![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 27, 2019, 7:30 PM IST
ರಾಂಚಿ: ಝಾರ್ಖಂಡ್ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಮ್ಮನ್ನು ಭೆಟಿಯಾಗಲು ಬರುವವರಲ್ಲಿ ಒಂದು ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ. ಅದೆಂದರೆ ತನ್ನ ಭೇಟಿಯ ಸಮಯದಲ್ಲಿ ತನಗೆ ಹೂಗುಚ್ಛವನ್ನು ನೀಡುವ ಬದಲು ಉತ್ತಮ ಪುಸ್ತಕ ಒಂದನ್ನು ನೀಡುವಂತೆ ಸೊರೇನ್ ಮನವಿ ಮಾಡಿಕೊಂಡಿದ್ದಾರೆ.
‘ನೀವು ನನಗೆ ಹೂಗುಚ್ಛಗಳನ್ನು ನೀಡಿದಲ್ಲಿ, ಅವುಗಳು ಆ ಬಳಿಕ ಮೂಲೆಯಲ್ಲೆಲ್ಲೋ ಬಿದ್ದು ಆ ಬಳಿಕ ಮುದುರಿ ಹಾಳಾಗುತ್ತದೆ ಮತ್ತು ನನಗೆ ಅವುಗಳನ್ನು ಜತನದಿಂದ ಕಾಪಾಡಿಕೊಳ್ಳಲೂ ಆಗುವುದಿಲ್ಲ, ಆದರೆ ಇದಕ್ಕೆ ಬದಲಾಗಿ ನೀವು ಪುಸ್ತಕ ಒಂದನ್ನು ನೀಡಿದರೆ ಅದು ನನ್ನ ತಿಳುವಳಿಕೆಯನ್ನು ಅರಳಿಸುತ್ತದೆ’ ಎಂಬರ್ಥದ ಹಿಂದಿ ಟ್ವೀಟ್ ಅನ್ನು ಸೊರೇನ್ ಅವರು ಮಾಡಿದ್ದಾರೆ.
ರಾಜ್ಯದಲ್ಲಿ ಅಧಿಕಾರದಲ್ಲಿ ಭಾರತೀಯ ಜನತಾ ಪಕ್ಷದ ಸರಕಾರವನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ ಹೇಮಂತ್ ಸೊರೇನ್ ನಾಯಕತ್ವದ ಜೆ.ಎಂ.ಎಂ., ಕಾಂಗ್ರೆಸ್, ಆರ್.ಜೆ.ಡಿ. ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಮತ್ತು ಜೆ.ಎಂ.ಎಂ. ಪಕ್ಷದ ಹೇಮಂತ್ ಸೊರೇನ್ ಅವರು ರಾಜ್ಯದ ಏಳನೇ ಮುಖ್ಯಮಂತ್ರಿಯಾಗಿ ಡಿಸೆಂಬರ್ 29ರ ಆದಿತ್ಯವಾರದಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
साथियों,
मैं अभिभूत हूँ आप झारखंडवासियों के प्यार एवं सम्मान से।
पर मैं आप सबसे एक करबद्ध प्रार्थना करना चाहूँगा, कि कृपया कर मुझे फूलों के ‘बुके’ की जगह ज्ञान से भरे ‘बुक’ मतलब अपने पसंद की कोई भी किताब दें। मुझे बहुत बुरा लगता है की मैं आपके फूलों को सम्भाल नहीं पाता।
1/2 pic.twitter.com/RXVQ7aghXW— Hemant Soren (@HemantSorenJMM) December 27, 2019
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.