![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 15, 2019, 3:00 AM IST
ಮೈಸೂರು: ಪೊಲೀಸರು ಒಳ್ಳೆಯವರ ಜೊತೆ ಒಳ್ಳೆಯವರಾಗಿ ಹಾಗೂ ಕೆಟ್ಟವರ ಜೊತೆ ಕೂಡ ಒಳ್ಳೆಯವರಾಗಿ ಅವರನ್ನು ಸರಿಯಾದ ದಾರಿಗೆ ತರುವಂತೆ ಮಾಡುವುದು ಜನಸ್ನೇಹಿ ಪೊಲೀಸ್ ಎಂದು ದಕ್ಷಿಣ ವಲಯ ಪೊಲೀಸ್ ಮಹಾ ನಿರ್ದೇಶಕ ವಿಪುಲ್ ಕುಮಾರ್ ಹೇಳಿದರು.
ಮೈಸೂರಿನ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಶನಿವಾರ ಜನಸ್ನೇಹಿ ಪೊಲೀಸ್ ಕುರಿತು ವಲಯದ ಎಲ್ಲಾ ಪೊಲೀಸ್ ಅಧೀಕ್ಷಕರಿಗೆ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆಯ ನಮೆಲ್ಲರ ಕನಸು ಪೊಲೀಸರು ಜನಸ್ನೇಹಿಯಾಗುವುದು ಎಂದು ಹೇಳಿದರು.
ಜನರ ಧ್ವನಿಯಾಗುವುದು: ಪೊಲೀಸರು ಜನಸ್ನೇಹಿಯಾಗಲು ಪ್ರಮುಖವಾಗಿ ಗೌರವಯುತ ನಡತೆ, ವಿಶ್ವಾಸಾರ್ಹರಾಗುವುದು ಹಾಗೂ ಜನರ ಧ್ವನಿಯಾಗುವುದು. ಈ ಮೂರು ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಜನ ಸಾಮಾನ್ಯರು ನಮ್ಮ ಬಳಿ ಬಂದಾಗ ನಮ್ಮ ಮೊದಲ ನೋಟ ಹೇಗಿರಬೇಕು ಎಂಬುದರ ಮೇಲೆ ವಿಶ್ವಾಸಾರ್ಹತೆ ನಿಂತಿದೆ. ಸಾರ್ವಜನಿಕರನ್ನು ನಾವು ಹೇಗೆ ಘನತೆ, ಗೌರವದಿಂದ ನೋಡುತ್ತೇವೆ ಎನ್ನುವುದು ಮುಖ್ಯ ಎಂದರು.
ಆತ್ಮಸ್ಥೈರ್ಯ ತುಂಬಿ: ನೊಂದವರು ದೂರು ನೀಡಲು ಠಾಣೆಗೆ ಬಂದಾಗ ಅವರ ನೈತಿಕ ಬಲವನ್ನು ಕುಗ್ಗಿಸುವ ಕೆಲಸವನ್ನು ಪೊಲೀಸರು ಮಾಡಬಾರದು. ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಠಾಣೆ ಬಂದ ದೂರುದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ದಿನದಿಂದ ದಿನಕ್ಕೆ ಪೊಲೀಸ್ ಠಾಣೆಗಳು ಕೂಡ ಆಧುನೀಕತೆ ಮೈಗೂಡಿಸಿಕೊಂಡು ಮೇಲ್ದರ್ಜೆಗೇರುತ್ತಿವೆ. ಮೊದಲೆಲ್ಲಾ ಠಾಣೆಗಳಲ್ಲಿ ಸ್ವಾಗತಕಾರರು ಇರಲಿಲ್ಲ. ಈಗ ಸ್ವಾಗತಕಾರರನ್ನು ನೇಮಿಸಲಾಗಿದ್ದು, ಅವರು ದೂರು ನೀಡಲು ಬಂದವರಿಗೆ ಸೂಕ್ತ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.
ಸಾರ್ವಜನಿಕರ ಸಹಕಾರ ಮುಖ್ಯ: ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಅಪರಾಧ ತಡೆಗಟ್ಟಲು ಸಾಧ್ಯ. ಈ ನಿಟ್ಟಿನಲ್ಲಿ ನಾವು ಸಾಮಾನ್ಯ ಜನರನ್ನು ಮಾನವೀಯತೆ ದೃಷ್ಟಿಯಿಂದ ನೋಡಿ, ಅವರಿಗೆ ಗೌರವ ನೀಡಬೇಕು. ಪೊಲೀಸರು ನಂಬಿಕಸ್ಥರಾಗಿರಬೇಕು. ಜಗತ್ತಿನಲ್ಲಿ ಬಹಳಷ್ಟು ಜನ ನಮ್ಮ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿರುವುದಿಲ್ಲ. ಜನರು ನಮ್ಮ ಮೇಲೆ ವಿಶ್ವಾಸ ಹೊಂದುವಷ್ಟರ ಮಟ್ಟಿಗೆ ನಾವಿನ್ನು ಬೆಳೆದಿಲ್ಲ. ಆ ನಂಬಿಕೆಯ ಹಂತವನ್ನು ನಾವು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಹೇಳಿದರು.
ಪೊಲೀಸರು ಜನರ ಧ್ವನಿಯಾಗಬೇಕು. ಜನರ ಮಾತನ್ನು ಕೇಳಿಸಿಕೊಳ್ಳಬೇಕು. ಒಳ್ಳೆಯವರನ್ನು ರಕ್ಷಿಸಬೇಕು. ಕಾನೂನು ಉಲ್ಲಂ ಸುವವರಿಗೆ ಕಾನೂನಿನ ಬಿಸಿ ಮುಟ್ಟಿಸಬೇಕು ಎಂದರು. ತಪ್ಪಿತಸ್ಥರಿಗೆ ಶಿಕ್ಷೆ ಕೊಡುವುದು ನ್ಯಾಯಾಲಯದ ಕೆಲಸ. ಶಿಕ್ಷೆ ಕೊಡಲು ನ್ಯಾಯಾಲಯಕ್ಕೆ ಬೇಕಾದ ಪ್ರಕ್ರಿಯೆಗಳಿಗೆ ನ್ಯಾಯ ಕೊಡುವುದು ಪೊಲೀಸರ ಕೆಲಸ ಎಂದು ಹೇಳಿದರು. ಮೈಸೂರು ಎಸ್.ಪಿ. ಸಿ.ಬಿ.ರಿಷ್ಯಂತ್, ಹಾಸನ ಎಸ್.ಪಿ.ರಾಮ್ ನಿವಾಸ್ ಸಪಟ್, ಕೊಡಗು ಎಸ್.ಪಿ.ಸುಮನ್ ಡಿ. ಪನ್ನೇಕರ್, ಮಂಡ್ಯ ಎಸ್.ಪಿ. ಪರಶುರಾಮ, ಚಾಮರಾಜನಗರ ಎ.ಎಸ್.ಪಿ.ಅನಿತಾ ಸೇರಿದಂತೆ ದಕ್ಷಿಣ ವಲಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.