ಮಂಗಳೂರು ಘಟನೆ: ಸಿಬಿಐ ತನಿಖೆಗೆ ಆಗ್ರಹ
Team Udayavani, Dec 24, 2019, 3:03 AM IST
ಬೆಂಗಳೂರು: ಮಂಗಳೂರು ಘಟನೆಗೆ ಬಿಜೆಪಿ ನೇರ ಕಾರಣ ಎಂದು ಆರೋಪಿಸಿರುವ ಕಾಂಗ್ರೆಸ್ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಆದರೆ, ಇದರಿಂದ ಸತ್ಯ ಹೊರಬರುವುದಿಲ್ಲ. ಹಾಗಾಗಿ ಸಿಬಿಐಗೆ ವಹಿಸಬೇಕೆಂದು ಆಗ್ರಹಪಡಿಸಿದರು.
ಕೇರಳದಿಂದ ಕಪ್ಪುಪಟ್ಟಿ ಕಟ್ಟಿಕೊಂಡು ಬಂದವರು ಹಿಂಸಾಚಾರ ನಡೆಸಿದರು ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಗುಪ್ತಚರ ಇಲಾಖೆ ಸಿಎಂ ಬಳಿಯೇ ಇದೆಯಲ್ಲ. ಕಪ್ಪುಪಟ್ಟಿ ಧರಿಸಿದವರು ಯಾರು, ಎಲ್ಲಿಂದ ಬಂದವರು ಅನ್ನೋದು ಗೊತ್ತಾಗಲಿಲ್ವಾ ಎಂದು ಪ್ರಶ್ನಿಸಿದರು.
ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ಷಾ ಅವರಿಗೆ ತಾಳ ತಪ್ಪಿದಂತೆ, ರಾಜ್ಯದಲ್ಲೂ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ನಡುವೆ ತಾಳಮೇಳ ಇಲ್ಲ. ಸಿಎಂ ಒಂದು ಹೇಳಿದರೆ, ಗೃಹ ಸಚಿವರು ಮತ್ತೇನೊ ಹೇಳುತ್ತಾರೆ. ಹೀಗಾಗಿ ಮಂಗಳೂರಿನಲ್ಲಿ ಅವಘಡ ಜರುಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.