ಬಿತ್ತನೆ ಆಲೂಗಡ್ಡೆ ಮಾರುಕಟ್ಟೆಗೆ ಬಂದ ಜಲಂಧರ್‌


Team Udayavani, Dec 18, 2019, 3:00 AM IST

bittane-aloo

ಚಿಕ್ಕಬಳ್ಳಾಪುರ: ಈ ವರ್ಷ ಮುಂಗಾರಿಗಿಂತ ಹಿಂಗಾರು ಮಳೆ ರೈತರ ಕೈ ಹಿಡಿದು ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಕಾಣಿಸಿಕೊಳ್ಳುತ್ತಿದ್ದಂತೆ ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆಗೆ ರೈತರು ಮುಂದಾಗಿದ್ದು, ಕಳೆದ ವರ್ಷ ಬರದಿಂದ ಆಲೂಗಡ್ಡೆ ಬಿತ್ತನೆ ಬೀಜ ಖರೀದಿಗೆ ಯಾರು ಮುಂದಾಗದೇ ಭಣಗುಟ್ಟಿದ್ದ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಗೆ ಈಗ ದೂರದ ಪಂಜಾಬ್‌ನ ಜಲಂಧರ್‌ರಿಂದ ಆಗಮಿಸಿರುವ ಬಿತ್ತನೆ ಆಲೂಗಡ್ಡೆ ಖದರ್‌ ತಂದಿದೆ.

ಅಲೂಗಡ್ಡೆ ಮಾರಾಟ ಭರಾಟೆ: ಕಳೆದ ವರ್ಷ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಸ್ಥಳೀಯ ಬಿತ್ತನೆ ಆಲೂಗಡ್ಡೆ ವ್ಯಾಪಾರಸ್ಥರು ಲಕ್ಷಾಂತರ ರೂ. ಬಂಡವಾಳ ಹಾಕಿ ಜಲಂಧರ್‌ನಿಂದ ಮಾರಾಟಕ್ಕೆಂದು ತರಿಸಿದ್ದ ಬಿತ್ತನೆ ಆಲೂಗಡ್ಡೆ ನಿರೀಕ್ಷಿತ ಮಟ್ಟದಲ್ಲಿ ಮಾರಾಟವಾಗದೇ ಕೈ ಸುಟ್ಟಿಕೊಂಡಿದ್ದರು. ಆದರೆ ಈ ವರ್ಷ ಜಿಲ್ಲೆಯಲ್ಲಿ ಮುಂಗಾರು ಕೈ ಕೊಟ್ಟರೂ ಹಿಂಗಾರು ರೈತರು ಕೈ ಹಿಡಿದಿರುವುದಿರಂದ ನಿರೀಕ್ಷೆಗೂ ಮೀರಿ ಆಲೂಗಡ್ಡೆ ಬಿತ್ತನೆಗೆ ರೈತರು ಮುಂದಾಗಿದ್ದು ಬಿತ್ತನೆ ಆಲೂಗಡ್ಡೆ ಮಾರಾಟದ ಭರಾಟೆ ಜೋರಾಗಿದೆ.

ಜಲಂಧರ್‌ನಿಂದ ಬಂದ ಆಲೂಗಡ್ಡೆ: ಸದ್ಯ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಮಾರಾಟ ಮಾಡಲು ವ್ಯಾಪಾರಸ್ಥರು ಲೋಡ್‌ಗಟ್ಟಲೇ ಪಂಜಾಬ್‌ನ ಜಲಂಧರ್‌ನಿಂದ ತರಿಸಿರುವ ಬಿತ್ತನೆ ಆಲೂಗಡ್ಡೆ ಮೂಟೆಗಳ ರಾಶಿ ರಾಶಿ ಕಂಡು ಬರುತ್ತಿದ್ದು, ರೈತರು ಕೂಡ ಗುಣಮಟ್ಟದ ಆಲೂಗಡ್ಡೆ ಹುಡುಕಾಟ ನಡೆಸಿ ತಮಗೆ ಅಗತ್ಯವಾದ ಬಿತ್ತನೆ ಆಲೂಗಡ್ಡೆಯನ್ನು ಖರೀದಿ ಕೊಂಡೊಯ್ಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

ಕಳೆದ ವರ್ಷ ಮಳೆ ಕೈಕೊಟ್ಟಿದ್ದರಿಂದ ಮಾರುಕಟ್ಟೆಗೆ ಬಿತ್ತನೆ ಆಲೂಗಡ್ಡೆ ಆಗಮಿಸಿದರೂ ಖರೀದಿದಾರರು ಇಲ್ಲದೇ ವ್ಯಾಪಾರಸ್ಥರು ಕೈ ಸುಟ್ಟುಕೊಂಡಿದ್ದರು. ಅಲ್ಲದೇ ಸಾವಿರರಾರೂ ರೂ. ಬಂಡಾವಳ ಹಾಕಿ ತಂದಿದ್ದ ಬಿತ್ತನೆ ಆಲೂಗಡ್ಡೆಯನ್ನು ಮಾರಾಟವಾಗದೇ ಕೊನೆ ಗಳಿಗೆಯಲ್ಲಿ ನೂರಾರು ರೂ,ಗೆ ಮಾತ್ರ ಮಾರಾಟ ಮಾಡಿದ್ದರು. ಅಲ್ಲದೇ ತೀವ್ರ ಬರಗಾಲದ ಪರಿಣಾಮ ರೈತರು ಸಹ ಬಿತ್ತನೆ ಯಾರು ಮುಂದಾಗಿರಲಿಲ. ಆದರೆ ಈ ವರ್ಷ ಹಿಂಗಾರು ಮಳೆ ನಿರೀಕ್ಷೆಗೂ ಮೀರಿ ಅನ್ನಾದಾತರ ಕೈ ಹಿಡಿದಿರುವುದರಿಂದ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಗೆ ಜಲಂಧರ್‌ ಬಿತ್ತನೆ ಆಲೂಗಡ್ಡೆ ಖದರ್‌ ತಂದಿದೆ.

ಬಿತ್ತನೆ ಆಲೂಗಡ್ಡೆ ಮಾರಾಟಕ್ಕೆ ಫೇಮಸ್‌: ಚಿಕ್ಕಬಳ್ಳಾಪು ಜಿಲ್ಲೆ ಬರಗಾಲಕ್ಕೆ ತುತ್ತಾದರೂ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಬಿತ್ತನೆ ಆಲೂಗಡ್ಡೆ ಮಾರಾಟದಲ್ಲಿ ಇಡೀ ರಾಜ್ಯದ ಗಮನ ಸೆಳೆದಿದೆ. ಪ್ರತಿ ವರ್ಷ ಆಲೂಗಡ್ಡೆ ಬಿತ್ತನೆ ಸಮಯದಲ್ಲಿ ಇಲ್ಲಿನ ಎಪಿಎಂಸಿ ವರ್ತಕರು ದೂರದ ಪಂಜಾಬ್‌ನ ಜಲಂದರ್‌ನಿಂದ ಸಾವಿರಾರು ಮೆಟ್ರಿಕ್‌ ಟನ್‌ಗಟ್ಟಲೇ ಬಿತ್ತನೆ ಆಲೂಗಡ್ಡೆ ತರಿಸಿ ಮಾರಾಟ ಮಾಡುತ್ತಾರೆ. ಚಿಕ್ಕಬಳ್ಳಾಪುರ ಮಾರುಕಟೆಯಿಂದಲೇ ಇಡೀ ಜಿಲ್ಲೆ ಮಾತ್ರವಲ್ಲದೇ ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೋಟೆ,

ತುಮಕೂರು, ಕೋಲಾರ, ನೆರೆಯ ಆಂಧ್ರಪ್ರದೇಶದ ಆನಂತಪುರ, ಲೇಪಾಕ್ಷಿ, ಪುಟ್ಟಪರ್ತಿ, ಹಿಂದೂಪುರ, ಪೆನಗೊಂಡ ಭಾಗದ ರೈತರು ಕೂಡ ಇಲ್ಲಿಗೆ ಬಂದು ಅಲೂಗಡ್ಡೆ ಬೀತ್ತನೆ ಬೀಜ ಖರೀದಿ ಮಾಡುತ್ತಾರೆ. ಜತೆಗೆ ತಮಿಳುನಾಡಿನ ಹೊಸೂರು, ಕೃಷ್ಣಗಿರಿ ರೈತರು ಸಹ ಇಲ್ಲಿಗೆ ಬಂದು ಬಿತ್ತನೆ ಆಲೂಗಗಡ್ಡೆ ಖರೀದಿ ಮಾಡಿಕೊಂಡು ಹೋಗುತ್ತಾರೆ. ಅಷ್ಟರ ಮಟ್ಟಿಗೆ ಇಲ್ಲಿನ ಎಪಿಎಂಸಿ ಮಾರುಕಟ್ಟೆ ಬಿತ್ತನೆ ಆಲೂಗಡ್ಡೆ ಮಾರಾಟಕ್ಕೆ ಹೆಸರುವಾಸಿಯಾಗಿದೆ. ಆಲೂಗಡ್ಡೆ ಸೀಸನ್‌ ಬಂದರೆ ವರ್ತಕರಿಗೆ ಕೈ ತುಂಬ ಕಾಸದರೆ, ಕೂಲಿ ಕಾರ್ಮಿಕರಿಗೂ ಹೊಟ್ಟೆ ತುಂಬುತ್ತದೆ.

ಡಿಸೆಂಬರ್‌ಗೆ ಬಿತ್ತನೆ ಸೀಸನ್‌ ಕೊನೆ: ಜಿಲ್ಲೆಯ ಮಾತ್ರವಲ್ಲದೇ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್‌ ಮುಗಿಯುವುದರೊಳಗೆ ಆಲೂಗಡ್ಡೆ ಬಿತ್ತ ನೆ ಆಗಬೇಕಿದ್ದು, ಈಗಾಗಲೇ ಕಳೆದ ಒಂದು ತಿಂಗಳಿಂದ ಬಿತ್ತನೆ ಕಾರ್ಯ ಜಿಲ್ಲಾದ್ಯಂತ ಚುರುಕುಗೊಂಡಿದೆ. ಕಡಿಮೆ ನೀರಿನ ಜೊತೆಗೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ತಂದುಕೊಡುವ ವಾಣಿಜ್ಯ ಬೆಳೆಗಳಲ್ಲಿ ಆಲೂಗಡ್ಡೆ ಸಹ ಒಂದಾಗಿದ್ದು ಇತ್ತೀಚಿನ ದಿನಗಳಲ್ಲಿ ಜಿಲ್ಲಾದ್ಯಂತ ಹೇರಳ ಪ್ರಮಾಣದಲ್ಲಿ ಆಲೂಗಡ್ಡೆ ಬಿತ್ತನೆ ಮಾಡಲಾಗುತ್ತಿದೆ. ತೋಟಗಾರಿಕಾ ಇಲಾಖೆ ಪ್ರಕಾರ ಸಾಮಾನ್ಯವಾಗಿ ಜಿಲ್ಲೆಯಲ್ಲಿ ಅಕ್ಟೋಬರ್‌, ನವೆಂಬರ್‌ನಲ್ಲಿ ಆಲೂಗಡ್ಡೆ ಬಿತ್ತನೆಗೆ ಸಕಾಲವಾದರೂ ಜಿಲ್ಲೆಯ ರೈತರು ಸೆಪ್ಪಂಬರ್‌ ಅಂತ್ಯದಲ್ಲಿಯೆ ಆಲೂಗಡ್ಡೆ ಬಿತ್ತನೆ ಕಾರ್ಯವನ್ನು ಶುರು ಮಾಡುತ್ತಾರೆ.

ಆದರೆ ಜಿಲ್ಲೆಯಲ್ಲಿ ಈ ವರ್ಷ ತೀವ್ರ ಮಳೆ ಕೊರತೆ ಪರಿಣಾಮ ಖುಷ್ಕಿ ಬೇಸಾಯದಲ್ಲಿ ಆಗಿರುವ ಬಿತ್ತನೆ ಮಳೆಯಾಗದೇ ಸಂಪೂರ್ಣ ಬೆಳೆ ನಾಶವಾಗಿದೆ. ಆದರೆ ಸೆಪ್ಪೆಂಬರ್‌, ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿ ಹಿಂಗಾರು ಮಳೆ ಬಿದ್ದಿರುವುದರಿಂದ ಜಿಲ್ಲೆಯ ರೈತರು ಆಲೂಗಡ್ಡೆ ಬಿತ್ತನೆಗೆ ಉತ್ಸಾಹ ತೋರಿದ್ದಾರೆ. ಜೊತೆಗೆ ಮಾರುಕಟ್ಟೆಯಲ್ಲಿ ಆಲೂಗಡ್ಡೆಗೆ ಉತ್ತಮ ದರ ಇದ್ದು, 50 ಕೆಜಿ ಮೂಟೆ 1200, ರಿಂದ 1300 ವರೆಗೂ ಮಾರಾಟಗೊಳ್ಳುತ್ತಿರುವುದರಿಂದ ರೈತರು ಹೆಚ್ಚಿನ ಪ್ರಮಾಣದಲ್ಲಿ ಆಲೂಗಡ್ಡೆ ಬಿತ್ತ ನೆಗೆ ಮುಂದಾಗಿದ್ದಾರೆ.

50 ಕೆಜಿ ಬಿತ್ತನೆ ಆಲೂಗಡ್ಡೆ 1200, 1300 ರೂ.: ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 50 ಕೆಜಿ ತೂಕದ ಬಿತ್ತನೆ ಆಲೂಗಡ್ಡೆ ಸದ್ಯ 1,200 ರಿಂದ 1,300 ರೂ. ವರೆಗೂ ಮಾರಾಟಗೊಳ್ಳುತ್ತಿದ್ದು, ದಿನಕ್ಕೆ 4ರಿಂದ 5 ಲೋಡ್‌ನ‌ಷ್ಟು ಆಲೂಗಡ್ಡೆ ಮಾರಾಟ ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿ 25ಕ್ಕೂ ಹೆಚ್ಚು ಆಲೂಗಡ್ಡೆ ವ್ಯಾಪಾರಸ್ಥರು ಇದ್ದು ಈ ವರ್ಷ ಮಾರುಕಟ್ಟೆಗೆ ಜಲಂಧರ್‌ನಿಂದ ಸುಮಾರು 150 ಲಾರಿ ಲೋಡ್‌ನ‌ಷ್ಟು ಬಿತ್ತನೆ ಆಲೂಗಡ್ಡೆ ತರಿಸಿದ್ದಾರೆ. ಇನ್ನೂ 50 ಲೋಡ್‌ ಬರಲಿದೆ. ಕಳೆದ ವರ್ಷ ಬರಗಾಲದ ಪರಿಣಾಮ ಆಲೂಗಡ್ಡೆ ಮಾರಾಟ ಗೊಳ್ಳದೇ ವರ್ತಕರು ಕಂಗಾಲಾಗಿದ್ದರು. ಆದರೆ ಈ ವರ್ಷ ಉತ್ತಮ ಮಾರಾಟದಿಂದ ಸಂಸತಗೊಂಡಿದ್ದಾರೆ. ಆರಂಭದಲ್ಲಿ ವರ್ತಕರು 50 ಕೆಜಿ ಮೂಟೆಯನ್ನು 1500, 1700 ರೂ. ವರೆಗೂ ಮಾರಾಟ ಮಾಡಿದರೆಂಬ ಆರೋಪ ರೈತರಿಂದ ಕೇಳಿ ಬಂತು.

ನಾವು ಪ್ರತಿ ವರ್ಷ ಇಲ್ಲಿಂದಲೇ ಬಿತ್ತನೆ ಆಲೂಗಡ್ಡೆ ತೆಗೆದುಕೊಂಡು ಹೋಗುತ್ತೇವೆ. ಕಳೆದ ವರ್ಷ ಮಳೆ ಕಡಿಮೆಯಾಗಿದ್ದಕ್ಕೆ ಹಾಕಿರಲಿಲ್ಲ. ಈ ವರ್ಷ ಮಳೆ ಪರವಾಗಿಲ್ಲ. ಒಂದು ಎಕರೆಯಲ್ಲಿ ಆಲೂಗಡ್ಡೆ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಎಕರೆ 10 ರಿಂದ 12 ಮೂಟೆ ಬಿತ್ತನೆ ಆಲೂಗಡ್ಡೆ ಬೇಕು.
-ನಾಗರಾಜಪ್ಪ, ವಿಜಯಪುರ ರೈತ

ಕಳೆದ ವರ್ಷ ಮಳೆ ಇಲ್ಲದೇ ಸಾಕಷ್ಟು ಬಿತ್ತನೆ ಆಲೂಗಡ್ಡೆ ಮಾರಾಟಗೊಳ್ಳದೇ ನಾವು ಸಾಕಷ್ಟು ನಷ್ಠ ಮಾಡಿಕೊಂಡವು. ಆದರೆ ಈ ವರ್ಷ ಬಿತ್ತನೆ ಆಲೂಗಡ್ಡೆ ಮಾರಾಟ ಪರವಾಗಿಲ್ಲ. 50 ಕೆಜಿ ಮೂಟೆ 1200, 1300 ಮಾರಾಟಗೊಳ್ಳುತ್ತಿದೆ. ಕಳೆದ ವರ್ಷ ಹಾಕಿದ ಬಂಡವಾಳ ಬರಲಿಲ್ಲ. ಬರೀ 300, 400ಕ್ಕೆ ಮಾರಾಟ ಮಾಡಿದವು. ಜಲಂಧರ್‌ನಿಂದ ಆಲೂಗಡ್ಡೆ ತರಸಬೇಕಾದರೆ ಮೂಟೆಗೆ ನಾವು 280 ರೂ, ಬಾಡಿಗೆ ಕೊಡಬೇಕು. ಇದುವರೆಗೂ ನಾಲ್ಕು ಲೋಡ್‌ ಮಾರಾಟ ಮಾಡಿದ್ದೇನೆ.
-ಅವಲಗುರ್ಕಿ ರಾಜಣ್ಣ, ಎಪಿಎಂಸಿ ವರ್ತಕರು

ಜಿಲ್ಲೆಯಲ್ಲಿ 1,900 ರಿಂದ 2000 ಹೆಕ್ಟೇರ್‌ ಪ್ರದೇಶದಲ್ಲಿ ಆಲೂಗಡ್ಡೆ ಬೆಳೆಯುತ್ತಾರೆ. ಇದುವರೆಗೂ ಶೇ.50 ರಷ್ಟು ಬಿತ್ತನೆ ಕಾರ್ಯ ಮುಗಿದಿದ್ದು, ಡಿಸೆಂಬರ್‌ ಅಂತ್ಯದೊಳಗೆ ಬಿತ್ತನೆ ಕಾರ್ಯ ಮುಗಿಯಲಿದೆ. ಆಲೂಗಡ್ಡೆ ಬಿತ್ತನೆ ಬಗ್ಗೆ ರೈತರಿಗೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಆಲೂಗಡ್ಡೆ ರೈತರಿಗೆ ಸಿಗಲಿದೆ.
-ಕುಮಾರಸ್ವಾಮಿ, ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.