“ಸಲಗ’ನಿಗಾಗಿ ಮತ್ತೆ ಕಡಲೆಕಾಯಿ ಪರಿಷೆ


Team Udayavani, Dec 26, 2019, 7:02 AM IST

salaga

ಪ್ರತಿವರ್ಷದಂತೆ ಈ ವರ್ಷ ಕೂಡ ಇತ್ತೀಚೆಗಷ್ಟೆ ಬಸವನ ಗುಡಿಯಲ್ಲಿ ಕಡಲೆ ಕಾಯಿ ಪರಿಷೆ ಜೋರಾಗಿ ನಡೆದಿದ್ದು ನಿಮಗೆ ನೆನಪಿರಬಹುದು. ಜನ ತಮ್ಮ ಮನೆಮಂದಿಯ ಜೊತೆಗೆ ಹೋಗಿ ಕಡಲೆ ಕಾಯಿ ಪರಿಷೆಯನ್ನು ಎಂಜಾಯ್‌ ಕೂಡ ಮಾಡಿದ್ದರು. ಈಗ ಅದೇ ಜಾಗದಲ್ಲಿ ಮತ್ತೆ ಕಡಲೆ ಕಾಯಿ ಪರಿಷೆ ಶುರುವಾಗಿದೆ. ಹೌದು, ಇಲ್ಲಿಯವರೆಗೆ ಕಡಲೆಕಾಯಿ ಪರಿಷೆ ಬಸವನಗುಡಿಯ ಬಸವನಿಗಾಗಿ ನಡೆಯುತ್ತಿದ್ದರೆ, ಈ ಬಾರಿ “ಸಲಗ’ನಿಗಾಗಿ ನಡೆಯುತ್ತಿದೆ.

ಅದು ಚಿತ್ರೀಕರಣದ ಸಲುವಾಗಿ. ದುನಿಯಾ ವಿಜಯ್‌ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿರುವ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ “ಸಲಗ’ ಚಿತ್ರದ ಕ್ಲೈಮಾಕ್ಸ್‌ ದೃಶ್ಯಗಳನ್ನು ಇತ್ತೀಚೆಗೆ ನಡೆದ ಕಡಲೆಕಾಯಿ ಪರಿಷೆಯಲ್ಲಿ ನೈಜವಾಗಿ ಸೆರೆಹಿಡಿಯಲಾಗಿತ್ತು. ಆದರೆ ಕ್ಲೈಮ್ಯಾಕ್ಸ್‌ನ ಕೆಲ ಭಾಗದ ಶೂಟಿಂಗ್‌ನಲ್ಲಿ ಅತಿಯಾದ ಜನಜಂಗುಳಿಯಿದ್ದ ಕಾರಣ ಕೆಲ ದೃಶ್ಯಗಳನ್ನು ಚಿತ್ರೀಕರಿಸಲು ಸಾಧ್ಯವಾಗಿರಲಿಲ್ಲ.

ಹಾಗಾಗಿ ಈಗ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದ ಆವರಣದಲ್ಲಿ ಮತ್ತೂಮ್ಮೆ ಕಡಲೆ ಕಾಯಿ ಪರಿಷೆ ಸೆಟ್‌ ನಿರ್ಮಿಸಿರುವ ಚಿತ್ರತಂಡ, ಬಿಟ್ಟು ಹೋಗಿರುವ ಕ್ಲೈಮ್ಯಾಕ್ಸ್‌ ದೃಶ್ಯಗಳನ್ನು ಚಿತ್ರೀಕರಿಸುವ ಕೆಲಸದಲ್ಲಿ ನಿರತವಾಗಿದೆ. ಈ ಬಗ್ಗೆ ಮಾತನಾಡುವ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್‌, “ಚಿತ್ರದ ಕ್ಲೈಮ್ಯಾಕ್ಸ್‌ ಆದಷ್ಟು ರಿಯಾಲಿಸ್ಟಿಕ್‌ ಆಗಿ ಮೂಡಿಬರಬೇಕು ಎಂಬ ಕಾರಣಕ್ಕೆ ಬಸವನಗುಡಿಯ ಪ್ರಸಿದ್ದ ಕಡಲೆ ಕಾಯಿ ಪರಿಷೆಯಲ್ಲಿ ಕ್ಲೈಮ್ಯಾಕ್ಸ್‌ ಬಾಗವನ್ನು ಶೂಟಿಂಗ್‌ ಮಾಡಲು ನಿರ್ಧರಿಸಿದ್ದೆವು.

ಅದರಂತೆ ಬಹುತೇಕ ದೃಶ್ಯಗಳನ್ನು ಅಲ್ಲಿಯೇ ಚಿತ್ರೀಕರಿಸಿದ್ದೆವು. ಆದರೆ ಕ್ಲೈಮ್ಯಾಕ್ಸ್‌ನಲ್ಲಿ ಬರುವ ಕೆಲ ಆ್ಯಕ್ಷನ್‌ ದೃಶ್ಯಗಳನ್ನು ಕಡಲೆ ಕಾಯಿ ಪರಿಷೆಯಲ್ಲಿ ಜನಜಂಗುಳಿ ಜಾಸ್ತಿಯಿದ್ದ ಕಾರಣ ಶೂಟಿಂಗ್‌ ಮಾಡಲು ಆಗಿರಲಿಲ್ಲ. ಅದಕ್ಕಾಗಿ ಆಗ ಬಿಟ್ಟು ಹೋಗಿದ್ದ ಕೆಲ ದೃಶ್ಯಗಳನ್ನು ಅದೇ ಲೊಕೇಶನ್‌ನಲ್ಲಿ ಕಡಲೆ ಕಾಯಿ ಪರಿಷೆಯನ್ನು ರೀ-ಕ್ರಿಯೆಟ್‌ ಮಾಡಿ ಚಿತ್ರೀಕರಿಸುತ್ತಿದ್ದೇವೆ. ಕಳೆದ ಮೂರು ದಿನಗಳಿಂದ ಈ ಚಿತ್ರೀಕರಣ ನಡೆಯುತ್ತಿದ್ದು, ಕ್ಲೈಮ್ಯಾಕ್ಸ್‌ ಚಿತ್ರೀಕರಣ ಇಲ್ಲಿಗೆ ಮುಗಿಯುತ್ತದೆ.

ಇನ್ನು ಈ ಮೊದಲು ಕಡಲೆ ಕಾಯಿ ಪರಿಷೆಗೆ ದೀಪಾಲಂಕಾರ ಮಾಡಿದ್ದವರೇ, ಈ ಸೆಟ್ಗೂ ಅಲಂಕಾರ ಮಾಡಿದ್ದಾರೆ. 60ಕ್ಕೂ ಹೆಚ್ಚು ಅಂಗಡಿಗಳನ್ನು ಮತ್ತೆ ಹಾಕಲಾಗಿದೆ’ ಎಂದು ಮಾಹಿತಿ ಕೊಡುತ್ತಾರೆ. “ಸಲಗ’ ಚಿತ್ರದಲ್ಲಿ ದುನಿಯಾ ವಿಜಯ್‌ ಅವರಿಗೆ ಸಂಜನಾ ಆನಂದ್‌ ನಾಯಕಿಯಾಗಿ ಅಭಿನಯಿಸುತ್ತಿದ್ದು, ಡಾಲಿ ಧನಂಜಯ್‌ ಇನ್ನೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಭರದಿಂದ ಚಿತ್ರೀಕರಣದಲ್ಲಿರುವ “ಸಲಗ’ ಹೊಸವರ್ಷದಲ್ಲಿ ತೆರೆಗೆ ಬರಲಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.