ಅನುದಾನಿತ ಶಾಲೆಗಳ ನಿರ್ವಹಣ ವೆಚ್ಚಕ್ಕೆ ಸರಕಾರ ಬ್ರೇಕ್‌!

ಶಿಕ್ಷಕರಿಗೆ ಸ್ವಂತ ದುಡ್ಡಿನಿಂದ ಖರ್ಚು ನಿಭಾಯಿಸುವ ಪಾಡು

Team Udayavani, Dec 30, 2019, 6:21 AM IST

bg-53

ಮಹಾನಗರ: ಅನುದಾನಿತ ಶಾಲೆಗಳಿಗೆ ಸರಕಾರದಿಂದ ನೀಡಲಾಗುತ್ತಿದ್ದ ನಿರ್ವಹಣ ವೆಚ್ಚಕ್ಕೆ ಮೂರು ವರ್ಷ ಗಳಿಂದ ಬ್ರೇಕ್‌ ಹಾಕಲಾಗಿದೆ. ಇದರಿಂದ ಶಾಲೆಗಳ ನಿರ್ವಹಣೆಗೆ ಶಿಕ್ಷಕರೇ ಹಣ ತೆರಬೇಕಾಗಿ ಬಂದಿದೆ.

ರಾಜ್ಯದಲ್ಲಿ ಒಟ್ಟು 2,326 ಅನುದಾನಿತ ಪ್ರಾಥಮಿಕ ಶಾಲೆಗಳಿವೆ. ಈ ಶಾಲೆಗಳಿಗೆ ಅನುದಾನಕ್ಕೊಳಪಟ್ಟಂದಿನಿಂದ ಹಿರಿಯ ಪ್ರಾಥಮಿಕ ಶಾಲೆಗಳಿಗೆ 12 ಸಾವಿರ ರೂ. ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ 5 ಸಾವಿರ ರೂ. ನಿರ್ವಹಣ ವೆಚ್ಚವನ್ನು ಸರಕಾರ ನೀಡುತ್ತಿತ್ತು. ಆದರೆ, ಮೂರು ವರ್ಷಗಳಿಂದ ಈ ನಿರ್ವಹಣ ವೆಚ್ಚ ನೀಡುವುದನ್ನು ನಿಲ್ಲಿಸಲಾಗಿದೆ. ಅಲ್ಲದೆ, ಆಡಳಿತ ಮಂಡಳಿಗೆ ನೀಡುತ್ತಿದ್ದ ಒಟ್ಟು ಸಿಬಂದಿ ಒಟ್ಟು ವೇತನದ ಶೇ. 5ರಷ್ಟು ಹಣವನ್ನು ಕೂಡ ಎಂಟು ವರ್ಷಗಳಿಂದ ನಿಲ್ಲಿಸಲಾಗಿದೆ.

ನಿರ್ವಹಣ ಕೆಲಸಗಳೇನು?
ಶಾಲೆಯ ಪೀಠೊಪಕರಣಗಳ ದುರಸ್ತಿ, ಸುಣ್ಣ ಬಳಿಯುವುದು, ಪೈಂಟಿಂಗ್‌, ಬೆಂಚ್‌, ಡೆಸ್ಕ್, ತರಗತಿ ಅಗತ್ಯಗಳಿಗೆ ಬೇಕಾದ ಇತರ ವಸ್ತುಗಳ ಖರೀದಿ ಸಹಿತ ಶಾಲೆಯ ಸಣ್ಣಪುಟ್ಟ ಆವಶ್ಯಕತೆಗಳನ್ನು ಪೂರೈಸಲು ಈ ನಿರ್ವಹಣ ವೆಚ್ಚವನ್ನು ಅನುದಾನಿತ ಶಾಲೆಗಳಿಗೆ ನೀಡಲಾಗುತ್ತಿತ್ತು. ಆದರೆ ಇದೀಗ ಸರಕಾರ ಅನುದಾನಿತ ಶಾಲೆಗಳಿಗೆ ನಿರ್ವಹಣ ವೆಚ್ಚವನ್ನು ನೀಡದೇ ಇರುವುದರಿಂದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರೇ ತಮ್ಮ ಕೈಯಿಂದ ಹಣವನ್ನು ಭರಿಸಿ ಶಾಲೆಗೆ ಬೇಕಾದ ಅವಶ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಕೆಲವು ಶಾಲೆಗಳಲ್ಲಿ ಆಡಳಿತ ಮಂಡಳಿ ಅಥವಾ ಸ್ಥಳೀಯ ದಾನಿಗಳು ಭರಸುತ್ತಿದ್ದಾರೆ.

ಸಮವಸ್ತ್ರ, ಶೂ ಇಲ್ಲ
ಸರಕಾರಿ ಶಾಲೆಗಳ ನಿಯಮಗಳೇ ಅನುದಾನಿತ ಶಾಲೆಗಳಿಗೂ ಅನ್ವಯ ವಾಗುತ್ತದೆ. ಆದರೆ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಇರುವ ಸಮವಸ್ತ್ರ, ಶೂ ಭಾಗ್ಯ, ಕರ್ನಾಟಕ ದರ್ಶನ ಪ್ರವಾಸ ಸೌಲಭ್ಯ ಅನುದಾನಿತ ಶಾಲೆಗಳ ಮಕ್ಕಳಿಗಿಲ್ಲ. ಸರಕಾರದ ಮೇಲೆ ಸತತ ಒತ್ತಡ ಹೇರಿದ ಪರಿಣಾಮ ಮಧ್ಯಾಹ್ನದ ಬಿಸಿಯೂಟ ಮತ್ತು ಉಚಿತ ಪುಸ್ತಕ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಎನ್ನುತ್ತಾರೆ ಅನುದಾನಿತ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್‌ ಶೆಟ್ಟಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ.

ಅನುದಾನ ಗೊಂದಲ
ಅನುದಾನಿತ ಶಾಲೆಗಳಿಗೆ ಸರಕಾರದಿಂದ ಮೂರುವರ್ಷಗಳ ಹಿಂದಿನವರೆಗೂ ನಿರ್ವಹಣ ವೆಚ್ಚ ನೀಡಲಾಗುತ್ತಿತ್ತು ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ಹೇಳಿದರೆ, ಇತ್ತ ಇಲ್ಲ ಎನ್ನುತ್ತಾರೆ ಅಧಿಕಾರಿಗಳು. ಸರಕಾರಿ ಶಾಲೆಗಳಿಗೆ ಮಾತ್ರ ಅಂತಹ ಅನುದಾನ ನೀಡಲಾಗುತ್ತದೆ. ಅನುದಾನಿತ ಶಾಲಾ ಶಿಕ್ಷಕರಿಗೆ ಸರಕಾರವೇ ಸಂಬಳ ನೀಡುವುದರಿಂದ ಪ್ರತ್ಯೇಕ ನಿರ್ವಹಣ ವೆಚ್ಚವನ್ನು ಈ ಹಿಂದಿನಿಂದಲೇ ನೀಡುತ್ತಿಲ್ಲ ಎಂಬುದು ಅಧಿಕಾರಿಗಳ ಮಾತು. ಆದರೆ, ಸಾಕಷ್ಟು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಅನುದಾನಿತ ಶಾಲೆಗಳಿಗೆ ಈ ಹಿಂದೆ ಬರುತ್ತಿದ್ದ ನಿರ್ವಹಣ ವೆಚ್ಚವನ್ನು ಮತ್ತೆ ನೀಡಬೇಕು ಎಂಬುದಾಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ.

ಸರಕಾರಿ ಶಾಲೆಗೆ ಮಾತ್ರ
ಅನುದಾನಿತ ಶಾಲೆಗಳಿಗೆ ಸರಕಾರದಿಂದ ನೇಮಕವಾದ ಶಿಕ್ಷಕರಿಗೆ ಸರಕಾರ ಸಂಬಳ ನೀಡುತ್ತದೆ. ಅಂತಹ ಶಾಲೆಗಳಿಗೆ ನಿರ್ವಹಣ ವೆಚ್ಚ ನೀಡುವುದಿಲ್ಲ. ಸರಕಾರಿ ಶಾಲೆಗಳಿಗೆ ಮಾತ್ರ ನೀಡುತ್ತದೆ.
 - ಪುರುಷೋತ್ತಮ, ಕಾರ್ಯಕ್ರಮಾಧಿಕಾರಿ, ಸರ್ವ ಶಿಕ್ಷಾ ಅಭಿಯಾನ, ಬೆಂಗಳೂರು

ರಾಜ್ಯ ಸರಕಾರದಿಂದ ಬಿಡುಗಡೆಯಾಗಿಲ್ಲ
ಅತಿಥಿ ಶಿಕ್ಷಕರಿಗೆ ವೇತನ ರಾಜ್ಯ ಸರಕಾರದಿಂದ ಇನ್ನೂ ಬಿಡುಗಡೆಯಾಗಿಲ್ಲ. ಬಿಡುಗಡೆಯಾದ ಕೂಡಲೇ ಅತಿಥಿ ಶಿಕ್ಷಕರ ಖಾತೆಗೆ ಜಮೆ ಮಾಡಲಾಗುವುದು.
– ವಾಲ್ಟರ್‌ ಡಿ’ಮೆಲ್ಲೊ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು

- ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.