![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 23, 2019, 10:36 AM IST
ನವದೆಹಲಿ: ಜಾರ್ಖಂಡ್ ನ 19 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಈವರೆಗೂ ಯಾವ ಮುಖ್ಯಮಂತ್ರಿಯೂ ಎರಡನೇ ಬಾರಿ ಆಯ್ಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಹಾಲಿ ಮುಖ್ಯಮಂತ್ರಿ ರಘಬರ್ ದಾಸ್ ಮತ್ತೆ ಆಯ್ಕೆಯಾಗುವ ಮೂಲಕ ಸಂಪ್ರದಾಯವನ್ನು ಮುರಿಯಲಿದ್ದಾರೆಯೇ ಎಂಬುದು ಫಲಿತಾಂಶದಿಂದ ಬಹಿರಂಗವಾಗಬೇಕಾಗಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿಗೆ ಎರಡನೇ ಬಾರಿ ಗದ್ದುಗೆ ಏರಲು ಮತದಾರ ಅವಕಾಶ ಕೊಟ್ಟಿಲ್ಲ. 2014ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಘುಬರ್ ದಾಸ್ ಜೇಮ್ಶೆಡ್ ಪುರ್ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ 70 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
2000ನೇ ಇಸವಿಯಲ್ಲಿ ಜಾರ್ಖಂಡ್ ಪ್ರತ್ಯೇಕ ರಾಜ್ಯವಾಗಿ ರಚನೆಗೊಂಡ ನಂತರ ಮೂರು ವಿಧಾನಸಭಾ ಚುನಾವಣೆಗಳನ್ನು ಕಂಡಿದೆ. ಜಾರ್ಖಂಡ್ ರಾಜ್ಯ ರಾಜಕಾರಣದಲ್ಲಿ ಈವರೆಗೆ ಆರು ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಬಾಬುಲಾಲ್ ಮರಾಂಡಿ, ಅರ್ಜುನ್ ಮುಂಡಾ, ಶಿಬು ಸೋರೆನ್, ಮಧು ಕೋಡಾ, ಹೇಮಂತ್ ಸೋರೆನ್ ಹಾಗೂ ರಘಬರ್ ದಾಸ್ ಮುಖ್ಯಮಂತ್ರಿ ಗಾದಿಗೆ ಏರಿದ್ದರು.
2019ರಲ್ಲಿ ಜಾರ್ಖಂಡ್ ರಾಜ್ಯದಲ್ಲಿ 4ನೇ ವಿಧಾನಸಭಾ ಚುನಾವಣೆ ನಡೆಯುತ್ತಿದೆ. 2000ನೇ ಇಸವಿ ನವೆಂಬರ್ 15ರಂದು ಬಿಹಾರ ರಾಜ್ಯದೊಳಗಿದ್ದ ಜಾರ್ಖಂಡ್ ಅನ್ನು ಪ್ರತ್ಯೇಕಿಸಿ ನೂತನ ರಾಜ್ಯವನ್ನಾಗಿ ಮಾಡಲಾಗಿತ್ತು.
2008ರ ಆಗಸ್ಟ್ 27ರಂದು ಮಧು ಕೋಡಾ ಜಾರ್ಖಂಡ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದರು. ನಂತರ ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖ್ಯಸ್ಥ ಶಿಬು ಸೋರೆನ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಂವಿಧಾನದ ಪ್ರಕಾರ ಸೋರೆನ್ ಆರು ತಿಂಗಳೊಳಗೆ ಟಾಮರ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ ಜಾರ್ಖಂಡ್ ಪಾರ್ಟಿಯ ರಾಜಾ ಪೀಟರ್ 8,973 ಮತಗಳ ಅಂತರದಿಂದ ಶಿಬು ಸೋರೆನ್ ಅವರನ್ನು ಸೋಲಿಸಿದ್ದರು. ರಾಜಾ ಪೀಟರ್ 34, 127 ಮತ ಪಡೆದಿದ್ದರೆ, ಸೋರೆನ್ 25,154 ಮತ ಗಳಿಸಿದ್ದರು. ನಂತರ ಶಿಬು ಸೋರೆನ್ ಸಿಎಂ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.