ಚೈನಾ, ಜಪಾನ್‌ ಭಾಷೆಯಲ್ಲೂ ನಿಲ್ದಾಣ!

ಚಿತ್ರತಂಡದ ಮೊಗದಲ್ಲಿ ನಗು

Team Udayavani, Dec 13, 2019, 6:00 AM IST

sa-16

ಕನ್ನಡ ಚಿತ್ರಗಳು ವಿದೇಶದಲ್ಲಿ ಬಿಡುಗಡೆಯಾಗುವುದೇ ಸಂತಸದ ಸುದ್ದಿ. ಅದರಲ್ಲೂ ಅಲ್ಲಿನ ಕನ್ನಡಿಗರು ಮೆಚ್ಚಿಕೊಂಡರೆ ಅದಕ್ಕಿಂತ ಖುಷಿಯ ಸಂಗತಿ ಮತ್ತೂಂದಿಲ್ಲ. ಈಗ ಕನ್ನಡದ ಚಿತ್ರವೊಂದು ವಿದೇಶದಲ್ಲಿ ಬಿಡುಗಡೆಯಾಗುವುದರ ಜೊತೆಯಲ್ಲಿ ಆ ದೇಶಗಳ ಭಾಷೆಯಲ್ಲಿ ಡಬ್‌ ಆಗಿ ರಿಲೀಸ್‌ ಆಗುತ್ತಿದೆ ಅನ್ನೋದು ವಿಶೇಷ. ಹೌದು, ಈಗಾಗಲೇ ತಮಿಳು, ತೆಲುಗು, ಹಿಂದಿ ಸಿನಿಮಾಗಳು ವಿದೇಶಗಳಲ್ಲಿನ ಆಯಾ ಭಾಷೆಯಲ್ಲಿ ಬಿಡುಗಡೆ ಆಗಿದ್ದು ಗೊತ್ತೇ ಇದೆ. ಈಗ ಕನ್ನಡದ “ಮುಂದಿನ ನಿಲ್ದಾಣ’ ಚಿತ್ರಕ್ಕೆ ಚೈನಾ ಹಾಗೂ ಜಪಾನ್‌ ಭಾಷೆಯಲ್ಲಿ ಡಬ್‌ ಮಾಡಿ ಬಿಡುಗಡೆ ಮಾಡುವಂತೆ ಬೇಡಿಕೆ ಬಂದಿದೆ. ಈ ಕುರಿತು ಸ್ವತಃ ನಿರ್ಮಾಪಕ ಮುರಳಿ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾಗಿರುವ “ಮುಂದಿನ ನಿಲ್ದಾಣ’ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದೆ. ಆ ಕುರಿತು ಹೇಳಿಕೊಂಡ, ನಿರ್ಮಾಪಕರು, “ಈ ರಂಗ ನಮಗೆ ಹೊಸದು. ಆರಂಭದಲ್ಲಿ ಸ್ವಲ್ಪ ಭಯ ಇತ್ತು. ಚಿತ್ರವನ್ನು ಜನ ಹೇಗೆ ಸ್ವೀಕರಿಸುತ್ತಾರೋ ಏನೋ ಅಂತ. ಆದರೆ, ಈಗ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ನಮ್ಮಲ್ಲಿ ಮತ್ತಷ್ಟು ಉತ್ಸಾಹ ತುಂಬಿ, ಇನ್ನೊಂದು ಚಿತ್ರ ಮಾಡುವ ಯೋಚನೆ ಬಂದಿದೆ. ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು, ಅಮೆರಿಕ, ಯುರೋಪ್‌ ದೇಶಗಳಲ್ಲಿ ಹೌಸ್‌ ಫ‌ುಲ್‌ ಪ್ರದರ್ಶನ ಕಂಡಿದೆ’ಎಂದು ವಿವರಿಸುತ್ತಾರೆ ನಿರ್ಮಾಪಕರು.

ಇನ್ನು, ನಿರ್ದೇಶಕ ವಿನಯ್‌ ಭಾರದ್ವಜ್‌ ಅವರಿಗೆ ಸಹಜವಾಗಿಯೇ ಖುಷಿ ಕೊಟ್ಟಿದೆ. “ಚಿತ್ರ ನೋಡಿದವರೆಲ್ಲರೂ ಚಿತ್ರದ ಬಗ್ಗೆ ಒಳ್ಳೆಯ ಮಾತು ಹೇಳುತ್ತಿರುವುದರಿಂದ ಚಿತ್ರ ನೋಡುಗರ ಸಂಖ್ಯೆ ಏರಿಕೆಯಾಗಿದೆ. ಇದು ಹೀಗೆ ಮುಂದುವರೆದರೆ ಎರಡನೆ ವಾರಕ್ಕೆ ಹಾಕಿದ ಬಂಡವಾಳ ಹಿಂದಿರುಗಬಹುದು’ ಎಂಬುದು ನಿರ್ದೇಶಕ ವಿನಯ್‌ಭಾರದ್ವಾಜ್‌ ಮಾತು.

ನಾಯಕ ಪ್ರವೀಣ್‌ ತೇಜ್‌ ಅವರ ಮೊಗದಲ್ಲಿ ಮಂದಹಾಸ ಮೂಡಿದ್ದು, “ಚಿತ್ರ ಮೆಚ್ಚುಗೆ ಪಡೆದಿದೆ ಅಂದರೆ, ಅದಕ್ಕೆ ಕಾರಣ, ಚಿತ್ರತಂಡ, ಪ್ರೇಕ್ಷಕರು, ಮಾದ್ಯಮ, ತಂತ್ರಜ್ಞರು ಹಾಗು ಕಲಾವಿದರ ಸಹಕಾರ, ನಿರ್ಮಾಪಕರ ಪ್ರೋತ್ಸಾಹ, ನಿರ್ದೇಶಕರ ಶ್ರಮ ಕಾರಣ’ ಎಂದರು ಪ್ರವೀಣ್‌.

ನಾಯಕಿ ರಾಧಿಕಾ ನಾರಾಯಣ್‌ ಅವರಿಗೆ, “ಒಳ್ಳೆಯ ಚಿತ್ರವನ್ನು ಕನ್ನಡಿಗರು ಎಂದೂ ಕೈ ಬಿಟ್ಟಿಲ್ಲ ಎಂಬ ನಂಬಿಕೆ ನಿಜವಾಗಿದೆಯಂತೆ. ಅನನ್ಯಾ ಅವರಿಗೆ ಒಳ್ಳೆಯ ಚಿತ್ರದಲ್ಲಿ ನಟಿಸಿದ್ದು ಖುಷಿ ಕೊಟ್ಟಿದೆಯಂತೆ. ಜನರು ಪ್ರೋತ್ಸಾಹಿಸಿದ್ದರಿಂದ ಸಿನಿಮಾಗೆ ಎಲ್ಲೆಡೆಯಿಂದ ಮೆಚ್ಚುಗೆ ಸಿಗುತ್ತಿದೆ’ ಎಂದರು ಅನನ್ಯಾ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.