ಪ್ರಕೃತಿ ಪ್ರಭಾವದೊಳಗೆ ಅರಳಿದ ಕುವೆಂಪು


Team Udayavani, Dec 30, 2019, 3:43 PM IST

mandya-tdy-1

ಮಂಡ್ಯ: ಪ್ರಕೃತಿಯ ಪ್ರಭಾವದಿಂದ ಕುವೆಂಪುರವರ ಬರಹಗಳು ಮೂಡಿಬಂದವು ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಎಂಜಿನಿಯರ್‌ ಜಿ.ಎನ್‌. ಕೆಂಪರಾಜು ತಿಳಿಸಿದರು.

ಪರಿಸರ ರೂರಲ್‌ ಡೆವಲೆಪ್‌ಮೆಂಟ್‌ ಸೊಸೈಟಿ, ಕಿರಗಂದೂರು ನೀರು ಬಳಕೆದಾರರ ಸಹಕಾರ ಸಂಘದ ವತಿಯಿಂದ ತಾಲೂಕಿನ ಕಿರಗಂದೂರು ಗ್ರಾಮದ ನಾಡಪ್ರಭು ಕೆಂಪೇಗೌಡ ಉದ್ಯಾನದಲ್ಲಿ ನಡೆದ ಕುವೆಂಪು ಜನ್ಮ ದಿನದ ನಿಮಿತ್ತ ಸಸ್ಯ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುವೆಂಪು ಕೊಡುಗೆ ಅನನ್ಯ: ಪ್ರಕೃತಿ ಆಸ್ವಾದಿಸಿ ಪ್ರಪಂಚಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಕುವೆಂಪುರವರ ಕೊಡುಗೆ ಅನನ್ಯ. ಗುಡಿ ಗೋಪುರ ಚರ್ಚುಗಳನ್ನು ಬಿಟ್ಟು ಹೊರಬನ್ನಿ ಎಂದು ಸಾರುತ್ತಾ, ಸಸ್ಯ ಸಂಕುಲಗಳ ಬಗ್ಗೆ ಅಪಾರ ಮಮಕಾರ ತೋರಿದ ಕುವೆಂಪುಅವರಿಗೆ ನಾಡು ನಿಜವಾದ ರೀತಿಯಲ್ಲಿ, ಸಸ್ಯ ನಮನಸಲ್ಲಿಸಬೇಕಾಗಿದೆ ಎಂದರು.

ಲಿಯೋಟಾಲ್‌ಸ್ಟಾಯ್‌, ಅರಬಿಂದು, ರವೀಂದ್ರನಾಥ್‌ ಠ್ಯಾಗೋರ್‌ರವರ ಬರಹಗಳಿಗಿನ್ನ ಕುವೆಂಪುರವರ ಬರಹಗಳು ವಿಶ್ವಪ್ರಜ್ಞೆಯನ್ನು ಉಂಟುಮಾಡುವಂತಹುಗಳಾಗಿದ್ದವು. ಮಾನವತಾವಾದಿಯಾಗಿದ್ದ ಕುವೆಂಪುರವರು ಶ್ರಮಜೀವಿಗಳ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದರು ಎಂದರು.

ಕೃಷ್ಣರಾಜಸಾಗರ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಮಂಗಲ ಎಂ. ಯೋಗೀಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಲ-ನೆಲ ನಿರ್ವಹಣೆಗೆ ಕುವೆಂಪುರವರ ಬರಹಗಳು ಸ್ಪೂರ್ತಿದಾಯಕವಾಗಿವೆ. ಬಾಲ್ಯಾವಸ್ಥೆಯಲ್ಲೇ ಮಕ್ಕಳಿಗೆ ಜೀವ ಸಂಕುಲಗಳ ಬಗ್ಗೆ ಸ್ಪೂರ್ತಿಯನ್ನು ಒದಗಿಸುವ ಪಠ್ಯಗಳು ಹೊರಹೊಮ್ಮಲು ಕುವೆಂಪುರವರ ಸಾಹಿತ್ಯವೇ ಕಾರಣವಾಗಿದೆ. ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿ ಇತರೆ ಕೃತಿಗಳು ಪ್ರಕೃತಿಯ ಸೊಬಗನ್ನು ಪ್ರಪಂಚಕ್ಕೆ ಸಾರಿದ್ದಾಗಿದೆ ಎಂದು ಹೇಳಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿರ್ದೇಶಕ ದೊಡ್ಡಲಿಂಗೇಗೌಡ ಸಸ್ಯ ನಮನ ಕಾರ್ಯಕ್ರಮಕ್ಕೆ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಮಂಡ್ಯ ತಾಲೂಕು ಕಾವೇರಿ ಹೌಸ್‌ಬಿಲ್ಡಿಂಗ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಸಿ.ಸಿ.ಮಹದೇವು, ಕಿರಗಂದೂರು ನೀರು ಬಳಕೆದಾರರ ಸಹಕಾರ ಸಂಘದ ಉಪಾಧ್ಯಕ್ಷ ಕೆ. ತಿಮ್ಮೇಗೌಡ, ಡಿಸಿಸಿ ಬ್ಯಾಂಕ್‌ ಗಾಂ— ಬಜಾರ್‌ ಶಾಖೆಯ ವ್ಯವಸ್ಥಾಪಕ ಆತ್ಮಾನಂದ, ಶಿವರಾಜು, ನರಸಿಂಹಮೂರ್ತಿ, ಕುಮಾರ್‌ಏ ಇತರರು ಉಪಸ್ಥಿತರಿದ್ದರು. ಕರ್ನಾಟಕ ಜಾ ನಪದ ಅಕಾಡೆಮಿ ಮಾಜಿ ಸದಸ್ಯ ಗೊರವಾಲೆ ಚಂದ್ರಶೇಖರ್‌, ಕಲಾವಿದ ಬಸವರಾಜ ಸಂತೆಕಸಲಗೆರೆ ಅವರು ಕುವೆಂಪು ಗೀತಗಾಯನ ಸಾಧರಪಡಿಸಿದರು.

ಕುವೆಂಪು ಸಸ್ಯನಮನ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಜೀವವೈವಿಧ್ಯತಾ ಗಿಡಗಳನ್ನು ನೆಡಲಾಯಿತು. ಹೊನ್ನೆ , ಜಟ್ರೋಫಾ, ಹೊಂಗೆ, ನೇರಳ ಸಹಿತ ವಿವಿಧ ಗಿಡಗಳನ್ನು ನೆಡಲಾಯಿತು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.