ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮ


Team Udayavani, Jan 2, 2020, 3:00 AM IST

JILLEYALLI

ಯಳಂದೂರು: ತಾಲೂಕಿನಲ್ಲಿ 2020ರ ಹೊಸ ವರ್ಷಾಚರಣೆ ಪ್ರಯುಕ್ತ ಬುಧವಾರ ಯುವ ಸಮುದಾಯದ ಸಂಭ್ರಮ ಮುಗಿಲು ಮುಟ್ಟಿತು. ಮಂಗಳವಾರ ಮಧ್ಯರಾತ್ರಿ 12 ಗಂಟೆಯಾಗುತ್ತಿದ್ದಂತೆ ಪಟ್ಟಣ ಬಸ್‌ ನಿಲ್ದಾಣ, ಬಳೇಪೇಟೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಯುವಕರು ಪಟಾಕಿ ಸಿಡಿಸಿ, ನೃತ್ಯ ಮಾಡಿ ಸಂಭ್ರಮಿಸಿ ನೂತನ ವರ್ಷಕ್ಕೆ ಸ್ವಾಗತ ಕೋರಿದರು.

ಬಿಆರ್‌ಟಿಗೆ ಭಕ್ತರ ದಂಡು: ತಾಲೂಕಿನ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬಂದಿತು. ಮಂಗಳವಾರ ಸಂಜೆ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳನ್ನು ಬಿಟ್ಟಿದ್ದರೂ. ಮದ್ಯಕ್ಕೆ ಕಡಿವಾಣ ಹಾಕಲು ಪೊಲೀಸ್‌ ಮತ್ತು ಅರಣ್ಯ ಇಲಾಖೆಯಿಂದ ಸಾಧ್ಯವಾಗಲಿಲ್ಲ. ಬೆಟ್ಟದ ಬಸ್‌ ನಿಲ್ದಾಣ, ದೊಡ್ಡ ತೇರಿನ ಬೀದಿ, ಬಿಳಿಗಿರಿ ಭವನದ ಮುಂಭಾಗವೂ ಸೇರಿದಂತೆ ಇದಕ್ಕಾಗಿಯೇ ಪ್ಲಾನ್‌ ಮಾಡಿಕೊಂಡು ಬಂದಿದ್ದ ಸಾವಿರಾರು ಯುವಕರು ಕುಡಿದು, ಕುಣಿದು ಕುಪ್ಪಳಿಸುವ ಮೂಲಕ ನೂತನ ವರ್ಷವನ್ನು ಸಂಭ್ರಮಿಸಿದರು. ಬೆಟ್ಟದಲ್ಲಿರುವ ಬಹುತೇಕ ಎಲ್ಲಾ ಪ್ರವಾಸಿ ಮಂದಿರಗಳು, ಲಾಡ್ಜ್ಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದವು.

ದೇಗುಲ ದರ್ಶನಕ್ಕೆ ಸರತಿ ಸಾಲು: ಮಂಗಳವಾರದಿಂದಲೇ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿತು. ವಾಹನ ದಟ್ಟಣೆಯಿಂದ ಕೆಲ ಕಾಲ ಸವಾರರು ಟ್ರಾಫಿಕ್‌ ಜಾಮ್‌ ಕಿರಿಕಿರಿ ಅನುಭವಿಸುವಂತಾಯಿತು. ವಾಹನವನ್ನು ಪಾರ್ಕಿಂಗ್‌ ಮಾಡಲು ಕೆಲವರು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಬಿಳಿಗಿರಿರಂಗನಾಥ ಸ್ವಾಮಿಗೆ ವಿಶೇಷ ಅಲಂಕಾರ: ಬಿಳಿಗಿರಿ ರಂಗನಾಥ ಸ್ವಾಮಿ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸರತಿ ಸಾಲಿನಲ್ಲಿ ನಿಂತ ಭಕ್ತರು ದೇವರ ದರ್ಶನ ಪಡೆದುಕೊಳ್ಳುತ್ತಿದ್ದರು. ಯಳಂದೂರು ಪಟ್ಟಣದಲ್ಲೂ ಹೊಸ ವರ್ಷದ ನಿಮಿತ್ತ ಗೌರೇಶ್ವರ, ಭೂ ಲಕ್ಷ್ಮೀ ವರಾಹಸ್ವಾಮಿ, ಗೋಡೆ ಗಣೇಶ, ಬಲಮುರಿ ವಿನಾಯಕ ಸೇರಿದಂತೆ ವಿವಿಧ ದೇಗುಲಗಳಲ್ಲಿ ಭಕ್ತರ ಸಂಖ್ಯೆ ಏರುಮುಖವಾಗಿತ್ತು. ಇದಕ್ಕಾಗಿ ದೇವರಿಗೆ ವಿಶೇಷ ಅಲಂಕಾರ ಮಾಡಿ, ಸಿಂಗರಿಸಲಾಗಿತ್ತು. ತಾಲೂಕಿನ ಕಂದಹಳ್ಳಿ ಮಹದೇಶ್ವರ ದೇಗುಲದಲ್ಲೂ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರಾಜಕೀಯ ಮುಖಂಡರ ಭೇಟಿ: ಮಾಜಿ ಸಂಸದ ಆರ್‌. ಧ್ರುವನಾರಾಯಣ, ಜಿಪಂ ಸದಸ್ಯ ಜೆ.ಯೋಗೇಶ್‌, ಮಾಜಿ ಉಪಾಧ್ಯಕ್ಷೆ ಕೇತಮ್ಮ, ಸದಸ್ಯ ವಡಗೆರೆ ದಾಸ್‌, ತಾಪಂ ಸದಸ್ಯ ವೈ.ಕೆ.ಮೋಳೆ ನಾಗರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ. ಚಂದ್ರು ಸೇರಿದಂತೆ ಹಲವು ರಾಜಕೀಯ ಮುಖಂಡರು ಬಿಳಿಗಿರಿರಂಗನಾಥ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಹೊಸ ವರ್ಷದ ನಿಮಿತ್ತ ಯಳಂದೂರು ಪಟ್ಟಣದ ವೈನ್‌ ಅಂಗಡಿಗಳ ಮುಂದೆ ಜನ ಸಂದಣಿ ಅಧಿಕವಾಗಿತ್ತು. ಬೇಕರಿಗಳಲ್ಲಿ ಕೇಕ್‌ಗಳ ಮಾರಾಟ ಜೋರಾಗಿತ್ತು. ಹಣ್ಣಿನ ಅಂಗಡಿಗಳಲ್ಲಿ ಜನ ಜಂಗುಳಿ ಹೆಚ್ಚಾಗಿ ಕಂಡು ಬಂದಿದ್ದರಿಂದ ಇಲ್ಲಿನ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರವಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.