ಶಿಖಂಡಿ ಹುಟ್ಟಿದ್ದು ಭೀಷ್ಮನ ಮೇಲಿನ ಸಿಟ್ಟಿಗೆ!


Team Udayavani, Dec 17, 2019, 6:07 AM IST

shikandi

ಮಹಾಭಾರತದಲ್ಲಿ ಶಿಖಂಡಿ ಎಂಬ ಪಾತ್ರ ಬರುತ್ತದೆ. ಇದು ಅತಿಸಣ್ಣ ಪಾತ್ರ. ಈ ಪಾತ್ರದ ಬಗ್ಗೆ ಬಹಳ ಚರ್ಚೆಗಳೂ ಆಗಿರಲಿಕ್ಕಿಲ್ಲ. ಆದರೆ ಮಹಾಭಾರತ ಗೊತ್ತಿಲ್ಲದವರಿಗೂ ಈ ಹೆಸರು ಗೊತ್ತಿರುತ್ತದೆ. ಮಹಾಭಾರತವನ್ನು ಅಲ್ಲಿ ಇಲ್ಲಿ ಕೇಳಿದವರಿಗೆ, ಅಲ್ಪಸ್ವಲ್ಪ ತಿಳಿದವರಿಗೂ ಪಾತ್ರ ಪರಿಚಯವಂತೂ ಇರುತ್ತದೆ. ಭಾರತದಲ್ಲಿ ಈ ಹೆಸರನ್ನು ಸಮುದಾಯವೊಂದಕ್ಕೆ ಇಡಲಾಗಿದೆ. ಗಂಡಾಗಿ ಹುಟ್ಟಿ ಹೆಣ್ಣಿನಂತೆ ಅವಯವಗಳನ್ನು ಹೊಂದಿದ, ಹೆಣ್ಣಾಗಿ ಹುಟ್ಟಿ ಗಂಡಿನಂತೆ ಹಾವಭಾವ ಮಾಡುವ ವ್ಯಕ್ತಿಗಳನ್ನು ಈಗ ಶಿಖಂಡಿ ಎಂದೇ ಕರೆಯಲಾಗುತ್ತದೆ. ಹಾಗೇಕೆ ಕರೆಯಲಾ­ಗುತ್ತದೆ? ಅದರ ಹಿಂದೊಂದು ರೋಚಕ ಕಥೆಯಿದೆ.

ಬೆಸ್ತರ ಹುಡುಗಿ ಸತ್ಯವತೀಯನ್ನು ಮದುವೆಯಾಗಿದ್ದ ಶಂತನುವಿಗೆ ಇಬ್ಬರು ಮಕ್ಕಳು ಹುಟ್ಟಿರುತ್ತಾರೆ. ಚಿತ್ರಾಂಗದ ಹಾಗೂ ವಿಚಿತ್ರವೀರ್ಯರ ಪೈಕಿ, ಚಿತ್ರಾಂಗದ ಅದೇ ಹೆಸರಿನ ಇನ್ನೊಬ್ಬ ಗಂಧರ್ವ­ನೊಂದಿಗೆ ಯುದ್ಧ ಮಾಡಿ ಬಾಲ್ಯದಲ್ಲೇ ಸತ್ತುಹೋಗುತ್ತಾನೆ. ಆಮೇಲೆ ಪುಟ್ಟ ವಯಸ್ಸಿನ ವಿಚಿತ್ರವೀರ್ಯನಿಗೆ ಯುವರಾಜ ಪದವಿಕಟ್ಟಿ, ತಾನು ಆಡಳಿತದ ಉಸ್ತುವಾರಿಯನ್ನು ಭೀಷ್ಮ ಹೊತ್ತಿರು­ತ್ತಾನೆ. ಈ ವೇಳೆ ವಿಚಿತ್ರವೀರ್ಯನಿಗೆ ಮದುವೆ ಮಾಡುವ ಯೋಚನೆ ಭೀಷ್ಮನಿಗೆ ಬರುತ್ತದೆ. ಆಗ ಆಘಾತಕಾರಿ ಘಟನೆಯೊಂದು ಜರುಗುತ್ತದೆ. ಕುರು ಮನೆತನಕ್ಕೂ ಕಾಶೀರಾಜನ ಮನೆತನಕ್ಕೂ ಹಿಂದಿನಿಂದ ಒಂದು ಪದ್ಧತಿಯಿರುತ್ತದೆ.

ಕಾಶೀರಾಜನ ಪುತ್ರಿಯರನ್ನೇ ಕುರು ಮನೆತನಕ್ಕೆ ತಂದುಕೊಳ್ಳಲಾಗುತ್ತಿತ್ತು (ಭೀಷ್ಮನ ಆಡಳಿತ ನಡೆಯುತ್ತಿದ್ದ ಕಾಲದವರೆಗೆ). ಈ ಬಾರಿ ಭೀಷ್ಮ ಹೆಣ್ಣು ಕೇಳಲು ಇನ್ನೇನು ಹೊರಡಬೇಕು, ಆಗ ಕಾಶೀರಾಜ ತನ್ನ ಮೂವರು ಪುತ್ರಿಯರಿಗೆ ಸ್ವಯಂವರ ಏರ್ಪಡಿಸಿರುವುದು ಗೊತ್ತಾಗುತ್ತದೆ. ಪದ್ಧತಿಯನ್ನು ಮುರಿದಿರುವುದು ಮಾತ್ರವಲ್ಲ, ಸೌಜನ್ಯಕ್ಕೂ ಒಂದು ಮಾತು ತಿಳಿಸದೇ ಕಾಶೀರಾಜ ಸ್ವಯಂವರ ಏರ್ಪಡಿಸಿ­ರುವುದು ಭೀಷ್ಮನಿಗೆ ನೋವುಂಟು ಮಾಡುತ್ತದೆ. ಅವನು ನೇರವಾಗಿ ಸ್ವಯಂವರಕ್ಕೆ ತೆರಳುತ್ತಾನೆ. ಯುದ್ಧ ಮಾಡಿ ಅಲ್ಲಿದ್ದ ರಾಜರನ್ನು ಸೋಲಿಸಿ, ಅಂಬೆ, ಅಂಬಿಕೆ, ಅಂಬಾಲಿಕೆ­ಯರನ್ನು ಗೆದ್ದು ತರುತ್ತಾನೆ.

ಆ ಮೂವ­ರನ್ನೂ ವಿಚಿತ್ರ­ವೀರ್ಯನಿಗೆ ಮದುವೆ ಮಾಡಿಸಬೇಕೆನ್ನುವಾಗ ಒಂದು ತಕರಾರು ಶುರುವಾ­ಗುತ್ತದೆ. ಅದು ಮಹಾಭಾರತ ಕಥೆಯ ಅತ್ಯಂತ ರೋಚಕ ಅಧ್ಯಾಯ­ವೊಂದಕ್ಕೆ ಮುನ್ನುಡಿ ಬರೆಯುತ್ತದೆ. ಆ ಯುವತಿ­ಯರಲ್ಲಿ ದೊಡ್ಡಾಕೆ ಅಂಬೆ, ತಾನು ಶಾಲ್ವರಾಜನನ್ನು ಪ್ರೀತಿಸುತ್ತಿದ್ದೇನೆ, ನೀನು ಒಂದು ಮಾತೂ ಕೇಳದೇ ನಮ್ಮನ್ನು ಕರೆದುತಂದುಬಿಟ್ಟೆ ಎಂದು ಭೀಷ್ಮನಿಗೆ ಹೇಳುತ್ತಾಳೆ. ವಿಚಿತ್ರವೀರ್ಯ ಕೂಡ, ಬೇರೊಬ್ಬನನ್ನು ಪ್ರೀತಿಸುತ್ತಿರುವ ವ್ಯಕ್ತಿಯನ್ನು ತಾನು ಹೇಗೆ ಮದುವೆಯಾಗಲಿ ಎಂದು ಹೇಳುತ್ತಾನೆ. ಸರಿ, ಭೀಷ್ಮ ಆಕೆಯನ್ನು ಗೌರವದಿಂದಲೇ ಶಾಲ್ವರಾಜನ ಬಳಿ ವಾಪಸ್‌ ಕಳುಹಿಸುತ್ತಾನೆ.

ಶಾಲ್ವರಾಜ ಮದುವೆಯಾಗಲು ನಿರಾಕರಿಸುತ್ತಾನೆ. ತನ್ನನ್ನು ಸೋಲಿಸಿ, ಭೀಷ್ಮ ನಿನ್ನನ್ನು ಕರೆದೊಯ್ದಿರುವುದರಿಂದ, ನಿನ್ನನ್ನು ಮದುವೆಯಾಗುವುದು ಕ್ಷತ್ರಿಯಧರ್ಮಕ್ಕೆ ವಿರುದ್ಧ ಎನ್ನುವುದು ಅವನ ವಾದ. ಇಲ್ಲಿಂದ ಅಂಬೆಯ ಘೋರದುರಂತದ ಬದುಕು ಶುರುವಾಗುತ್ತದೆ. ಇತ್ತಕಡೆ ವಾಪಸ್‌ ಬಂದು ಭೀಷ್ಮನಿಗೆ, ನನ್ನನ್ನು ಮದುವೆಯಾಗು ಎಂದು ಕೇಳಿಕೊಳ್ಳುತ್ತಾಳೆ. ತಾನು ಮದುವೆ­ಯಾಗು­ವುದಿಲ್ಲ ಎಂಬ ಪ್ರತಿಜ್ಞೆ ಮಾಡಿದ್ದೇನೆ, ಅದನ್ನು ಮುರಿಯಲಿಕ್ಕೆ ಸಾಧ್ಯವೇ ಇಲ್ಲ ಎಂದು ಭೀಷ್ಮ ನಿರಾಕರಿಸುತ್ತಾನೆ. ಅಂಬೆ ಹೀಗೆ ಅಲ್ಲಿಂದಿಲ್ಲಿ, ಇಲ್ಲಿಂದಲ್ಲಿ ಸುತ್ತುತ್ತ 6 ವರ್ಷ ಕಳೆಯುತ್ತಾಳೆ. ಕಡೆಗೆ ತಪಸ್ಸು ಮಾಡಲು ಅರಣ್ಯಕ್ಕೆ ತೆರಳುತ್ತಾಳೆ.

ಅಲ್ಲಿನ ಋಷಿಗಳೂ ಸುಂದರಿಯಾದ ಆಕೆಯನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಬಯಸುವುದಿಲ್ಲ. ಕಡೆಗೂ ಯಾವುದೋ ಕಾಡಿನಲ್ಲಿ ಆಕೆ ತೀವ್ರ ತಪಸ್ಸು ಮಾಡಿ ಶಿವನನ್ನು ಒಲಿಸಿಕೊಳ್ಳುತ್ತಾಳೆ. ಭೀಷ್ಮನನ್ನು ತಾನೇ ಕೊಲ್ಲಬೇಕೆಂಬ ವರವನ್ನು ಕೇಳಿಕೊಳ್ಳುತ್ತಾಳೆ. ಮುಂದಿನ ಜನ್ಮಕ್ಕೆ ನೀನೇ ಅವನನ್ನು ಕೊಲ್ಲುತ್ತೀಯ ಎಂದು ಶಿವ ಹೇಳುತ್ತಾನೆ. ಹಾಗೆ ದ್ರುಪದರಾಜನ ಪುತ್ರಿಯಾಗಿ ಹುಟ್ಟುವ ಅಂಬೆಗೆ ಶಿಖಂಡಿ ಎಂದು ಹೆಸರು ಇಡಲಾಗುತ್ತದೆ. ಗಂಧರ್ವನೊಬ್ಬನ ಕೃಪೆಯಿಂದ ಈಕೆ ಗಂಡಾಗಿ ಬದಲಾಗುತ್ತಾಳೆ. ಮೂಲಭೂತ­ವಾಗಿ ಶಿಖಂಡಿ ಎಂಬ ಪದ ಶಿಖಂಡಿನ್‌ ಎಂಬುದರಿಂದ ಬಂದಿದೆ. ಹಾಗೆಂದರೆ ನವಿಲು!

* ನಿರೂಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.