![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 11, 2019, 8:05 PM IST
ಹೊಸದಿಲ್ಲಿ: ಕಳೆದ ಕೆಲವು ತಿಂಗಳಿನಿಂದ ಆರ್ಥಿಕ ವಲಯದಲ್ಲಾಗುತ್ತಿರುವ ಏರಿಳಿತ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಹಿಂಜರಿತದ ಬಿಸಿ ದೇಶದ ವಾಹನೋದ್ಯಮಕ್ಕೆ ತುಸು ಹೆಚ್ಚಾಗಿಯೇ ತಗ್ಗಿದ್ದು, ದಿನದಿಂದ ದಿನಕ್ಕೆ ಆಟೋ ಮೊಬೈಲ್ ಕ್ಷೇತ್ರ ಕುಸಿತ ಕಾಣುತ್ತಿದೆ.
ಆದರೆ ಬೆಳವಣಿಗೆ ಕುಂಠಿತವಾಗುತ್ತಿರುವ ಸಂದರ್ಭದಲ್ಲಿ ಹಲವಾರು ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳು ಬೆಲೆ ಹೆಚ್ಚಳ ನಿರ್ಧಾರ ಕೈಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ವ್ಯಾಪಾರ ವಹಿವಾಟು ಚಟುವಟಿಕೆಗಳನ್ನು ಹೆಚ್ಚಿಸುವ ನಿರೀಕ್ಷೆಯನ್ನಿಟ್ಟುಕೊಂಡಿವೆ.
ಹಿನ್ನಡೆ ಅನುಭವಿಸಿರುವ ಕಾರಣ ನೀಡಿ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳು ಜನವರಿಯಿಂದ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದು, ದೇಶದ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆ ಮಾರುತಿ ಸುಜುಕಿ ಈಗಾಗಲೇ ಜನವರಿಯಿಂದ ಬೆಲೆ ಹೆಚ್ಚಳ ಮಾಡುವುದಾಗಿ ಘೊಷಿಸಿದೆ.
ಈ ಕಾರುಗಳ ಬೆಲೆಯಲ್ಲಿಯೂ ಹೆಚ್ಚಳ
ಮಾರುತಿ ಸುಜುಕಿ ಬೆಲೆ ಹೆಚ್ಚಳ ಯೋಜನೆ ಕುರಿತು ಘೋಷಣೆ ಮಾಡಿದ ಬೆನ್ನಲ್ಲೇ ಮತ್ತಷ್ಟು ಕಾರು ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಹೆಚ್ಚಳ ಮಾಡುವುದಾಗಿ ತಿಳಿಸಿವೆ. ನಿಸಾನ್ ಮೋಟಾರ್ನ ದೇಶಿಯ ಕಾರುಗಳ ಬೆಲೆಯಲ್ಲಿ ಜನವರಿಯಿಂದ ಶೇ.5ರಷ್ಟು ಅಧಿಕವಾಗಲಿದ್ದು, ಉತ್ಪಾದನೆಯ ವೆಚ್ಚವನ್ನು ಸರಿದೂಗಿಸಲು ಬೆಲೆ ಹೆಚ್ಚಳಕ್ಕೆ ಮುಂದಾಗಿರುವುದಾಗಿ ನಿಸಾನ್ ಹೇಳಿದೆ.
ಟಾಟಾ ಮೋಟಾರ್ಸ್ ಹಾಗೂ ಹ್ಯುಂಡೈ
ಇದರ ಜತೆಯಲ್ಲಿ ಟಾಟಾ ಮೋಟಾರ್ಸ್ ಹಾಗೂ ಹ್ಯುಂಡೈ ಕಾರುಗಳ ದರದಲ್ಲಿಯೂ ಏರಿಕೆಯಾಗಲಿದ್ದು, ನಷ್ಟವನ್ನು ಸರಿದೂಗಿಸುವ ಹಾಗೂ ಉತ್ಪಾದನಾ ವೆಚ್ಚವನ್ನು ಸಮದೂಗಿಸಲು ಈ ಎಲ್ಲಾ ಕಾರು ಉತ್ಪಾದಕ ಕಂಪನಿಗಳು ಬೆಲೆ ಏರಿಕೆಯ ನೀತಿಯನ್ನು ಅನುಸರಿಸುತ್ತಿವೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.