ನೆಲಕ್ಕುರುಳಿದ “ಚೌಡಮ್ಮ ನ ಬೇವಿನ ಮರ’

ಕೊಳಹಾಳು ಚೌಡಮ್ಮ ದೇಗುಲಕ್ಕೆ ಹೊಂದಿಕೊಂಡಿದ್ದ ಬೇವಿನ ಮರ ರಸ್ತೆ ಅಗಲೀಕರಣಕ್ಕೆ ಬಲಿ

Team Udayavani, Dec 22, 2019, 1:36 PM IST

22-Decemebrer-12

ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 4ರ ಕೊಳಹಾಳು ಚೌಡಮ್ಮ ದೇಗುಲವನ್ನು ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ನೆಲಸಮಗೊಳಿಸಲಾಗಿದೆ. ಇದರ ಬೆನ್ನಲ್ಲೇ ಸುಮಾರು 120 ವರ್ಷಗಳಷ್ಟು ಹಳೆಯದಾದ ಹಾಗೂ ದೇಗುಲಕ್ಕೆ ಹೊಂದಿಕೊಂಡಿದ್ದ “ಚೌಡಮ್ಮನ ಮರ’ ಎಂದೇ ಪ್ರಸಿದ್ಧಿ ಪಡೆದಿದ್ದ ಬೇವಿನ ಮರವನ್ನು ಶನಿವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೆಲಕ್ಕುರುಳಿಸಿತು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಚಿತ್ರದುರ್ಗದಿಂದ ದಾವಣಗೆರೆವರೆಗಿನ ಮರಗಳನ್ನು ಕಡಿದು ಉರುಳಿಸಲಾಗಿತ್ತು. ಹೀಗೆ ನೆಲಕ್ಕುರುಳಿದ ಸುಮಾರು 100 ವರ್ಷಗಳ ಹಳೆಯದಾದ ಮರಗಳ ಸಂಖ್ಯೆ ನೂರರ ಗಡಿ ದಾಟಿತ್ತು. ಇದೇ ವೇಳೆ ಕೊಳಹಾಳು ಚೌಡಮ್ಮ ದೇಗುಲಕ್ಕೆ ಹೊಂದಿಕೊಂಡ ಬೇವಿನ ಮರವನ್ನು ಕೂಡ ಕಡಿಯಲು ಉದ್ದೇಶಿಸಲಾಗಿತ್ತು. ಆದರೆ ಗುತ್ತಿಗೆದಾರರು ದೇವಿ ಮಹಿಮೆಗೋ ಅಥವಾ ದೇವಿಯ ಕೃಪೆಗಾಗಿಯೋ ಇಲ್ಲಿನ ಮರಗಳನ್ನು ಕಡಿಯದೆ ದೇಗುಲಕ್ಕೆ ಐದು ಸಾವಿರ ರೂ. ಕಾಣಿಕೆ ನೀಡಿ ಮರ ಕಡಿಯುವುದಿಲ್ಲ ಎಂದು ತಿಳಿಸಿ ದೇವಿ ಆರ್ಶೀವಾದ ಪಡೆದು ಹೋಗಿದ್ದನ್ನು ಕೊಳಹಾಳು ಗ್ರಾಮದ ತಿಪ್ಪೇಸ್ವಾಮಿ ನೆನಪಿಸಿಕೊಂಡರು.

ಹೆದ್ದಾರಿ ಉದ್ದಗಲಕ್ಕೂ ಇದ್ದ ಮರಗಳ ಮಾರಣಹೋಮವೇ ನಡೆದು ಹೋದರೂ ಚೌಡಮ್ಮ ದೇಗುಲದ ಬೇವಿನ ಮರ ಮಾತ್ರ ಉಳಿದಿತ್ತು. ಹೀಗಾಗಿ ಕಳೆದ 15 ವರ್ಷಗಳ ಹಿಂದೆಯೇ ಕಡಿತಲೆಗೆ ಆಹುತಿ ಆಗಬೇಕಿದ್ದ ಈ ಬೇವಿನ ಮರದ ಸಾವಿನ ಅವಧಿ 15 ವರ್ಷಗಳಿಗೆ ವಿಸ್ತರಣೆ ಆಗಿತ್ತು. ಖ್ಯಾತ ಜ್ಯೋತಿಷಿಗಳ ಮೊರೆ ಹೋಗಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಆಗಬಹುದಾದ ಅಡ್ಡಿ ಆತಂಕಗಳನ್ನು ಪೂಜೆ, ಹೋಮ ಹವನಗಳನ್ನು ನಡೆಸಿ ನಿವಾರಿಸಿಕೊಂಡು ದೇಗುಲ ಸ್ಥಳಾಂತರಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದರು. ಶನಿವಾರ ಅಂತಿಮವಾಗಿ ಬೇವಿನಮರವನ್ನು ನೆಲಕ್ಕೆ ಉರುಳಿಸಿದ್ದಾರೆ.

ಇಡೀ ದೇಗುಲವನ್ನು ಕೆಡವಿದ ಬಳಿಕ ಬೇವಿನ ಮರ ಅನಾಥವಾದಂತೆ ತೋರುತ್ತಿತ್ತು. ಜೆಸಿಬಿ ಬಳಸಿ ಮರದ ಎಲ್ಲಾ ಕೊಂಬೆಗಳನ್ನು ಒಂದೊಂದಾಗಿ ಉರುಳಿಸಲಾಯಿತು. ಸಂಜೆ ವೇಳೆಗೆ ಇಡೀ ಮರ ನೆಲಕ್ಕೆ ಬಿತ್ತು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.