Easy ಪಾಲಿಸಿ


Team Udayavani, Dec 16, 2019, 6:07 AM IST

easy-poli

ಉಳಿದ ಯೋಜನೆಗಳಲ್ಲಿ ಪಾಲಿಸಿಯ ಅವಧಿ ಹೆಚ್ಚಾದಂತೆ ಕಟ್ಟಬಹುದಾದ ಕಂತಿನ ಮೊತ್ತ ಕಡಿಮೆಯಾಗುತ್ತಾ ಹೋಗುತ್ತದೆ. ಆದರೆ, ಟರ್ಮ್ ಇನ್ಷೊರನ್ಸ್‌ನಲ್ಲಿ ಇದು ತದ್ವಿರುದ್ದ. ಅದೇ ಕಾರಣಕ್ಕೆ ತುಂಬಾ ಜನ ಅಲ್ಪಾವಧಿಯ ಟರ್ಮ್ ಇನ್ಷೊರೆನ್ಸ್ ಖರೀದಿಸಿಬಿಡುತ್ತಾರೆ.

ಟರ್ಮ್ ಇನ್ಷೊರೆನ್ಸ್ ಎನ್ನುವುದು, ವಿಮಾ ಯೋಜನೆಗಳ ಪೈಕಿ ಅತ್ಯಂತ ಮಹತ್ವದ ಯೋಜನೆಗಳಲ್ಲೊಂದು. ವ್ಯಕ್ತಿಯೊಬ್ಬನ ಆಕಸ್ಮಿಕ ಮರಣದ ಕಾಲಕ್ಕೆ ಆತನ ಕುಟುಂಬಕ್ಕೆ ಆರ್ಥಿಕವಾಗಿ ಸಾಕಷ್ಟು ದೊಡ್ಡಮಟ್ಟಿಗಿನ ಲಾಭವಾಗುವ ಈ ಯೋಜನೆಯಲ್ಲಿ ಪ್ರೀಮಿಯಂ ಬಹಳ ಕಡಿಮೆ. ವಿಮೆಯ ಪರಿಕಲ್ಪನೆಯೆನ್ನುವುದು ಶುರುವಾದ ಕಾಲಕ್ಕೆ ಆರಂಭವಾದ ಆರಂಭಿಕ ವಿಮಾ ಯೋಜನೆಗಳ ಪೈಕಿಗಳಲ್ಲೊಂದು, ಟರ್ಮ್ ಇನ್ಷೊರೆನ್ಸ್. ವಿಮೆ ರಕ್ಷೆ ಪಡೆದುಕೊಂಡ ಕಾಲಾವಧಿಯಲ್ಲಿ ವಿಮಾದಾರರ ಮೃತ್ಯು ಸಂಭವಿಸದಿದ್ದರೆ ಕಟ್ಟಿದ ಪ್ರೀಮಿಯಂ ಹಣ ಮರಳಿಬಾರದೆನ್ನುವ ಕಾರಣಕ್ಕೆ ತುಂಬ ಜನ ಟರ್ಮ್ ಇನ್ಷೊರೆನ್ಸ್ ಖರೀದಿಸಲು ಹಿಂದೇಟು ಹಾಕುತ್ತಾರೆ.

ಆದರೂ, ವ್ಯಕ್ತಿಯೊಬ್ಬನ ಕಾಲಾನಂತರ, ಅವನ ಅಕಾಲಿಕ ಗೈರುಹಾಜರಿಯಲ್ಲಿ ಆತನ ಕುಟುಂಬದ ಆರ್ಥಿಕ ರಕ್ಷಣೆಯೇ ವಿಮಾ ಯೋಜನೆಯ ಮೂಲ ಉದ್ದೇಶ ಎನ್ನುವುದನ್ನು ಜನ ಮರೆತುಬಿಡುತ್ತಾರೆ. ಕೋಟ್ಯಂತರ ರೂಪಾಯಿಗಳಷ್ಟು ವಿಮಾಯಿತ ಮೊತ್ತಕ್ಕೆ ಕೆಲವೇ ಸಾವಿರಗಳಷ್ಟಿರುವ ಪ್ರೀಮಿಯಂ ಕಂತಿನ ಈ ಯೋಜನೆಗಳು ನಿಜಕ್ಕೂ ಬಹಳ ಪ್ರಯೋಜನಕಾರಿ. ಇಷ್ಟಾಗಿಯೂ, ಇಂಥದ್ದೊಂದು ಯೋಜನೆಯಲ್ಲಿ ಹಣವನ್ನು ಹೂಡುವಾಗ ಕೆಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡರೆ ಒಂದಷ್ಟು ಗೊಂದಲಗಳು ಪರಿಹಾರವಾಗಬಲ್ಲವು.

ಯಾವಾಗ ಖರೀದಿಸಬೇಕು?: ಸಾಮಾನ್ಯವಾಗಿ, ವಿಮೆಯ ಖರೀದಿಯ ಕುರಿತಾಗಿ ಜನರಲ್ಲೊಂದು ತಪ್ಪು ಕಲ್ಪನೆಯಿದೆ. ಆರೋಗ್ಯವಾಗಿರುವಾಗ ಮತ್ತು ಯೌವನದ ವಯಸ್ಸಿಗೆ ವಿಮೆಯ ಖರೀದಿ ಅನವಶ್ಯಕವೆನ್ನುವುದು ಅನೇಕರ ವಾದ. ಆದರೆ, ನಿಮಗೆ ಗೊತ್ತಿರಲಿ; ವಿಮಾ ಯೋಜನೆಗಳಲ್ಲಿ ಪ್ರೀಮಿಯಂ ಎನ್ನುವುದು ವ್ಯಕ್ತಿಯೊಬ್ಬನ ವಯಸ್ಸಿಗೆ ಅನುಗುಣವಾಗಿ ನಿರ್ಧರಿತವಾಗುತ್ತದೆ. ವ್ಯಕ್ತಿಯೊಬ್ಬನ ವಯಸ್ಸು ಹೆಚ್ಚಾದಂತೆ ಕಟ್ಟಬೇಕಾಗಿರುವ ಪ್ರೀಮಿಯಂನ ಕಂತು ಸಹ ಹೆಚ್ಚಾಗುತ್ತದೆ. ಎಲ್ಲ ವಿಮಾ ಯೋಜನೆಗಳಿಗೂ ಈ ನಿಯಮ ಅನ್ವಯವಾಗುತ್ತದಾದರೂ, ಟರ್ಮ್ ಇನ್ಷೊರೆನ್ಸ್‌ನ ಯೋಜನೆಗಳಲ್ಲಿ ಪ್ರೀಮಿಯಮ್ಮಿನ ಬದಲಾವಣೆ ದೊಡ್ಡ ಅನುಪಾತದ್ದು.

ಹಾಗಾಗಿ ಟರ್ಮ್ ಇನ್ಷೊರೆನ್ಸ್ ಖರೀದಿಸುವ ಆಲೋಚನೆಯಿರುವವರು ವೃತ್ತಿಜೀವನ ಆರಂಭವಾದ ತಕ್ಷಣಕ್ಕೆ ಅಥವಾ ವೃತ್ತಿಬದುಕು ಆರಂಭವಾದ ಒಂದೆರಡು ವರ್ಷಗಳಲ್ಲಿ ಖರೀದಿಸಿಬಿಡುವುದು ಒಳ್ಳೆಯದು. ಉಳಿದ ವಿಮಾ ಯೋಜನೆಗಳಿಗಿಂತ ಟರ್ಮ್ ಇನ್ಷೊರೆನ್ಸ್‌ನ ಪ್ರೀಮಿಯಂ ಲೆಕ್ಕಾಚಾರ ಕೊಂಚ ವಿಭಿನ್ನ. ಉಳಿದ ಯೋಜನೆಗಳಲ್ಲಿ ಪಾಲಿಸಿಯ ಅವಧಿ ಹೆಚ್ಚಾದಂತೆ ಕಟ್ಟಬಹುದಾದ ಕಂತಿನ ಮೊತ್ತ ಕಡಿಮೆಯಾಗುತ್ತಾ ಹೋಗುತ್ತದೆ. ಆದರೆ, ಟರ್ಮ್ ಇನ್ಷೊರನ್ಸ್‌ನಲ್ಲಿ ಇದು ತದ್ವಿರುದ್ದ. ಅದೇ ಕಾರಣಕ್ಕೆ ತುಂಬಾ ಜನ ಅಲ್ಪಾವಧಿಯ ಟರ್ಮ್ ಇನ್ಷೊರೆನ್ಸ್ ಖರೀದಿಸಿಬಿಡುತ್ತಾರೆ.

ಹಣದ ಉಳಿತಾಯದ ತರ್ಕವನ್ನು ಗಣನೆಗೆ ತೆಗೆದುಕೊಂಡರೆ ಅಲ್ಪಾವಧಿಯ ವಿಮೆ ಖರೀದಿ ಸರಿಯೆನ್ನಿಸುತ್ತದೆ. ಆದರೆ, ರಕ್ಷಣೆಯ ತರ್ಕದಲ್ಲಿ ಇದು ತಪ್ಪು ಲೆಕ್ಕಾಚಾರ. ಟರ್ಮ್ ಇನ್ಷೊರೆನ್ಸ್‌ನ ಕಾಲವೆನ್ನುವುದು ಸಾಧ್ಯವಾದಷ್ಟೂ ದೀರ್ಘಾವಧಿಗಿದ್ದರೆ ಚೆನ್ನ. ಒಟ್ಟಾರೆಯಾಗಿ, ಸಾಧ್ಯವಾದಷ್ಟು ಚಿಕ್ಕವಯಸ್ಸಿನಲ್ಲಿಯೇ ದೀರ್ಘಾವಧಿಯ ಟರ್ಮ್ ಇನ್ಷೊರೆನ್ಸ್ ಯೋಜನೆಯನ್ನು ಖರೀದಿಸಿದರೆ ಚಿಕ್ಕ ಪ್ರೀಮಿಯಮ್ಮಿಗೆ ಸಾಕಷ್ಟು ದೊಡ್ಡ ವಿಮಾಮೊತ್ತದ ಲಾಭ ಪಡೆದುಕೊಳ್ಳಬಹುದು ಎನ್ನುವುದು ವಿಮಾಗಣಿತದ ಸರಳ ಸತ್ಯ.

ಯಾವುದು ಒಳ್ಳೇದು?: ಕೊನೆಯದಾಗಿ, ಯಾವ ಕಂಪನಿಯ ಟರ್ಮ್ ಇನ್ಷೊರೆನ್ಸ್ ಒಳ್ಳೆಯದು ಎಂಬ ಆಯ್ಕೆಯ ಪ್ರಶ್ನೆ. ಇಂದು ಮಾರುಕಟ್ಟೆಯಲ್ಲಿ ಹಲವಾರು ವಿಮಾ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಒಂದು ಕಂಪನಿಯ ಟರ್ಮ್ ಇನ್ಷೊರೆನ್ಸ್‌ ಪ್ರೀಮಿಯಮ್ಮಿಗೂ, ಮತ್ತೊಂದು ಕಂಪನಿಯ ಟರ್ಮ್ ಇನ್ಷೊರೆನ್ಸ್ ಪ್ರೀಮಿಯಮ್ಮಿಗೂ ಸಾಕಷ್ಟು ವ್ಯತ್ಯಾಸಗಳಿರಬಹುದು. ಪ್ರೀಮಿಯಂ ಅತ್ಯಂತ ಕಡಿಮೆಯೆನ್ನುವ ಕಾರಣಕ್ಕೆ, ಪಾಲಿಸಿಯ ಖರೀದಿಯ ಮುನ್ನ ವೈದ್ಯಕೀಯ ತಪಾಸಣೆಗಳಿಲ್ಲವೆನ್ನುವ ಕಾರಣಕ್ಕೆ, ವಿಮಾ ಯೋಜನೆಯನ್ನು ಆರಿಸಿಕೊಳ್ಳುವುದು ಅಪಾಯಕಾರಿಯಾಗಬಲ್ಲದು.

ದೊಡ್ಡ ಮೊತ್ತದ ವಿಮಾ ಯೋಜನೆಯೊಂದನ್ನು ಖರೀದಿಸುವಾಗ ವಿಮೆಯನ್ನು ಮಾರುತ್ತಿರುವ ಕಂಪನಿಯ ಆರ್ಥಿಕ ಸ್ಥಿತಿಗತಿ, ದಾವೆಯ ವಾರ್ಷಿಕ ಪ್ರತಿಶತದಂಥ ಅಂಶಗಳನ್ನು ತಿಳಿದುಕೊಂಡಿರಲೇಬೇಕು. ಆರ್ಥಿಕವಾಗಿ ಸದೃಢವಾಗಿರುವ ವಿಮಾ ಕಂಪನಿಯ ಪಾಲಿಸಿಯ ಪ್ರೀಮಿಯಂ ಕೊಂಚ ಹೆಚ್ಚೆನ್ನಿಸಿದರೂ ಅದು ಸುರಕ್ಷಿತ ಹೂಡಿಕೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡೇ ವಿಮಾ ಯೋಜನೆಯನ್ನು ಖರೀದಿಸಿ. ನೀವು ಇಲ್ಲದ ಕಾಲಕ್ಕೂ ನಿಮ್ಮ ಕುಟುಂಬವನ್ನು ಸುಖವಾಗಿಡುವ ಸಂತೃಪ್ತಿ ನಿಮಗಿರಲಿ.

ಮುಚ್ಚಿಡದೆ ನಮೂದಿಸಿ!: ಈ ಎಲ್ಲ ಕೂಡು ಕಳೆಯುವಿಕೆಗಳ ನಂತರ ಟರ್ಮ್ ಇನ್ಷೊರೆನ್ಸ್ ಖರೀದಿಸುವಾಗ ಗಮನದಲ್ಲಿರಿಸಬೇಕಾದ ಬಹುಮುಖ್ಯ ಅಂಶವೆಂದರೆ, ಪಾಲಿಸಿ ದಾಖಲೆಗಳಲ್ಲಿ ದೇಹಾರೋಗ್ಯದ ಕುರಿತಾದ ಮಾಹಿತಿಯ ಕುರಿತಾಗಿದ್ದು. ಟರ್ಮ್ ವಿಮೆಯೆನ್ನುವುದು ಶುದ್ಧ ವಿಮಾ ಯೋಜನೆಯಾಗಿರುವುದರಿಂದ ಪ್ರೀಮಿಯಂ ನಿರ್ಧಾರಕ್ಕೆ ಪಾಲಿಸಿದಾರರ ಆರೋಗ್ಯದ ಸ್ಥಿತಿಗತಿ ಬಹುಮುಖ್ಯ ಅಂಶ.

ಆ ಕಾರಣಕ್ಕೆ ಇಂಥದ್ದೊಂದು ಯೋಜನೆಯ ಖರೀದಿಗೂ ಮುನ್ನ ವಿಮಾ ಕಂಪನಿಗಳು ಗ್ರಾಹಕರ ಆರೋಗ್ಯದ ಮಾಹಿತಿಯನ್ನು ಪಡೆದುಕೊಳ್ಳುತ್ತವೆ. ಅಂಥ ಸಂದರ್ಭದಲ್ಲಿ, ಆರೋಗ್ಯ ಸಂಬಂಧಿ ಏನೇ ಸಮಸ್ಯೆಗಳಿದ್ದರೂ ಅದನ್ನು ವಿಮೆಯ ದಾಖಲೆಗಳಲ್ಲಿ ನಮೂದಿಸುವುದು ಒಳಿತು. ಆರೋಗ್ಯದ ವಿವರಣೆಗಳ ನಮೂದಿಸುವಿಕೆ ಸ್ಪಷ್ಟವಾಗಿದ್ದರೆ ಮರಣದಾವೆ ಸುಲಭ. ಯಾವುದೋ ಗಂಭೀರ ಕಾಯಿಲೆಯೊಂದನ್ನು ಕಂಪನಿಯಿಂದ ಮುಚ್ಚಿಟ್ಟು ಪಡೆದುಕೊಂಡ ಪಾಲಿಸಿಯಡಿ, ಮರಣ ದಾವೆಯನ್ನು ತಿರಸ್ಕರಿಸುವ ಎಲ್ಲ ಅಧಿಕಾರವೂ ಕಂಪನಿಗಿದೆ ಎನ್ನುವುದನ್ನು ಪಾಲಿಸಿದಾರರು ನೆನಪಿಟ್ಟುಕೊಂಡರೆ ಒಳ್ಳೆಯದು.

* ಗುರುರಾಜ ಕೊಡ್ಕಣಿ, ಯಲ್ಲಾಪುರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.