ರಾಷ್ಟ್ರಕ್ಕೆ ಮಾರ್ಗದರ್ಶಕ


Team Udayavani, Dec 30, 2019, 3:13 AM IST

rashtrakke

ಬೆಂಗಳೂರು: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳಲ್ಲಿ ಪರಂಪರೆಯ ಚಿಂತನೆಗಳು ಬೇರೂರಿದ್ದರೂ, ಅವರು ಪ್ರಗತಿಶೀಲ ವಿಚಾರಗಳಿಗೆ ಸ್ಪಂದಿಸುತ್ತಿದ್ದರು ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸ್ಮರಿಸುತ್ತಾರೆ. ಪರಂಪರೆ ಹಾಗೂ ಬದಲಾವಣೆ ನಡುವೆ ಸಮನ್ವಯ ದೃಷ್ಟಿ ಮೂಡಬೇಕೆಂಬ ಆಶಯ ಅವರದಾಗಿತ್ತು. ಅವೈದಿಕ ಪರಂಪರೆಯ ಹಲವು ಸದಾಶಯಗಳಿಗೂ ಶ್ರೀಗಳು ಸ್ಪಂದಿಸಿದ್ದಾರೆ. ಹೀಗಾಗಿ ಅವರ ಬಗ್ಗೆ ಅಪಾರ ಗೌರವವಿದೆ ಎಂದರು.

ಶ್ರೀಗಳು ಬದಲಾವಣೆ, ಸುಧಾರಣೆ ಪರವಾಗಿದ್ದರು. ಮಾಧ್ವ ಪರಂಪರೆಯಲ್ಲಿ ಅವರ ಸ್ಥಾನ ದೊಡ್ಡದು. ರಾಷ್ಟ್ರಕ್ಕೆ, ನಾಡಿಗೆ ಮಾರ್ಗದರ್ಶನ ಮಾಡುವ ಬೆರಳೆಣಿಕೆಯ ಯತಿಗಳಲ್ಲಿ ಅವರೂ ಒಬ್ಬರಾಗಿದ್ದರು. ನೇರ ಸಂವಾದದಲ್ಲಿ ನಾವು ಎರಡು ಬಾರಿ ಭೇಟಿಯಾಗಿದ್ದೆವು. ಮಡೆ ಮಡೆ ಸ್ನಾನದ ವಿಷಯ ಬಂದಾಗ ಅವರು ಮುಕ್ತ ಮನಸ್ಸಿನೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದ್ದಾರೆ.

ತಾತ್ವಿಕ ಭಿನ್ನಾಭಿಪ್ರಾಯಗಳಷ್ಟೇ: ಕೆಲವು ವಿಚಾರಗಳಲ್ಲಿ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿತ್ತು. ಅದು ತಾತ್ವಿಕ ಭಿನ್ನಾಭಿಪ್ರಾಯಗಳಷ್ಟೇ, ವೈಯಕ್ತಿಕವಾಗಿ ಅವರೊಂದಿಗೆ ಉತ್ತಮ ಸಂಬಂಧವಿತ್ತು. ಶ್ರೀಗಳು ಮಡೆಸ್ನಾನದ ಬದಲಿಗೆ ಎಡೆ ಸ್ನಾನದ ಪರಿಕಲ್ಪನೆಗೆ ಒಲವು ತೋರಿದ್ದರು. “ನಾನು ಮಡೆ ಸ್ನಾನ ಮಾಡದಿರುವಾಗ ಬೇರೆಯವರಿಗೆ ಮಾಡಿ ಎಂದು ಹೇಳಲು ಹೇಗೆ ಸಾಧ್ಯ’ ಎಂದು ಶ್ರೀಗಳು ಪ್ರಶ್ನೆ ಮಾಡಿದ್ದರು. ನಾನು ಒಪ್ಪುವುದಿಲ್ಲ, ಏಕಕಾಲಕ್ಕೆ ಬಿಡುವುದು ಬೇಡ ಎಂದಿದ್ದರು.

ಆದರೆ, ಒಮ್ಮೆಗೆ ಮಡೆ ಮಡೆ ಸ್ನಾನ ಸಂಪ್ರದಾಯವನ್ನು ತೆಗೆದು ಹಾಕಿದರೆ ಸಂಪ್ರದಾಯಸ್ಥರ ಮನಸ್ಸಿಗೆ ನೋವಾಗುತ್ತದೆ. ಇದರ ಬದಲಿಗೆ ಎಡೆ ಸ್ನಾನ ಮುಂದುವರಿಸಿ ಎಂಬ ಸಲಹೆ ನೀಡಿದ್ದರು. ಶ್ರೀಗಳ ಈ ನಿರ್ಧಾರದಿಂದ ಮುಂದೆ ಉಡುಪಿಯಲ್ಲಿನ ಪರ್ಯಾಯ ಪೀಠದ ಶ್ರೀಗಳು ಮಡೆ ಮಡೆ ಸ್ನಾನ ನಿಲ್ಲಿಸಿದರು. ಬದಲಾವಣೆ ಹಂತ ಹಂತವಾಗಿ ಆಗಬೇಕು. ಒಮ್ಮೆಗೆ ಮಾಡುವುದು ಬೇಡ ಎಂಬ ಮನೋಭಾವ ಪೇಜಾವರ ಶ್ರೀಗಳದ್ದಾಗಿತ್ತು.

ಮಿತಿ ಮತ್ತು ವಿಶೇಷ: ಸಂಪ್ರದಾಯಸ್ಥರ ಮನಸ್ಸಿಗೆ ನೋವಾಗಬಾರದು. ಹಾಗೇ ಆಧುನಿಕ ಮನೋಭಾವದ ಜನರಿಗೂ ಸಮಾಧಾನವಾಗಬೇಕು ಮಧ್ಯ ಮಾರ್ಗದಲ್ಲಿ ಸಾಗುವ ನಿಲುವನ್ನು ಶ್ರೀಗಳು ಹೊಂದಿದ್ದರು ಎಂದು ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೆನಪಿಸಿಕೊಂಡರು.

ಹಲವು ಬಾರಿ ಶ್ರೀಗಳ ಆಶೀರ್ವಾದ ಪಡೆಯುವ ಅವಕಾಶ ನನಗೆ ಸಿಕ್ಕಿತ್ತು. ಸಾಮಾಜಿಕ ಸುಧಾರಣೆ ಹಾಗೂ ಧಾರ್ಮಿಕ ಸಮಾಜದ ಉದ್ಧಾರ ಕ್ಕಾಗಿ ತಮ್ಮ ಜೀವನವನ್ನು ಶ್ರೀಗಳು ಮೀಸಲಿಟ್ಟಿದ್ದರು.
-ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವೆ

ಪೇಜಾವರ ಶ್ರೀಗಳ ಅಗಲಿಕೆ ಯಿಂದ ನನಗೆ ತೀವ್ರ ನೋವಾಗಿದೆ. ಅವರು ತಮ್ಮ ಜೀವನವನ್ನು ಸಮಾಜದ ಒಳಿತಿಗಾಗಿ ಮುಡಿಪಿಟ್ಟಿದ್ದರು. ಸಮಾಜದ ಕಲ್ಯಾಣಕ್ಕಾಗಿ ಅವರ ನಿಸ್ವಾರ್ಥ ಸೇವೆ ಎಲ್ಲರಿಗೂ ಪ್ರೇರಕವಾಗಿದೆ.
-ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ

ಭಾರತವು ದೇಶದ ಅತೀ ಹಿರಿಯ ಸಂತರನ್ನು ಕಳೆದುಕೊಂಡಿದೆ. ಅವರ ಉತ್ತಮವಾದ ಕಾರ್ಯಗಳು ಸಮಾಜದ ಮೇಲೆ ಬಹಳಷ್ಟು ಪ್ರಭಾವ ಬೀರಿರುತ್ತದೆ.
-ರಾಜನಾಥ್‌ ಸಿಂಗ್‌, ಕೇಂದ್ರ ಸಚಿವ

ಸದಾ ಜೀವನೋತ್ಸಾಹದ ಚಿಲುಮೆಯಂತಿದ್ದ ಶ್ರೀಗಳು ಸಮಾಜಮುಖೀ ನಿಲುವಿನ ಶ್ರೇಷ್ಠ ಸಂತರಾಗಿದ್ದರು. ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ ಶ್ರೀಗಳ ನಿಧನದಿಂದ ನಾಡು ಬಡವಾಗಿದೆ.
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಹಿಂದೂ ಸಮಾಜವನ್ನು ಒಗ್ಗೂಡಿಸಿ, ರಾಮ ಜನ್ಮಭೂಮಿಯ ನೇತೃತ್ವ ವಹಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದ ಋಷಿ ಶ್ರೇಷ್ಠರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ.
-ಶೋಭಾ ಕರಂದ್ಲಾಜೆ, ಸಂಸದೆ

* ಹಿತೇಶ್‌ ವೈ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.