ಹನಮಸಾಗರ ಗ್ರಾಪಂ ಆಡಳಿತ ನಿಷ್ಕ್ರಿಯ


Team Udayavani, Dec 28, 2019, 2:31 PM IST

kopala-tdy-2

ಹನಮಸಾಗರ: ಜಿಲ್ಲೆಯೇ ಅತಿ ದೊಡ್ಡ ಗ್ರಾಮ ಪಂಚಾಯತ್‌ ಎಂಬ ಹಣೆಪಟ್ಟಿ ಹೊಂದಿರುವ ಹನುಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲದೇ ಆಡಳಿತ ಯಂತ್ರ ಸ್ಥಗಿತಗೊಂಡಾಗಿದ್ದು, ಸಾರ್ವಜನಿಕರು ಅಗತ್ಯ ಕೆಲಸಗಳಿಗಾಗಿ ಪರದಾಡುವಂತಾಗಿದೆ. ಗ್ರಾಪಂನಲ್ಲಿ ಪಿಡಿಒ ಇಲ್ಲದ ಕಾರಣ ಸಾರ್ವಜನಿಕರು ಮನೆ ಉತಾರ, ಕಟ್ಟಡ ಪರವಾನಗಿ, ಜಿಪಿಎಸ್‌ ಇತ್ಯಾದಿ ಕೆಲಸ ಕಾರ್ಯಗಳಿಗೆ ನಿತ್ಯ 5-6 ಬಾರಿ ಅಲೆದಾಡುವಂತಾಗಿದೆ. ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ಸಾರ್ವಜನಿಕರು ಗ್ರಾಪಂಗೆ ಎಡತಾಕುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಪಿಡಿಒ ಇಲ್ಲ, ಬಂದ ಮೇಲೆ ಬನ್ನಿ ಎಂದು ಗ್ರಾಪಂ ಸಿಬ್ಬಂದಿಯಿಂದ ಸಿದ್ಧ ಉತ್ತರ ಸಿಗುತ್ತದೆ.

ಒಂದು ವಾರದ ಹಿಂದೆ ಪಿಡಿಒ ದೇವೇಂದ್ರ ಕಮತರ ಅವರ ಬದಲಾಗಿ ನಿಂಗಪ್ಪ ಮೂಲಿಮನಿ ಎನ್ನುವವರು ಅಧಿಕಾರ ವಹಿಸಿಕೊಂಡಿದ್ದರು. ಅಧಿಕಾರ ವಹಿಸಿಕೊಂಡ ಬಳಿಕ ಅವರು ಮರಳಿ ಪಂಚಾಯತ್‌ ಕಡೆ ತಲೆಯನ್ನೇ ಹಾಕಿಲ್ಲ. ಪಂಚಾಯತಿಯಲ್ಲಿ ಹೇಳುವವರು, ಕೇಳುವವರು ಇಲ್ಲದಂತಾಗಿದೆ. ಈ ಹಿಂದೆಯೂ ಪಿಡಿಒ ಅವರನ್ನು ವರ್ಗಾವಣೆ ಮಾಡಿ, ಮಹಿಳಾ ಪಿಡಿಒ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ತಿಳಿಸಿದ್ದರು. ಆಗಲೂ ಅವರು ಒಂದು ದಿನ ಅಧಿಕಾರ ವಹಿಸಿಕೊಂಡು ನಂತರ ಬರಲೇ ಇಲ್ಲ. ದಿಢೀರನೇ ಈ ಮೊದಲಿನ ಪಿಡಿಒ ಅವರು ವರ್ಗಾವಣೆಯಾಗಿದ್ದಾರೆ.

ಅವರ ಸ್ಥಾನಕ್ಕೆ ನಿಂಗಪ್ಪ ಮೂಲಿಮನಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರಭಾರ ಅಧಿಕಾರ ವಹಿಸಿಕೊಂಡಿರುವ ಜಹಗೀರ ಗುಡದೂರ ಗ್ರಾಪಂ ಪಿಡಿಒ ನಿಂಗಪ್ಪ ಮೂಲಿಮನಿ ಮಾತನಾಡಿ, ಮೇಲಾಧಿಕಾರಿಗಳ ಆದೇಶದ ಮೇರೆಗೆ ಅಧಿಕಾರವಹಿಸಿಕೊಂಡಿದ್ದೆ. ಆದರೆ ತಾತ್ಕಾಲಿಕವಾಗಿ ಬೇಡ ಎಂದು ತಿಳಿಸಿದ್ದರಿಂದ ಪುನಃ ಪಂಚಾಯಿತಿಗೆ ತೆರಳಿಲ್ಲ ಎಂದು ಹೇಳಿದರು.

ಅಧಿಕಾರಿಗಳ ಈ ನಡೆ ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿದೆ. ಹನುಮಸಾಗರ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೇ ನಿಯೋಜಿಸಿ ಅವರಿಗೆ ಸಂಪೂರ್ಣ ಅಧಿಕಾರ ಹಸ್ತಾಂತರಿಸುವ ಮೂಲಕ ಕುಂಠಿತಗೊಂಡಿರುವ ಗ್ರಾಪಂ ಕಾರ್ಯಗಳಿಗೆ ವೇಗ ನೀಡಬೇಕು. ಇಲ್ಲವಾದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ಪ್ರಸ್ತುತ ಪಿಡಿಒ ದೇವೆಂದ್ರ ಕಮತರ ವೈದ್ಯಕೀಯ ರಜೆ ಮೇಲೆ ತೆರಳಿದ್ದು, ಬಂದ ಬಳಿಕ ಅವರು ಮುಂದುವರಿಯುತ್ತಾರೆ. ಪಿಡಿಒ ನಿಂಗಪ್ಪ ಮೂಲಿಮನಿ ಅವರು ಅದೇ ಪಂಚಾಯಿತಿಯಲ್ಲಿ ಅಮಾನತು ಆಗಿದ್ದರಿಂದ ಅಲ್ಲಿ ಪುನಃ ನೇಮಿಸಲು ಬರುವುದಿಲ್ಲ. ಆದ್ದರಿಂದ ತಾತ್ಕಾಲಿತವಾಗಿ ಪ್ರಭಾರಿಯಾಗಿ ಚಳಗೇರಾ ಪಿಡಿಒ ಬಸವರಾಜ ಸಂಕನಾಳ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಸೋಮವಾರ ಅವರು ಅಧಿಕಾರ ಸ್ವೀಕರಿಸುವರು. –ತಿಮ್ಮಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಕುಷ್ಟಗಿ

 

-ವಸಂತ ಶಿನ್ನೂರು

ಟಾಪ್ ನ್ಯೂಸ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.