ಗಣಿಗಾರಿಕೆಗೆ ಮರಗಳ ಹನನ


Team Udayavani, Dec 20, 2019, 6:11 PM IST

tk-tdy-1

ತುಮಕೂರು: ಎಲ್ಲೆಡೆ ಗಿಡ, ಮರ ಬೆಳೆಸಿ ಪರಿಸರ ಉಳಿಸಿ ಎನ್ನುವ ಘೋಷಣೆಯೊಂದಿಗೆ ಪರಿಸರ ಆಂದೋಲನಗಳು ನಡೆಯುವುದು ಒಂದೆಡೆಯಾದರೆ, ಮತ್ತೂಂದೆಡೆ ಮರಗಳ್ಳರು, ಗಣಿ ಗುತ್ತಿಗೆದಾರ ರಿಂದ ಜಿಲ್ಲಾದ್ಯಂತ ಮರಗಳ ಮಾರಣ ಹೋಮ ನಡೆಯುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು

ಮರಗಳ್ಳತನ ತಡೆಗಟ್ಟಲು ವಿಫ‌ಲರಾಗಿದ್ದಾರೆ. ಜಿಲ್ಲೆ ಬಹುತೇಕ ಬಯಲುಸೀಮೆಯ ಪ್ರದೇಶವಾಗಿದ್ದು, ಈ ಜಿಲ್ಲೆಯಲ್ಲಿ ಅರಣ್ಯ ಸಂಪತ್ತು ಕೆಲ ಪ್ರದೇಶಗಳಲ್ಲಿದ್ದರೂ ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಗಣಿಗಾರಿಕೆಯಿಂದ ಮರ, ಗಿಡಗಳು ನಾಶವಾಗುತ್ತಲಿವೆ. ಇದರ ಜೊತೆಗೆ ಜಿಲ್ಲೆಯ ವಿವಿಧ ಕಡೆ ರಸ್ತೆ ಬದಿಯ ಮರಗಳು ಹಾಗೂ ಅರಣ್ಯಪ್ರದೇಶದಲ್ಲಿ ರಾಜಾರೋಷವಾಗಿ ಮರ ಕಡಿಯುವ ಮರಗಳ್ಳರ ಹಾವಳಿ ಹೆಚ್ಚುತ್ತಿದ್ದು, ಪರಿಸರ ಅಸಮತೋಲನ ಸೃಷ್ಟಿಸುತ್ತಿದ್ದಾರೆ.

ಮಾರಣ ಹೋಮ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಮರ ರಾಜಾರೋಷವಾಗಿ ಕಡಿದು ಸಾಗಿಸುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ನಗರಕ್ಕೆ ಸಮೀಪವಿರುವ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಇರುವ ಬೆಲೆ ಬಾಳುವ ಮರ ಗಿಡ ಕಾಡುಗಳ್ಳರ ಪಾಲಾಗುತ್ತಿದೆ. ಮಧುಗಿರಿ, ಶಿರಾ ಹಾಗೂ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ಪ್ರದೇಶದಲ್ಲಿ ಮರಗಳನ್ನು ಮರಗಳ್ಳರು ಕಡಿದು ಸಾಗಿಸುತ್ತಿದ್ದಾರೆ. ಮರಗಳ್ಳರು ಮರ ಕಡಿದು ಸಾಗಿಸುವುದು ಒಂದೆಡೆಯಾದರೆ, ಗಿಡ-ಮರ ನೆಟ್ಟು ಪರಿಸರ ಉಳಿಸಿ ಎನ್ನುವ ಆಂದೋಲನ ಜಿಲ್ಲೆಯ ಎಲ್ಲಾ ಭಾಗಗಳಲ್ಲಿಯೂ ನಡೆಯುತ್ತಿದೆ.ಅರಣ್ಯ ಇಲಾಖೆ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಜನರಲ್ಲಿ ಅರಿವು ಮೂಡಿಸುತ್ತಿ ದ್ದರೂ ಯಾವುದೇ ಪರಿಣಾಮ ಬೀರಿದಂತಿಲ್ಲ.

ಗಣಿಗಾರಿಕೆ: ಜಿಲ್ಲೆಯಲ್ಲಿ ಗಣಿಗಾರಿಕೆ ವ್ಯಾಪಕವಾಗಿ ನಡೆದ ಪರಿಣಾಮ ಗೋಮಾಳ ಗುಡ್ಡಗಳಲ್ಲಿದ್ದ ಮರಗಿಡಗಳು ನಾಶವಾಗಿ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಚಿಕ್ಕನಾಯಕನ ಹಳ್ಳಿ, ಗುಬ್ಬಿ, ತಿಪಟೂರು ಪ್ರದೇಶಗಳಲ್ಲಿ ಅದಿರು ಗಣಿಗಾರಿಕೆ ವ್ಯಾಪಕವಾಗಿದೆ. ಕುಣಿಗಲ್‌ ಮತ್ತು ತುಮಕೂರು ಭಾಗಗಳಲ್ಲಿ ಕಲ್ಲು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿರುವುದರಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಗೋಮಾಳ ಗುಡ್ಡಗಳಲ್ಲಿ ಬೆಳೆದು ನಿಂತಿದ್ದ ಗಿಡ-ಮರ ಗಣಿ ಉದ್ಯಮಿಗಳು ಯತೇತ್ಛವಾಗಿ ಕಡಿದು ಹಾಕುವ ಮೂಲಕ ಪರಿಸರ ನಾಶ ಮಾಡುತ್ತಿದ್ದಾರೆ. ಈ ರೀತಿ ಪರಿಸರದ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯಿಂದಲೂ ಗಿಡ ಮರಗಳು ನಾಶವಾಗಿವೆ.

ಕಳ್ಳರ ಪಾಲು: ತುಮಕೂರು ತಾಲೂಕಿನ ಕೋರಾ ಹಾಗೂ ಸುತ್ತಮುತ್ತಲ ಕೆರೆ ಅಂಗಳಗಳಲ್ಲಿ ಬೆಳೆದಿದ್ದ ಮರ-ಗಿಡಗಳನ್ನು ಕಳ್ಳರ ಪಾಲಾಗಿದೆ. ಈ ಭಾಗದಲ್ಲಿ ಇಟ್ಟಿಗೆ ಗೂಡು ಹಾಕಿರುವವರು ಹಾಗೂ ಮರದ ಪೀಠೊಪಕರಣ ಮಾಡುವವರು ಈ ದಂಧೆಯಲ್ಲಿ ತೊಡಗಿದ್ದಾರೆ. ಈ ಭಾಗದ ನಾಗರಿಕರು ಹಲವು ಬಾರಿ ಅರಣ್ಯಧಿಕಾರಿಗಳಿಗೆ ದೂರು ನೀಡಿದ್ದರೂ ಅಧಿಕಾರಿಗಳು ಮೌನವಹಿಸಿದ್ದಾರೆ.

ಕಡಿಮೆಯಾಗುತ್ತಿದೆ ಮಳೆ ಪ್ರಮಾಣ: ಜಿಲ್ಲೆಯ ಎಲ್ಲಾ ಕಡೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ, ಮರಗಳ ನಾಶ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪರಿಸರ ಅಸಮತೋಲನ ಉಂಟಾಗಿ ಕಳೆದ ಹಲವಾರು ವರ್ಷಗಳಿಂದಲೂ ಈ ಭಾಗದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣವೂ ಕಡಿಮೆಯಾಗತೊಡಗಿದೆ. ಈ ಹಿಂದೆ ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಅಧಿಕ ಮಳೆ ಬೀಳುತ್ತಿತ್ತು.

ಆದರೆ ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಮಳೆ ಬಾರದೆ ರೈತರು ಸಂಕಷ್ಟ ಅನುಭವಿಸಿ ಪ್ರತಿವರ್ಷವೂ ಬರಗಾಲ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಲ್ಲೆಯಲ್ಲಿ ಪರಿಸರದ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಂತಿಲ್ಲ. ಪರಿಸರದ ಮೇಲೆ ಮರ ಗಳ್ಳರಿಂದ ನಿರಂತರ ದಾಳಿ ನಡೆಯುತ್ತಿದ್ದರೂ, ಜಿಲ್ಲೆಯ ಅರಣ್ಯ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಇರುವ ಮರಗಿಡಗಳನ್ನಾದರೂ ರಕ್ಷಿಸುವತ್ತ ಗಮನಹರಿಸಬೇಕಾಗಿದೆ.

 

-ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.