನ್ ನ ಮೇವ್ನೇ ಮೆಡಿಕಲ್ ಸೆಂಟರ್ ನಲ್ಲಿ ವೈದ್ಯಕೀಯ ವೃತ್ತಿಯನ್ನು ನಿರ್ವಹಿಸುತ್ತಿದ್ದ ಮನೀಶ್ ಶಾ ಎಂಬಾತನೇ ತನ್ನಲ್ಲಿಗೆ ಬರುತ್ತಿದ್ದ ಮಹಿಳಾ ರೋಗಿಗಳ ಕ್ಯಾನ್ಸರ್ ಭಯವನ್ನೇ ದುರುಪಯೋಗಪಡಿಸಿಕೊಂಡು ಅವರನ್ನು ಲೈಂಗಿಕ ಕಿರುಕುಳಕ್ಕೊಳಪಡಿಸುತ್ತಿದ್ದ ಎಂದು ಆರೋಪಿಸಲಾಗಿದೆ. 2009 ರಿಂದ 2013ರವರೆಗೆ ಮನೀಶ್ ಶಾ ಸುಮಾರು 23 ಮಹಿಳಾ ರೋಗಿಗಳನ್ನು ಈ ರೀತಿಯಾಗಿ ಲೈಂಗಿಕ ಶೋಷಣೆಗೆ ಒಳಪಡಿಸಿರುವ ಆರೋಪ ಇದೀಗ ಇಲ್ಲಿನ ಓಲ್ಡ್ ಬೈಲೀ ನ್ಯಾಯಾಲಯದಲ್ಲಿ ಸಾಬೀತಾಗಿದೆ.

ತನ್ನಲ್ಲಿಗೆ ತಪಾಸಣೆಗೆಂದು ಬರುತ್ತಿದ್ದ ಮಹಿಳಾ ರೋಗಿಗಳು ತಮ್ಮ ಸ್ತನ ಪರಿಕ್ಷೆಯನ್ನು ನಡೆಸುವಂತೆ ಅವರ ಮನವೊಲಿಸಲು ಶಾ ಹಾಲಿವುಡ್ ನಟಿಯರು ಮ್ಯಾಸ್ಟೆಕ್ಟಮಿ ಮಾಡಿಸಿಕೊಂಡಿರುವ ಸುದ್ದಿಯನ್ನು ಅವರಿಗೆ ವಿವರಿಸಿ ಬಳಿಕ ಅವರ ಸ್ತನ ಪರೀಕ್ಷೆ ನಡೆಸುವ ನೆಪದಲ್ಲಿ ಅವರಿಗೆ ಕಿರುಕುಳ ನೀಡುತ್ತಿದ್ದ ಎಂಬ ವಿಚಾರವೂ ಸಹ ನ್ಯಾಯಾಲಯದಲ್ಲಿ ವಿಚಾರಣೆಯ ವೇಳೆ ಬಹಿರಂಗಗೊಂಡಿದೆ.

ಇದೇ ರೀತಿಯಲ್ಲಿ ಮಹಿಳೆಯರ ಗುಪ್ತಾಂಗ ಪರೀಕ್ಷೆಯ ನೆಪದಲ್ಲಿಯೂ ಸಹ ಮನೀಶ್ ಶಾ ಇದೇ ರೀತಿಯ ತಂತ್ರವನ್ನು ಬಳಸುತ್ತಿದ್ದ ಅಂಶವೂ ವಿಚಾರಣೆಯ ಸಂದರ್ಭದಲ್ಲಿ ಹೊರಬಿದ್ದಿದೆ. ಅಗತ್ಯವಿಲ್ಲದಿದ್ದರೂ ಮನೀಶ್ ಶಾ ತನ್ನ ವೃತ್ತಿಯ ಲಾಭವನ್ನು ಪಡೆದುಕೊಂಡು ತನ್ನಲ್ಲಿಗೆ ಬರುತ್ತಿದ್ದ ಮಹಿಳಾ ರೋಗಿಗಳ ಸ್ತನ, ಗುಪ್ತಾಂಗ ಮತ್ತು ಗುದದ್ವಾರ ಪರೀಕ್ಷೆಗಳನ್ನು ನಡೆಸುವ ನೆಪದಲ್ಲಿ ಅವರೊಂದಿಗೆ ಲೈಂಗಿಕವಾಗಿ ಅನುಚಿತ ರೀತಿಯಲ್ಲಿ ವರ್ತಿಸುತ್ತಿದ್ದ ಎಂದು ದೂರುದಾರರ ಪರ ವಕೀಲ ಕೇಟ್ ಬೆಕ್ಸ್ ನ್ಯಾಯಾಲಯದಲ್ಲಿ ತಮ್ಮ ವಾದ ಮಂಡನೆಯಲ್ಲಿ ಹೇಳಿಕೊಂಡಿದ್ದಾರೆ.

ಆದರೆ ತನ್ನ ಮೇಲಿನ ಈ ಎಲ್ಲಾ ಆರೋಪಗಳನ್ನು ವೈದ್ಯ ಮನೀಶ್ ಶಾ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಮನೀಶ್ ಶಾ ಅವರು ವೈದ್ಯಕೀಯ ವೃತ್ತಿಯನ್ನು ಮುಂದುವರಿಸದಂತೆ ಅವರ ಮೇಲೆ 2013ರಲ್ಲೇ ನಿರ್ಬಂಧ ವಿಧಿಸಲಾಗಿತ್ತು. ನ್ಯಾಯಾಧೀಶ ಆ್ಯನ್ನೆ ಮೊಲಿನೆಕ್ಸ್ ಅವರು ವಿಚಾರಣೆಯ ತೀರ್ಪನ್ನು 2020ರ ಫೆಬ್ರವರಿ 07ಕ್ಕೆ ಕಾಯ್ದಿರಿಸಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.