ಮಕ್ಕಳ ಮನಸ್ಸಿನ ಸುತ್ತ “ಲಿಲ್ಲಿ’

ಮೊಬೈಲ್‌, ಮಗು ಮತ್ತು ತಾಯಿ

Team Udayavani, Jan 1, 2020, 7:02 AM IST

Lilly

ಕನ್ನಡದಲ್ಲಿ ಹೊಸ ಆಲೋಚನೆಯೊಂದಿಗೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ “ಲಿಲ್ಲಿ’ ಎಂಬ ಚಿತ್ರತಂಡವೂ ಸೇರಿದೆ. ಇದೊಂದು ಸೈಕಲಾಜಿಕಲ್‌ ಮಿಸ್ಟ್ರಿ ಥ್ರಿಲ್ಲರ್‌ ಜಾನರ್‌ನ ಸಿನಿಮಾ. ಈ ಚಿತ್ರದ ಮೂಲಕ ವಿಜಯ್‌ ಎಸ್‌.ಗೌಡ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ “ನೀರ್‌ದೋಸೆ’, “ಗೋವಿಂದಾಯ ನಮಃ’ (ತೆಲುಗು ವರ್ಷನ್‌), “ರಂಗಿತರಂಗ’ ಚಿತ್ರಗಳಲ್ಲಿ ಕೆಲಸ ಮಾಡಿದ್ದ ವಿಜಯ್‌ ಎಸ್‌.ಗೌಡ, ಅನಿಮೇಷನ್‌ ಹಿನ್ನೆಲೆಯಿಂದ ಬಂದವರು.

8 ವರ್ಷಗಳ ಕಾಲ ಕಾರ್ಪೋರೇಟ್‌ ಕಂಪೆನಿಯಲ್ಲಿ ಕೆಲಸ ಮಾಡಿದ್ದ ಅವರು, ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಸಿನಿಮಾಗಳಿಗೆ ಸಂಬಂಧಿಸಿದ ಕೆಲಸ ಮಾಡಿಕೊಂಡಿದ್ದವರು. ಆ ಅನುಭವದ ಮೇಲೆ “ಲಿಲ್ಲಿ’ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಹೇಳುವ ಅವರು, “ಮಕ್ಕಳನ್ನು ಪೋಷಕರು ಹೇಗೆ ಕಡೆಗಣಿಸುತ್ತಾರೆ, ಮೊಬೈಲ್‌ ಎಂಬುದು ಹೇಗೆಲ್ಲಾ ಮಾನವೀಯ ಸಂಬಂಧಗಳನ್ನು ದೂರ ಮಾಡಿದೆ.

ಮೊಬೈಲ್‌ ವ್ಯಾಮೋಹದಿಂದ ಮಾನವೀಯ ಮೌಲ್ಯಗಳು ಹೇಗೆ ಕುಸಿಯುತ್ತಿವೆ. ಮೊಬೈಲ್‌ನಿಂದ ಉಂಟಾಗುವ ಭಯಾನಕ ಕಾಯಿಲೆಯೊಂದು, ಆರೇಳು ವರ್ಷದ ಮಕ್ಕಳು ತಮ್ಮ ಹೆತ್ತವರನ್ನೇ ಕೊಲೆ ಮಾಡಬೇಕು ಎಂದು ನಿರ್ಧಾರಕ್ಕೆ ಬರುವಷ್ಟರ ಮಟ್ಟಿಗೆ ಮೊಬೈಲ್‌ ಕಾರಣವಾಗುತ್ತೆ ಎಂಬ ಸೂಕ್ಷ್ಮ ಅಂಶ ಚಿತ್ರದ ಹೈಲೈಟ್‌. ಚಿತ್ರವನ್ನು ನಾಗರಾಜ್‌ ಮತ್ತು ಎಸ್‌.ಸುಬ್ರಮಣಿ ನಿರ್ಮಾಣ ಮಾಡುತ್ತಿದ್ದಾರೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.

ಇದು ಯುನಿರ್ವಸಲ್‌ ಕಥೆ ಆಗಿದ್ದರಿಂದ ಸಿಮ್ರಾನ್‌ ಆವರನ್ನು ಕನ್ನಡಕ್ಕೆ ಕರೆತರಬೇಕು ಎಂಬ ಉದ್ದೇಶದಿಂದ ಕಥೆ ಹೇಳಲಾಗಿತ್ತು. ಅದು ಅವರಿಗೆ ಇಷ್ಟವಾಗಿ, ತಮಿಳಿನಲ್ಲೇ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ, ಇದು ಕನ್ನಡದಲ್ಲೇ ಶುರುವಾಗಬೇಕು ಎಂಬ ಆಸೆ ಚಿತ್ರತಂಡದ್ದಾಗಿದ್ದರಿಂದ ಅದು ಕೈಗೂಡಲಿಲ್ಲ. ಈಗ ಕನ್ನಡದ ರಾಧಿಕಾ ಕುಮಾರಸ್ವಾಮಿ, ಜಾಕಿ ಭಾವನಾ ಅಥವಾ ರಚಿತಾರಾಮ್‌ ಅವರಿಗೆ ಕಥೆ ಹೇಳುವ ತಯಾರಿ ನಡೆಯುತ್ತಿದೆ. ಇಲ್ಲಿ ತಾಯಿ ಪಾತ್ರ ಪ್ರಮುಖವಾಗಿದೆ. ಸಾಕಷ್ಟು ಎಮೋಶನ್ಸ್‌ ಕೂಡ ಇದೆ.

ಉಳಿದಂತೆ ಚಿತ್ರದಲ್ಲಿ ತಬಲನಾಣಿ ಇತರರು ಇರಲಿದ್ದಾರೆ. ಈಗಾಗಲೇ “ಲಿಲ್ಲಿ’ ಶೀರ್ಷಿಕೆ ನೋಂದಣಿಯಾಗಿದ್ದು, ಹೊಸ ವರ್ಷಕ್ಕೆ ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡಲಾಗುವುದು. ಜನವರಿಯಲ್ಲಿ ಮುಹೂರ್ತ ನಡೆಸಿ, ಚಿತ್ರೀಕರಣಕ್ಕೆ ಹೋಗುವ ಯೋಚನೆ ಇದೆ. ಚಿತ್ರಕ್ಕೆ ವಿಲಿಯಂ ಡೇವಿಡ್‌ ಛಾಯಾಗ್ರಹಣವಿದೆ. ವೀರೇಶ್‌ ಎಸ್‌.ಗೌಡ ಸಂಗೀತವಿದೆ. ಶ್ರೀಕಾಂತ್‌ ಸಂಕಲನ ಮಾಡಲಿದ್ದಾರೆ. ಬೆಂಗಳೂರಲ್ಲೇ ಚಿತ್ರೀಕರಣ ನಡೆಯಲಿದ್ದು, ಎರಡು ದೊಡ್ಡ ಸೆಟ್‌ ಹಾಕಿ 60 ದಿನಗಳ ಚಿತ್ರೀಕರಣ ನಡೆಸುವುದಾಗಿ ಹೇಳುತ್ತಾರೆ ವಿಜಯ್‌ ಎಸ್‌.ಗೌಡ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.