ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸಿ
Team Udayavani, Dec 30, 2019, 4:49 PM IST
ಪಾವಗಡ: ಮಾದಿಗ ಜನಾಂಗದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸ ಬೇಕು ಎಂದು ಆದಿ ಜಾಂಬವ ಮಠ ಕೋಡಿಹಳ್ಳಿ ಪೀಠಾಧಿಪತಿ ಶ್ರೀ ಮಾರ್ಕಂಡೇಯ ಮುನಿಸ್ವಾಮೀಜಿ ಹೇಳಿದರು.
ಪಟ್ಟಣದ ಆದರ್ಶ ನಗರದಲ್ಲಿ ಕರ್ನಾಟಕ ಮಾದಿಗರ ಸಂಘ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದರು. ಅಂಬೇಡ್ಕರ್ ಹೇಳಿರುವಂತೆ ಶಿಕ್ಷಣ, ಸಂಘಟನೆ ಮೂಲಕ ಸೌಲಭ್ಯ ಬಳಸಿಕೊಳ್ಳಬೇಕು. ಹೀಗಾಗಿ ಸಮುದಾಯದ ಮಕ್ಕಳಿಗೆ ಶಿಕ್ಷಣ ಕೊಡಿಸ ಬೇಕು ಎಂದು ಹೇಳಿದರು.
ಸಂಸದ ಎ.ನಾರಾಯಣಸ್ವಾಮಿ ಮಾತ ನಾಡಿ, ರಾಜ್ಯದಲ್ಲಿ ಮಾದಿಗ ಸಂಘಟನೆಗಳು ಹಲವು ಇದ್ದು, ರಾಜ್ಯಕ್ಕೆ ಒಂದೇ ಸಂಘಟನೆ ಸ್ಥಾಪನೆ ಮಾಡುತ್ತೇನೆ ಎಂದು ಹೇಳಿದರು. ಮಾದಿಗ ಸಮುದಾಯ ವಿದ್ಯಾಭ್ಯಾಸಕ್ಕೆ ಒತ್ತು ಕೊಡುವ ಅಗತ್ಯವಿದೆ. ಸರ್ಕಾರದ ಸೌಲಭ್ಯ ಪಡೆಯುವಲ್ಲಿ ಸಮುದಾಯ ಹಿಂದಿದೆ. ಸೌಲಭ್ಯ ತಿಳಿದುಕೊಂಡು ಸದುಪ ಯೋಗಪಡಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಮಾದಿಗ ಸಮಾಜದ ಒಗ್ಗಟ್ಟು ತೋರಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಉಗ್ರನರಸಿಂಹಪ್ಪ, ರಾಜ್ಯಾಧ್ಯಕ್ಷ ದೇವರಾಜು ಅರಸ್ ಮಾದಿಗ, ಉಪಾಧ್ಯಕ್ಷರಾದ ಹನುಮಂತ, ಸಂಘಟನಾ ಕಾರ್ಯದರ್ಶಿ ನರಸಿಂಹರಾಜು, ಜಿಲ್ಲಾಧ್ಯಕ್ಷ ರಾಮಮೂರ್ತಿ, ವಿಭಾಗೀಯ ಅಧ್ಯಕ್ಷ ರಾಜಕುಮಾರ್, ಮಾಜಿ ಸಿಂಡಿಕೇಟ್ ಸದಸ್ಯ ಕೋರ್ಟ್ನರಸಪ್ಪ, ಬಿಜೆಪಿ ಮುಖಂಡ ಶಿವಕುಮಾರ್ ಸಾಕೇಲ್, ನೂತನ ತಾಲೂಕು ಅಧ್ಯಕ್ಷ ಅನಿಲ್ ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು
ಬಲಿಗಾಗಿ ಕಾದುಕುಳಿತ ಅರಳಿ ಮರ; ಯಾವುದೇ ಅಹಿತಕರ ಘಟನೆಯಾಗುವ ಮುನ್ನ ಅರಳಿ ಮರ ತೆರವುಗೊಳಿಸಿ
Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್.ರಾಜಣ್ಣ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.