23 ಸಾವಿರ ಜನರಿಗೆ 2 ಘಟಕಗಳಷ್ಟೇ ಕಾರ್ಯನಿರ್ವಹಣೆ


Team Udayavani, Jan 2, 2020, 3:00 AM IST

23savira

ಚಿಕ್ಕನಾಯಕನಹಳ್ಳಿ: ಸರ್ಕಾರದ ಜನರಿಗೆ ಶುದ್ಧ ನೀರು ಕೊಡುವ ಸಲುವಾಗಿ ಶುದ್ದ ಕುಡಿಯುವ ನೀರು ಘಟಕ ಸ್ಥಾಪಿಸಿದ್ದರೂ ಜನರಿಗೆ ಸಹಾಯವಾಗುತ್ತಿಲ್ಲ. ಪಟ್ಟಣದಲ್ಲಿನ 23 ಸಾವಿರ ಜನರಿಗೆ ಪಟ್ಟಣದಲ್ಲಿ ಐದು ಘಟಕಗಳಿದ್ದು, 2 ಘಟಕಗಳಲ್ಲಷ್ಟೇ ನೀರು ದೊರೆಯುತ್ತಿದೆ.

ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಸಂಸದರ ಅನುದಾನದಲ್ಲಿ ಘಟಕ ಸ್ಥಾಪನೆಯಾಗಿದ್ದು, ಇವೆರಡು ಕೆಟ್ಟು ತಿಂಗಳು ಕಳೆದಿದ್ದರೂ ಸಂಬಂಧಪಟ್ಟವರು ಗಮನ ಹರಿಸಿಲ್ಲ. ಖಾಸಗಿಯವರು ನಡೆಸುತ್ತಿರುವ 2 ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಕೆಆರ್‌ಡಿಎಲ್‌ ಸಂಸ್ಥೆಯಡಿರುವ 3 ಘಟಕಗಳು ಕೈಕೊಟ್ಟಿವೆ.

ಪುರಸಭೆ ಹಿಂಭಾಗದ ಪಂಪ್‌ಹೌಸ್‌ ಬಳಿ ಇರುವ ಘಟಕ ದುರಸ್ತಿಗೆ 2ರಿಂದ 3 ಲಕ್ಷ ರೂ. ಖರ್ಚು ಮಾಡಿದ್ದರೂ ಪ್ರಯೋಜನವಾಗಿಲ್ಲ. ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಪಟ್ಟಣದಲ್ಲಿ 23 ವಾರ್ಡ್‌ಗಳ ಪೈಕಿ 23 ಸಾವಿರ ಜನ ವಾಸವಾಗಿದ್ದು, ಎರಡು ಘಟಕಗಳಷ್ಟೇ ಕಾರ್ಯನಿರ್ವಹಿಸುತ್ತಿದೆ.

ಪ್ರತಿದಿನ 5ರಿಂದ 8 ಸಾವಿರ ಲೀಟರ್‌ ಶುದ್ಧ ನೀರು ಒದಗಿಸುತ್ತದೆ. ಅಂಕಿ ಅಂಶಗಳ ಪ್ರಕಾರ ಒಬ್ಬ ಮನುಷ್ಯನಿಗೆ ಪ್ರತಿ ದಿನ ಕನಿಷ್ಠ 4ರಿಂದ 5 ಲೀಟರ್‌ ನೀರು ಪೂರೈಸುವುದು ಪುರಸಭೆ ಉದ್ದೇಶ. ಪಟ್ಟಣದಲ್ಲಿ 2ರಿಂದ 3 ಸಾವಿರ ಜನರಷ್ಟೇ ಶುದ್ಧ ನೀರು ಉಪಯೋಗಿಸುತ್ತಿದ್ದಾರೆ.

ತಾಲೂಕಿನಲ್ಲಿ 126 ಘಟಕಗಳು: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸುಮಾರು 126 ಘಟಕಗಳು ಸ್ಥಾಪನೆಯಾಗಿದ್ದು. ಇವುಗಳಲ್ಲಿ 30 ಘಟಕಗಳು ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿವೆ. ಇನ್ನೂ 4 ಘಟಕಗಳಿಗೆ ನೀರಿನ ಸೌಲಭ್ಯವಿಲ್ಲದೆ ಕಾರ್ಯನಿರ್ವಹಿಸುತ್ತಿಲ್ಲ.

ತಾಲೂಕಿನಲ್ಲಿ 126 ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಸಣ್ಣ ಪುಟ್ಟ ತಾಂತ್ರಿಕ ದೋಷ ಬಂದರೂ ಶೀಘ್ರ ರಿಪೇರಿ ಮಾಡಿಸಲಾಗುತ್ತದೆ. ಸರಿಯಾದ ನಿರ್ವಹಣೆ ಮಾಡದ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗುತ್ತಿದೆ. ಕೆಲ ಕಡೆ ಘಟಕಗಳ ಕಾಮಗಾರಿ ನಡೆಯುತ್ತಿದೆ.
-ವಿರೂಪಾಕ್ಷ, ಎಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಕೆಲ ಕಂಪನಿಗಳಿಂದ ನಿರ್ಮಾಣವಾಗಿರುವ ಶುದ್ಧ ನೀರಿನ ಘಟಕಗಳು ಸರಿಯಾಗಿ ನೀರು ಒದಗಿಸುತ್ತಿಲ್ಲ. ಕಂಪನಿಯವರೂ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ವಿದ್ಯುತ್‌ ಬಿಲ್‌ ಪಾವತಿಸಿಲ್ಲ ಎಂಬ ಕಾರಣಕ್ಕೆ ಕೆಇಬಿಯವರು ವಿದ್ಯುತ್‌ ಸಂಪರ್ಕ ಕಡಿತಗೊಳಿಸುತ್ತಾರೆ. ಸಂಬಂಧಪಟ್ಟ ಕಂಪನಿಗಳು ಇಂತಹ ಸಮಸ್ಯೆ ಪರಿಹರಿಸಬೇಕು.
-ಹನುಮಜಯಾ, ಗ್ರಾಪಂ ಸದಸ್ಯ

* ಚೇತನ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.