144 ಸೆಕ್ಷನ್‌ ಜಾರಿ: ವಿಸ್ತೃತ ವಿಚಾರಣೆ ನಡೆಯಬೇಕಿದೆ ಎಂದ ಹೈಕೋರ್ಟ್‌

ವಿಚಾರಣೆ ಜ.7ಕ್ಕೆ ಮುಂದೂಡಿಕೆ

Team Udayavani, Dec 20, 2019, 9:35 PM IST

High-court-Karnataka-New

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುವ ಹಿನ್ನೆಲೆಯಲ್ಲಿ ನಗರಾದ್ಯಂತ ಸೆಕ್ಷನ್‌ 144 ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಡಿ.18ರಂದು ಹೊರಡಿಸಿದ್ದ ಆದೇಶದ “ಕಾನೂನು ಬದ್ಧತೆ ಹಾಗೂ ಸಿಂಧುತ್ವದ’ ಕುರಿತು ವಿಸ್ತೃತ ವಿಚಾರಣೆ ನಡೆಸುವ ಅವಶ್ಯಕತೆಯಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

“ಯಾವ ವಿಷಯದ ಬಗ್ಗೆ ಪ್ರತಿಭಟನೆ ನಡೆಯುವುದಿತ್ತು ಅನ್ನುವುದು ನಮಗೆ ಸಂಬಂಧವಿಲ್ಲ. ಆದರೆ, 144 ಸೆಕ್ಷನ್‌ ಜಾರಿಗೊಳಿಸಲು ತೆಗೆದುಕೊಳ್ಳಲಾದ ನಿರ್ಣಯದ ಪ್ರಕ್ರಿಯೆಯಲ್ಲಿ ನಿಸ್ಸಂದೇಹವಾಗಿ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲಾಗಿರುವು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದು ಮುನ್ನೆಚ್ಚರಿಕಾ ಕ್ರಮ ಆಗಿರಬಹುದು. ಆದರೆ, ನಾಗರಿಕರ ಮೂಲಭೂತ ಹಕ್ಕಗಳ ಮೇಲೆ ಪರಿಣಾಮ ಬೀರಿದೆ’.

ಅಲ್ಲದೇ, 144 ಸೆಕ್ಷನ್‌ ಜಾರಿಗೊಳಿಸುವ ಮುನ್ನ ಅದಕ್ಕೆ ಬೇಕಾದ “ಅಭಿಪ್ರಾಯ ಸಂಗ್ರಹಣೆ’ ಮಾಡಿರುವ ಅಂಶ ಆದೇಶದಲ್ಲಿ ಗೋಚರವಾಗುತ್ತಿಲ್ಲ. ಆದ್ದರಿಂದ ಪ್ರತಿಭಟನೆಗೆ ನೀಡಲಾದ ಅನುಮತಿಯನ್ನು 114 ಸೆಕ್ಷನ್‌ ಜಾರಿ ಆದೇಶದ ಮೂಲಕ ಹಿಂದಕ್ಕೆ ಪಡೆಯಬಹುದೇ? ಅದೇ ರೀತಿ ಅನುಮತಿ ವಾಪಸ್‌ ಪಡೆಯುವ ಮೊದಲು ಹಾಗೂ ನಂತರ ಅರ್ಜಿದಾರರಿಗೆ ಅವಕಾಶಗಳನ್ನು ನೀಡಲಾಗಿತ್ತೇ? ಈ ಎಲ್ಲ ಅಂಶಗಳ ಕಾನೂನು ಪರಾಮರ್ಶೆ ನಡೆಯಬೇಕಾಗಿರುವುದರಿಂದ ಈ ಎಲ್ಲ ಅರ್ಜಿಗಳ ವಿಸ್ತೃತಗಳನ್ನು ವಿಸ್ತೃತವಾಗಿ ವಿಚಾರಣೆ ನಡೆಸುವ ಅವಶ್ಯಕತೆಯಿದೆ ಎಂದು ಹೈಕೋರ್ಟ್‌ ಹೇಳಿತು.

ನಗರ ಪೊಲೀಸ್‌ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಪ್ರೊ. ರಾಜೀವಗೌಡ, ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಪಿಯುಸಿಎಲ್‌ ಸಂಘಟನೆ, ಕವಿತಾ ಲಂಕೇಶ್‌, ಲಿಯೋ ಸಾಲ್ಡಾನಾ, ಅಶ್ವಿ‌ನಿ ಓಬಳೇಶ್‌ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಾದ ಪ್ರತಿವಾದ ಆಲಿಸಿದ ಬಳಿಕ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಅನುಮತಿ ನೀಡಿ ನಂತರ ಅವುಗಳನ್ನು ಹತ್ತಿಕ್ಕಲು ಬೆಂಗಳೂರು ನಗರದಲ್ಲಿ ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮಕ್ಕೆ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಆದರೆ, ನಿಷೇಧಾಜ್ಞೆ ಜಾರಿ ಆದೇಶಕ್ಕೆ ತಡೆ ನೀಡಬೇಕು ಎಂಬ ಅರ್ಜಿದಾರರ ಮನವಿ ಒಪ್ಪಿಲ್ಲ. ಹೇಗಿದ್ದರೂ ಶನಿವಾರ (ಡಿ.21) ನಿಷೇಧಾಜ್ಞೆ ಅವಧಿ ಮುಗಿಯಲಿದೆ. ಹಾಗಾಗಿ, ತಡೆ ನೀಡಲಾಗದು ಎಂದು ಹೇಳಿತು. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಜ.7ಕ್ಕೆ ಮುಂದೂಡಿತು.

ಹೊಸದಾಗಿ ಅರ್ಜಿ ಸಲ್ಲಿಸಿ: ಶಾಂತಿಯುತ ಪ್ರತಿಭಟನೆ ಅಥವಾ ರ್ಯಾಲಿ ನಡೆಸಲು ಅನುಮತಿ ಕೋರಿ ಅರ್ಜಿದಾರರು ಮೂರು ದಿನಗಳಲ್ಲಿ ಪೊಲೀಸರಿಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಅದನ್ನು ಪರಿಶೀಲಿಸಿ, ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್‌ ನೀಡಿತುವ ತೀರ್ಪು ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗದಂತೆ ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಪೊಲೀಸರು ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿತು.

ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರೊ. ರವಿವರ್ಮ ಕುಮಾರ್‌, ಆದಿತ್ಯ ಸೋಂಧಿ ವಾದ ಮಂಡಿಸಿದರು.

ಹೊಸದಾಗಿ ಆದೇಶ ಹೊರಡಿಸಬೇಕು
ನಗರದಲ್ಲಿ ನಿಷೇಧಾಜ್ಞೆ ಹೇರಿದ ಅವಧಿ ಡಿ.21ಕ್ಕೆ ಮುಗಿಯಲಿದ್ದು, ಅದನ್ನು ವಿಸ್ತರಿಸುವ ಸಾಧ್ಯತೆಗಳಿವೆ ಎಂದು ಅರ್ಜಿದಾರರ ಪರ ವಕೀಲರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಹಾಗಾಗುವುದಿಲ್ಲ. ಡಿ.18ರ ಆದೇಶ ಡಿ.21ಕ್ಕೆ ಕೊನೆಗೊಳ್ಳಲಿದೆ. ಒಂದೊಮ್ಮೆ ನಿಷೇಧಾಜ್ಞೆ ಮುಂದುವರಿಸುವ ಅಥವಾ ವಿಸ್ತರಿಸುವ ಪ್ರಮೆಯ ಎದುರಾದರೆ, ಸೂಕ್ತ ವರದಿಗಳನ್ನು ಪಡೆದುಕೊಂಡ ಬಳಿಕ ಅಗತ್ಯವೆನಿಸಿದರಷ್ಟೇ ನಿಷೇಧಾಜ್ಞೆ ಹೇರುವ ಬಗ್ಗೆ ಹೊಸದಾಗಿ ಆದೇಶ ಹೊರಡಿಸಬೇಕು ಎಂದು ನ್ಯಾಯಪೀಠ ತಾಕೀತು ಮಾಡಿತು.

ಎಲ್ಲಾ ಪ್ರತಿಭಟನೆಗಳು ಹಿಂಸಾರೂಪ ಪಡೆಯಲಿವೆಯೇ? ಸಿಜೆ ಪ್ರಶ್ನೆ
ಇದಕ್ಕೂ ಮುನ್ನ ಬೆಳಿಗ್ಗೆ ವಿಚಾರಣೆ ನಡೆದ ವಿಚಾರಣೆ ವೇಳೆ ಮುಖ್ಯನ್ಯಾಯಮೂರ್ತಿಗಳು, “”ಪ್ರತಿಯೊಂದು ಪ್ರತಿಭಟನೆಯೂ ಹಿಂಸಾರೂಪ ಪಡೆಯಲಿದೆಯೇ ಎಂಬ ಊಹೆಯ ಮೇರೆಗೆ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿದೆಯೇ? ”ಎಂದು ಪ್ರಶ್ನಿಸಿತು. ಅಲ್ಲದೆ, ನೀವು ಪ್ರತಿಯೊಂದು ಪ್ರತಿಭಟನೆಯನ್ನು ನಿಷೇಧಿಸುತ್ತೀರಾ? ಸರ್ಕಾರದ‌ದ ನೀತಿಗಳ ವಿರುದ್ಧ ಯಾರೂ ಧ್ವನಿ ಎತ್ತುವಂತಿಲ್ಲವೇ? ಯಾವ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಪ್ರತಿಭಟನೆಗೆ ಅನುಮತಿ ನೀಡಿದ್ದನ್ನು ರದ್ದುಗೊಳಿಸಿದ್ದೀರಿ, ಆ ಮೂಲಕ ಅವರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಿದ್ದೀರಿ”ಎಂದು ಪ್ರಶ್ನಿಸಿದರು

ಕಾನೂನು-ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ: ಅಡ್ವೋಕೇಟ್‌ ಜನರಲ್‌
ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ ನಾಗರಿಕರ ಸಂವಿಧಾನದತ್ತ ಮೂಲಭೂತ ಹಕ್ಕುಗಳ ರಕ್ಷಣೆಯ ಜೊತೆಗೆ ಗಲಭೆಗಳು ನಡೆಯಬಾರದು, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗಬಾರದು, ಸಾರ್ವಜನಿಕರ ಆಸ್ತಿ-ಪಾಸ್ತಿಗೆ ನಷ್ಟ ಆಗದಂತೆ ನೋಡಿಕೊಳ್ಳುವ ಸಾಂವಿಧಾನಿಕ ಜವಾಬ್ದಾರಿಯೂ ರಾಜ್ಯ ಸರ್ಕಾರದ ಮೇಲಿದೆ.

ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಶಾಂತಿಯುತ ಪ್ರತಿಭಟನೆಗೆ ಅಡ್ಡಿಯೂ ಇಲ್ಲ, ಅಭ್ಯಂತರವೂ ಇಲ್ಲ. ಆದರೆ, ಪ್ರತಿಭಟನೆಯಲ್ಲಿ ಸಮಾಜಘಾತುಕ ಶಕ್ತಿಗಳು ನುಸುಳಿ ಗಲಾಟೆ ಮಾಡಬಹುದು ಎಂಬ ಬಗ್ಗೆ ಕಳೆದ ವಾರದಿಂದ ನಿರಂತರವಾಗಿ ಗುಪ್ತಚರ ಹಾಗೂ ಇನ್ನಿತರೆ ಮೂಲಗಳಿಂದ ಸಿಕ್ಕಿದ್ದ ಮಾಹಿತಿ ಆಧಾರದಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾಯ್ದೆಯ ಪರ-ವಿರೋಧ ಎರಡೂ ಕಡೆಯ ಪ್ರತಿಭಟನೆಗಳು ನಡೆಯಲಿದ್ದವು. ಈ ಹಿನ್ನೆಲೆಯಲ್ಲಿ ಆಯುಕ್ತರು ತೀರ್ಮಾನ ತೆಗೆದುಕೊಂಡಿದ್ದಾರೆ. ಅಷ್ಟಕ್ಕೂ ವಿಶೇಷ ಸಂದರ್ಭಗಳಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದ ನಂತರವೂ ಸೆಕ್ಷನ್‌ 144 ಜಾರಿಗೊಳಿಸಬಹುದು ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.

ಮಂಗಳೂರು ಘಟನೆಗೆ ವಿಷಾದ:
ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ಇಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವಿಷಾದವಿದೆ. ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿಯವರು ಗುರುವಾರ ತಡ ರಾತ್ರಿವರೆಗೆ ಮುಸ್ಲಿಂ ಹಾಗೂ ಕ್ರೈಸ್ತ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಪ್ರತಿಭಟನೆ ಹಿಂಸಾಚಾರದ ರೂಪ ಪಡೆಯಲು ಕೇರಳದಿಂದ ಬಂದವರು ಕಾರಣ ಎಂಬ ಶಂಕೆಯಿದೆ ಎಂದು ಹೈಕೋರ್ಟ್‌ ಮುಂದೆ ಹೇಳಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.