ಬಹು ಸಂಸ್ಕೃತಿಯ ಬೇರುಗಳು ಗಟ್ಟಿಗೊಳ್ಳಲಿ


Team Udayavani, Dec 31, 2019, 3:00 AM IST

bahu-sanskru

ಯಳಂದೂರು: ಯಳಂದೂರು ತಾಲೂಕು ಶೈವ, ವೈಷ್ಣವ ಹಾಗೂ ಗಿರಿಜನರಾದ ಸೋಲಿಗ ಸಂಸ್ಕೃತಿಯ ಪ್ರತೀಕವಾಗಿದೆ. ಬಿಳಿಗಿರಿರಂಗನಬೆಟ್ಟವೇ ಇದಕ್ಕೆ ಸಾಕ್ಷಿಭೂತಿಯಾಗಿ ನಿಂತಿದ್ದು, ಇಂತಹ ಸಂಸ್ಕೃತಿ ಈ ದೇಶದ ಮೂಲವಾಗಿದೆ. ಇದರ ಬೇರುಗಳನ್ನು ಗಟ್ಟಿಗೊಳಿಸುವ ಕೆಲಸವನ್ನು ಮಾಡಬೇಕಿದೆ ಎಂದು ಸಾಹಿತಿ ಮದ್ದೂರು ದೊರೆಸ್ವಾಮಿ ಹೇಳಿದರು.

ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ರಂಗದೇಗುಲ ಕಲಾ ವೇದಿಕೆ 2018-19ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಜನಪದ ಝೇಂಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ನಾಡು ಕಾಡನ್ನು ಬೆಸೆಯುವ ಸಂಸ್ಕೃತಿ ಬೆಟ್ಟದ ಸಂಸ್ಕೃತಿಯಲ್ಲಿ ಅಡಕವಾಗಿದೆ. ವೈಷ್ಣವನಾದ ಬಿಳಿಗಿರಿರಂಗನಾಥ ಸ್ವಾಮಿ ಸೋಲಿಗರ ಕುಸುಮಾಲೆಯನ್ನು ಮೋಹಿಸಿ, ಅವರ ಪೋಷಕರನ್ನು ಒಲಿಸಿ ವಧು ದಕ್ಷಿಣೆ ನೀಡಿ, ವಿವಾಹವಾಗುವ ಜಾನಪದ ಕತೆ ಈ ನೆಲದ ಭಾವೈಕ್ಯತೆಯ ಶ್ರೀಮಂತಿಕೆಯನ್ನು ತೋರಿಸುವುದಾಗಿದೆ ಎಂದರು.

ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ ಅಗತ್ಯ: ಗ್ರಾಪಂ ಅಧ್ಯಕ್ಷೆ ಗೌರಮ್ಮ ಮಾತನಾಡಿ, ಜಾನಪದ ಸಂಸ್ಕೃತಿಯನ್ನು ಬಿಂಬಿಸುವ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ. ಮುಂದಿನ ಪೀಳಿಗೆಗಳಿಗೆ ಇದನ್ನು ಜೋಪಾನ ಮಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆ ಅಭಿನಂದನಾರ್ಹ ಎಂದರು.

ಗ್ರಾಮೀಣ ಸೊಗಡನ್ನು ಪಸರಿಸುವ ಕೆಲಸ: ತಾಪಂ ಅಧ್ಯಕ್ಷ ನಿರಂಜನ್‌ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಂಗದೇಗುಲ ಕಲಾ ವೇದಿಕೆಯ ಇಂತಹ ಆಯೋಜನೆ ಗ್ರಾಮೀಣ ಭಾಗದ ಸೊಗಡನ್ನು ಪಸರಿಸುವ ಕೆಲಸ ಮಾಡುತ್ತಿದೆ. ಅಲ್ಲದೆ, ಸ್ಥಳೀಯ ಕಲಾವಿದರಿಗೂ ಇದು ಮಾರ್ಗದರ್ಶಕವಾಗಿ ಕೆಲಸ ಮಾಡಲಿ ಎಂದು ಆಶಿಸಿದರು.

ಗಮನ ಸೆಳೆದ ಮೆರವಣಿಗೆ: ಗ್ರಾಮದ ಅರುಣ ಮಾರಮ್ಮ ದೇಗುಲದ ಮುಂಭಾಗದಿಂದ ಮಂಗಳವಾದ್ಯ, ಡೊಳ್ಳು ಕುಣಿತ, ಗೊರವರ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಭವ್ಯ ಮೆರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಾಡಲಾಯಿತು. ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರವಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಹನಾ, ಮಹೇಶ, ಮಹಾದೇವ ಸ್ವಾಮಿ, ಶಿವಕುಮಾರ ಸ್ವಾಮಿ, ದೊಡ್ಡಗವಿ ಬಸಪ್ಪ ಅವರನ್ನು ಸನ್ಮಾನಿಸಲಾಯಿತು.

ಸಂಜೆ ನಡೆದ ಸಾಂಸ್ಕೃತಿ ಕಾರ್ಯಕ್ರಮಗಳು ಗಮನ ಸೆಳೆದವು. ಈ ವೇಳೆ ತಾಪಂ ಸದಸ್ಯೆ ಭಾಗ್ಯ ನಂಜಯ್ಯ, ಸಬ್‌ ರಿಜಿಸ್ಟ್ರರ್‌ ಮಹಾದೇವಯ್ಯ, ಮುಖಂಡರಾದ ಮಹದೇವ ನಾಯಕ, ಕೃಷ್ಣಯ್ಯ, ನಂಜಯ್ಯ, ಮಹೇಶ್‌ ರಂಗದೇಗುಲದ ಅಧ್ಯಕ್ಷ ಶಾಂತರಾಜು, ಕಲಾವಿದರಾದ ಶಿವಕುಮಾರ್‌, ಭಾಗ್ಯ, ಮಹಾದೇವ ಪ್ರಭು, ಗೀತಾ, ರಾಧಾ, ಪ್ರಕಾಶ್‌, ಸಿದ್ದರಜು, ನಾಗರಾಜು, ರವಿ, ರೂಪೇಶ, ಸುಶೀಲಾ, ಗೋವಿಂದರಾಜು, ಜಗದೀಶ್‌, ಕಲೆ ನಟರಾಜು ಹಾಜರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.