ಯರಗೋಳು ಯೋಜನೆಗೆ ಶೀಘ್ರ ಚಾಲನೆ


Team Udayavani, Dec 28, 2019, 3:37 PM IST

kolar-tdy-1

ಕೋಲಾರ: ಯರಗೋಳು ಯೋಜನೆಗೆ ಮುಂದಿನ 2 ತಿಂಗಳಲ್ಲಿ ಚಾಲನೆ ಸಿಗಲಿದ್ದು, ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ನಾಗೇಶ್‌ ತಿಳಿಸಿದರು.

ಶುಕ್ರವಾರ ನಗರದ ರಂಗಮಂದಿರದ ಆವರಣದಲ್ಲಿನ ಡಿವಿಜಿ ಭವನದಲ್ಲಿ ಸರ್ಕಾರದ 100 ದಿನಗಳ ಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾನತಾಡಿದರು. ನೂರು ದಿನಗಳ ಆಡಳಿತ ತೃಪ್ತಿಕರ: ಸರ್ಕಾರದ 100 ದಿನಗಳ ಆಡಳಿತ ತಮಗೆ ತೃಪ್ತಿ ತಂದಿದೆ. ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಉಂಟಾದ ನೆರೆ ಮತ್ತು ಉಪಚುನಾವಣೆ ನಡುವೆಯೂ ಸರ್ಕಾರ ಉತ್ತಮ ಸಾಧನೆ ಮಾಡಿದೆ. ನಗರದ ಕೋಲಾರಮ್ಮ ಕೆರೆ ಅಭಿವೃದ್ಧಿ ಕಾರ್ಯ ವೇಗದಿಂದ ಸಾಗಿದ್ದು, ಇಲಿ ಉದ್ಯಾನವನ ದೋಣಿವಿಹಾರಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದರು. ಈ ಕೆರೆಗೆ ಕೆಸಿ ವ್ಯಾಲಿ ನೀರು ಬರುವುದರಿಂದ ಅಂತರ್ಜಲ ವೃದ್ಧಿಯಾಗಿ ನೀರಿನ ಸಮಸ್ಯೆಯೂ ಕೊನೆಗೊಳ್ಳಲಿದೆ ಎಂದರು.

1,13,000 ಮನೆಗಳಿಗೆ ತಲಾ ಒಂದು ಲಕ್ಷ: ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರೂ. ನೀಡಿದೆ. ಈಗಾಗಲೇ ಮನೆ ಕಳೆದುಕೊಂಡಿರುವ 1,13,000 ಮಂದಿಗೆ ಮನೆ ನಿರ್ಮಿಸಿಸಿಕೊಳ್ಳಲು ಮೊದಲ ಕಂತಾಗಿ ತಲಾ 1 ಲಕ್ಷ ರೂ. ನೀಡಲಾಗಿದೆ ಎಂದು ತಿಳಿಸಿದರು. ಮನೆ ಶಿಥಿಲಗೊಂಡು ದುರಸ್ತಿಗೆ 50 ಸಾವಿರ ರೂ. ನೀಡಲಾಗಿದೆ. ರಸ್ತೆ, ಡ್ಯಾಂ ಮತ್ತಿತರ ಹಾನಿಗೆ ಲೋಕೋಪಯೋಗಿ ಇಲಾಖೆಯಿಂದ 750 ಕೋಟಿ ರೂ.ಗಳ ಕಾಮಗಾರಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಶಾಲಾ ಕಟ್ಟಡಗಳಿಗೂ ಹಾನಿಯಾಗಿದ್ದು, ದುರಸ್ತಿ ಕಾರ್ಯ ಸಾಗಿದೆ. ಪುಸ್ತಕ ಕಳೆದುಕೊಂಡ ಮಕ್ಕಳಿಗೆ ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಗಂಜಿ ಕೇಂದ್ರಗಳನ್ನು ಸ್ಥಾಪಿಸಿ ಊಟ, ಬಟ್ಟೆ ಮತ್ತಿತರ ಪರಿಕರಗಳನ್ನು ಒದಗಿಸಿದ್ದು, ಜಾನುವಾರು ಕಳೆದುಕೊಂಡವರಿಗೂ ಪರಿಹಾರ ನೀಡಲಾಗಿದೆ. ಇದಕ್ಕೆ ರಾಜ್ಯದ ಅನೇಕ ಮಂದಿ ನೆರವು ಹರಿಸಿದ್ದಾರೆ ಎಂದರು.

ನೆರೆ, ಉಪಚುನಾವಣೆಯಿಂದ ಸ್ವಲ್ಪ ನಿಧಾನಗತಿಯಲ್ಲಿದ್ದ ಆಡಳಿತಕ್ಕೆ ಚುರುಕು ನೀಡಲಾಗಿದೆ. ಸುಭೀಕ್ಷತೆಯತ್ತ ಸಾಗುತ್ತಿದ್ದು, ಕೈಗಾರಿಕೆಗಳಿಗೆ ಉತ್ತೇಜನ, ವಸತಿಯೋಜನೆಗಳಿಗೆ ಬಾಕಿಯಿದ್ದ ಹಣ ಬಿಡುಗಡೆಗೆ ಕ್ರಮ,ಕುಡಿಯುವ ನೀರಿಗೆ ಆದ್ಯತೆ, ಪರಿಶಿಷ್ಟರ ಕೊಳವೆ ಬಾವಿಗಳಿಗೆ ಸಹಾಯಧನ ಬಿಡುಗಡೆ, ಜಾನುವಾರು ಸಾಲಕ್ಕೆ ಒತ್ತು ನೀಡಲಾಗಿದೆ ಎಂದರು.

ಗೋಲಿಬಾರ್‌ ಘಟನೆ: ಪರಿಹಾರಕ್ಕೆ ತಡೆ: ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಸರ್ಕಾರ ಘೋಷಿಸಿದ್ದ ಪರಿಹಾರಕ್ಕೆ ತಡೆನೀಡಲಾಗಿದೆ, ಅನೇಕರಿಗೆ ಹೋರಾಟ ಏನಕ್ಕೆ ಮಾಡುತ್ತಿದ್ದೇವೆ ಎಂಬುದೇ ಗೊತ್ತಿರಲಿಲ್ಲ, ಕೆಲವರನ್ನು ಕೇಳಿದರೆ ಜಿಎಸ್‌ಟಿ ವಿರುದ್ಧ ಎಂದು ಹೇಳುತ್ತಿದ್ದುದನ್ನು ಉಲ್ಲೇಖೀಸಿದ ಅವರು ಇದರ ಹಿಂದೆ ಷಡ್ಯಂತರ ಇರಬಹುದು ಎಂದರು. ನಮ್ಮ ದೇಶದ ಮುಸ್ಲಿಂ ಬಾಂಧವರಿಗೆ ಸಿಎಎಯಿಂದ ಯಾವುದೇ ತೊಂದರೆ ಇಲ್ಲ ಆದರೂ ಹೋರಾಟ ಏತಕ್ಕೆ ಮಾಡಿದರೂ ಎಂದು ಗೊತ್ತಾಗುತ್ತಿಲ್ಲ ಎಂದರು. ಉಪಮುಖ್ಯಮಂತ್ರಿ ನೀಡಬೇಕೇ ಬೇಡವೇ ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು, ರಮೇಶ್‌ ಜಾರಕಿಹೋಳಿ, ಶ್ರೀರಾಮಲು ಇಬ್ಬರೂ ಪಕ್ಷದ ನಾಯಕರೇ ಎಂದರು. ಡಿ.ಕೆ.ಶಿವಕುಮಾರ್‌ ಏಸು ಪ್ರತಿಮೆ ಸ್ಥಾಪನೆ ವಿವಾದದ ಕುರಿತು ಕೇಳಿದಾಗ ಅದರ ಅರಿವಿಲ್ಲವೆಂದ ಅವರು, ಅವರವರ ಆಲೋಚನೆ, ಭಕ್ತಿ ನಮಗ್ಯಾಕೆ ಎಂದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.