ಪೇಜಾವರಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಇಲ್ಲ; ಇಂದು, ನಾಳೆ ಮಣಿಪಾಲದಲ್ಲಿಯೇ ವಾಸ್ತವ್ಯ; ಸಿಎಂ
Team Udayavani, Dec 28, 2019, 8:11 PM IST
ಮಣಿಪಾಲ: ಪೇಜಾವರ ಮಠದ ಹಿರಿಯ ಸ್ವಾಮೀಜಿ ವಿಶ್ವೇಶ್ವರತೀರ್ಧ ಶ್ರೀಪಾದರ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನಲೆಯಲ್ಲಿ ಇಂದು ಮತ್ತು ಭಾನುವಾರ ಮಣಿಪಾಲದಲ್ಲಿಯೇ ವಾಸ್ತವ್ಯ ಹೂಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಾಳೆಯ ಶಿವಮೊಗ್ಗ ಕಾರ್ಯಕ್ರಮ ರದ್ದು ಮಾಡಲಾಗಿದ್ದು, ನಾಳೆ ಮಧ್ಯಾಹ್ನ 2ಗಂಟೆವರೆಗೂ ಉಡುಪಿಯಲ್ಲಿಯೇ ಇದ್ದು ನಂತರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಟಿವಿ9 ವರದಿ ಮಾಡಿದೆ.
ಇಂದು ಸಂಜೆ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಏತನ್ಮಧ್ಯೆ ಮಣಿಪಾಲ ಆಸ್ಪತ್ರೆ ವೈದ್ಯಾಧಿಕಾರಿಗಳು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ, ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಅವರು ಪ್ರಜ್ಞಾ ರಹಿತ ಸ್ಥಿತಿಯಲ್ಲಿಯೇ ಮುಂದುವರಿದಿದ್ದು, ಜೀವರಕ್ಷಕ ಸಾಧನಗಳ ಸಹಾಯದಲ್ಲಿ ಇದ್ದಾರೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.