ದೀಪಾವಳಿ ದಿನವೇ ಬೆಂಕಿ ಹೊತ್ತಿಕೊಂಡಿತು


Team Udayavani, Dec 31, 2019, 4:22 AM IST

vc-1

ಇತ್ತೀಚೆಗಂತೂ ಕವಿಮಹಾಶಯರಿಗಾಗಿ ಹಲವಾರು ವಾಟ್ಸಾಪ್‌ ಗುಂಪುಗಳು ಹುಟ್ಟಿಕೊಂಡಿವೆ. ಎಲ್ಲಾ ಗುಂಪುಗಳಲ್ಲೂ ಅವರೇ ಇದ್ದರೂ, ಅಲ್ಲಲ್ಲಿ ಆಗತಾನೆ ಕತೆ, ಕವಿತೆಯನ್ನು ಓದಿಕೊಳ್ಳುತ್ತಿರುವವರೂ ಇದ್ದಾರೆ. ಸಾಹಿತಿ, ಬರಹಗಾರರನ್ನು ಗುಂಪಿಗೆ ಸೇರಿಸುವುದು ಬಲು ಸುಲಭವಾಗಿದೆ. ಪತ್ರಿಕೆಗಳಲ್ಲಿ ಹೆಸರು, ಫೋನ್‌ ನಂಬರ್‌ ಕಂಡರೆ ಮುಗೀತು. ಹೇಳದೇ ಕೇಳದೆ, ಅವರನ್ನೂ ಹೊಸ ಹೊಸ ಗುಂಪುಗಳಲ್ಲಿ ಸೇರಿಸಿಬಿಡುತ್ತಾರೆ. “ನಾನು ನಿಮ್ಮನ್ನು ವಾಟ್ಸಾಪ್‌ ಗುಂಪಿಗೆ ಸೇರಿಸಬಹುದೆ?’ ಅಂತ ಸೌಜನ್ಯಕ್ಕಾದರೂ ಯಾರೂ ಕೇಳುವುದಿಲ್ಲ. ಇಂತಿಪ್ಪ ಜನರೇ, ಪತ್ರಿಕೆಯಲ್ಲಿ ಪ್ರಕಟವಾದ, ನನ್ನ ಬರಹದ ಕೊನೆಗಿದ್ದ ಮೊಬೈಲ್‌ ನಂಬರ್‌ ಅನ್ನು ಹಲವು ಗುಂಪುಗಳಲ್ಲಿ ಹಾಕಿಬಿಡುತ್ತಿದ್ದರು. ಅದರಿಂದ ನಾನು ಬಿಡಿಸಿಕೊಂಡು ಬರುವುದು, ಮತ್ತೆ ಇನ್ನೊಬ್ಬರು ನನ್ನ ಸೇರಿಸುವುದೂ ಮಾಮೂಲಿಯಾಗಿತ್ತು. ಇಂಥದೇ ಮಾರ್ಗದಲ್ಲಿ ಸೇರಿಕೊಂಡ ಗ್ರೂಪ್‌, ಈ ಕಾವ್ಯ ಸಿಂಚನ ವೇದಿಕೆ.

ಈ ಗುಂಪಿನಲ್ಲಿ ಇದ್ದಕ್ಕಿದ್ದಂತೆ ಹುರುಪು ಶುರುವಾಯಿತು. ಕಾರಣ, ದೀಪಾವಳಿ. ಏನಾದರು ಮಾಡಲೇಬೇಕು ಅಂತ, ಹಬ್ಬವನ್ನು ನೆಪವಾಗಿಟ್ಟುಕೊಂಡು ಗುಂಪಿನಲ್ಲಿ ಕವನ ಸ್ಪರ್ಧೆಯನ್ನು ಆಯೋಜಿಸಲಾಯಿತು. ಗ್ರೂಪ್‌ನ ಅಡ್ಮಿನ್‌, ಈ ಸ್ಪರ್ಧೆಯ ರೂವಾರಿ. ಬೆಳಗ್ಗೆಯಿಂದ ಸಂಜೆಯವರೆಗೂ ಕವನವನ್ನು ಗುಂಪಿನಲ್ಲಿ ಹಾಕುವುದು. ಉಳಿದವರು ಆ ಕವನಗಳ ವಿಮರ್ಶೆ ಮಾಡುವುದು ಅಂತ ತೀರ್ಮಾನವಾಯಿತು. ಹಾಗೆಯೇ, ನಮ್ಮ ಗುಂಪಿನಲ್ಲೇ ಒಬ್ಬರನ್ನು ಕವನದ ಆಯ್ಕೆಗೆ ನಿರ್ಣಾಯಕನನ್ನಾಗಿ ನೇಮಿಸಲಾಗಿತ್ತು. ಸ್ಪರ್ಧೆ ಏನೋ ಚೆನ್ನಾಗಿ ನಡೆಯಿತು. ಎಲ್ಲ ಕವಿ ಮಹಾಶಯರೂ ತಮಗೆ ತೋಚಿದಂತೆ ಕವನಗಳನ್ನು ಗೀಚಿ ಗುಂಪಿನಲ್ಲಿ ಹಾಕಿದರು. ಆದರೆ, ಸಮಸ್ಯೆ ಎದುರಾಗಿದ್ದೇ ಇಲ್ಲಿಂದ. ಯಾರೂ ವಿಮರ್ಶೆಗೆ ಮುಂದಾಗಲಿಲ್ಲ. ಕೊನೆಗೆ, ನಿರ್ಣಾಯಕ ಮಾತ್ರ ವಿಮರ್ಶೆಯಲ್ಲಿ ತೊಡಗಿದ. ಕಾವ್ಯದ ಗಂಧಗಾಳಿಯೂ ಇಲ್ಲದ ನಿರ್ಣಾಯಕನ ವಿಮರ್ಶೆಯು ಗುಂಪಿನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತು. ಹೀಯಾಳಿಸುವ , ಮೂದಲಿಸುವ ರೂಪದಲ್ಲಿದ್ದ ಅವನ ವಿಮರ್ಶೆಯಿಂದಾಗಿ ಗುಂಪಿನ ಸದಸ್ಯರೆಲ್ಲಾ ಅವರನ್ನು ಹಾಗೂ ಅಡ್ಮಿನ್‌ನನ್ನು ತರಾಟೆಗೆ ತೆಗೆದುಕೊಂಡರು. ಆದರೆ, ವಿಮರ್ಶಕ ತನ್ನ ವಿಮರ್ಶೆ ಸರಿಯಾಗಿದೆ ಎಂದು ಸಮರ್ಥಿಸಲು ಮುಂದಾದರು. ಆಗ, ವಾದ ಜೋರಾಗಿ ಜಗಳದ ರೂಪ ಪಡೆದು, ಕೊನೆಗೆ ವಿಕೋಪಕ್ಕೆ ತಲುಪಿತು. ಇದರಿಂದಾಗಿ ಬೇಸತ್ತ ಅಡ್ಮಿನ್‌ ಮಹಾಶಯರು, ಈ ಕವಿಗಳ ಸಹವಾಸವೇ ಬೇಡ ಎಂದುಕೊಂಡು ಗುಂಪಿನಿಂದ ಹೊರ ನಡೆದರು. ಒಬ್ಬ ಅವಿವೇಕಿಯಿಂದಾಗಿ ಸದುದ್ದೇಶದ ಗುಂಪು ಅಂದು ಅಂತ್ಯ ಕಂಡಿತು.

ಎಲ್ಲರ ಕವನಗಳು ಬಾಯಿ ಮುಚ್ಚಿದವು. ಹೀಗೆ, ದೀಪಾವಳಿಯಂದು ನಮ್ಮ ಗ್ರೂಪ್‌ನಲ್ಲಿ ಬೆಂಕಿ ಹೊತ್ತಿಕೊಂಡಿತು.

ವೆಂಕಟೇಶ ಚಾಗಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.