ಗಜೇಂದ್ರಗಡದಲ್ಲಿ ಎಳ್ಳ ಅಮಾವಾಸ್ಯೆ ಸಂಭ್ರಮ


Team Udayavani, Dec 28, 2019, 12:51 PM IST

gadaga-tdy-2

ಗಜೇಂದ್ರಗಡ: ಅನ್ನದಾತರ ಅಚ್ಚುಮೆಚ್ಚಿನ ಹಬ್ಬವಾದ ಎಳ್ಳು ಅಮಾವಾಸ್ಯೆ ಚರಗ ಪ್ರಯುಕ್ತ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತ ಸಮೂಹ ಹೊಲದಲ್ಲಿ ಬೆಳೆದ ಬೆಳೆಗಳ ಮಧ್ಯೆ ಬನ್ನಿ ವೃಕ್ಷಕ್ಕೆ ಮತ್ತು ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಶುಕ್ರವಾರ ಸಂಭ್ರಮದಿಂದ ಚರಗದ ಹಬ್ಬ ಆಚರಿಸಲಾಯಿತು.

ಈ ಬಾರಿ ಎಳ್ಳ ಅಮಾವಾಸ್ಯೆ ದಿನವೇ ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಕೆಲ ರೈತರು ಅಮಾವಾಸ್ಯೆ ಮುನ್ನಾ ದಿನವೇ ಹಬ್ಬ ಆಚರಿಸಿದರೆ ಇನ್ನು ಕೆಲ ರೈತರು ಗ್ರಹಣ ಕಳೆದ ಮರುದಿನ ಶುಕ್ರವಾರ ಸಂಪ್ರದಾಯ ಬದ್ಧವಾಗಿ ಒಕ್ಕಲುತನದ ಹಬ್ಬ ಆಚರಿಸಿದರು. ಬೆಳಗ್ಗೆ ರೈತರು ನಿತ್ಯದ ಒಡನಾಡಿ ಎತ್ತುಗಳನ್ನು ಮೈ ತೊಳೆದು ಸಿಂಗರಿಸಿ ಹೂಡಿದ ಬಂಡಿ, ಟ್ರಾಕ್ಟರ್‌, ಟಂಟಂ ವಾಹನಗಳಲ್ಲಿ ಕುಟುಂಬ ಮಹಿಳೆಯರು, ಮಕ್ಕಳು, ಗೆಳೆಯರು ಹಾಗೂ ವಿಶೇಷ ಆಮಂತ್ರಿತರ ಜೊತೆಗೂಡಿ ಬುತ್ತಿ ಸಮೇತ ಹೊಲಗಳಿಗೆ ತೆರಳಿ ಹರ್ಷದಿಂದ ಬನ್ನಿಗಿಡಕ್ಕೆ ಸಾಮೂಹಿಕ ಪೂಜೆ ಸಲ್ಲಿಸಿದರು.

ಹಿಂಗಾರಿ ಹಂಗಾಮಿನಲ್ಲಿ ಹುಲುಸಾಗಿ ಮೈ ಕೊಡವಿ ನಿಂತಿರುವ ಜೋಳ, ಕಡಲೆ, ಗೋಧಿಯ ಬೆಳೆಯಲ್ಲಿ ಹುಲಿಗ್ಯೋಸುರಂಬಳಗ್ಯೊ ಎನ್ನುವ ಉದ್ಘೋಷ ಹಾಕುತ್ತಾ, ಗಂಗಾ ಸ್ವರೂಪ ನೀರಿನ ಜೊತೆ ಸಿದ್ಧಪಡಿಸಿದ ಯಳ್ಳು ಹೊಳಿಗೆ ಭೂತಾಯಿ ಮಡಲಿಗೆ ಸಮರ್ಪಿಸಿ ನಮಿಸಿದರು.

ಮಹಿಳೆಯರು ಕಳೆದ ಮೂರ್‍ನಾಲ್ಕು ದಿನಗಳಿಂದ ಶ್ರಮಪಟ್ಟು ಸಿದ್ಧಪಡಿಸಿದ ವಿಶೇಷ ಖಾದ್ಯಗಳಾದ ಕಡಬು, ಎಳ್ಳು ಹೋಳಿಗೆ, ಜೋಳದ ರೊಟ್ಟಿ, ಸಜ್ಜಿರೊಟ್ಟಿ, ಚಪಾತಿ, ಯಣ್ಣಿಗಾಯಿ, ಹೆಸರು ಕಾಳು ಪಲ್ಲೆ, ಶೇಂಗಾ, ಗುರೆಳ್ಳು, ಚಟ್ನಿ, ಕೆನಿ ಮೊಸರಿನ ಊಟವನ್ನು ಕುಟುಂಬ ಹಿತೈಸಿಗಳ ಜತೆ ಸವಿದರು. ವರ್ಷಪೂರ್ತಿ ಹೊಲದ ಮುಖ ನೋಡದ ಸರಕಾರಿ ನೌಕರರು, ಬ್ಯಾಂಕ್‌ ಅಧಿಕಾರಿಗಳು, ವರ್ತಕರು, ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಮಾಡುವ ಜನರು ಹೊಲದ ಊಟದಲ್ಲಿ ಪಾಲ್ಗೊಂಡು ಒತ್ತಡದ ಬದುಕಿಗೆ ಕೆಲ ಸಮಯ ವಿದಾಯ ಹೇಳಿದರು.

ಊಟ ಮಾಡಿದ ಬಳಿಕ ಮಹಿಳೆಯರು ಮಕ್ಕಳು ಹೊಲದ ತುಂಬೆಲ್ಲ ಸುತ್ತಾಡಿ ಕಡಲೆ, ಬದುವಿನಲ್ಲಿ ಬೆಳೆದಿರುವ ತರಕಾರಿ ಪಡೆದರು. ವಿಶ್ರಾಂತಿ ನಂತರ ಗೋಧೂಳಿಯ ಸಮಯದಲ್ಲಿ ಬರಿದಾದ ಬುತ್ತಿ ಗಂಟಿನ ಸಾಮಾನುಗಳ ಸಮೇತ ಒಲ್ಲದ ಮನಸ್ಸಿನಿಂದ ಬಂಡಿ ಹತ್ತಿ ಮನೆಗಳಿಗೆ ತೆರಳಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.