ಯು ಟರ್ನ್ ನಿರ್ಮಿಸಲು ಜನತೆ ಬೇಡಿಕೆ


Team Udayavani, Jan 2, 2020, 3:36 PM IST

kopala-tdy-2

ಕುಷ್ಟಗಿ: ಪಟ್ಟಣದ ಹೊರವಲಯದ ಕುಷ್ಟಗಿ- ಹೊಸಪೇಟೆ ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗೆ ಅಗ್ನಿಶಾಮಕ ಠಾಣೆಯ ಹಾಗೂ ಕೃಷ್ಣಗಿರಿ ಕಾಲೋನಿಯ ಬಳಿ ಡಿವೈಡರ್‌ಗೆ (ವಿಭಜಕ) ಯು ಟರ್ನ್ ನಿರ್ಮಿಸುವ ಬೇಡಿಕೆ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ.

ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗೆ ಏಕಮುಖ ಸಂಚಾರಕ್ಕೆ ಡಿವೈಡರ್‌ ನಿರ್ಮಿಸಿ ಗಿಡಗಳನ್ನು ಬೆಳೆಸಲಾಗಿದೆ.

ಆದರೆ ಪಟ್ಟಣದ ಹೊರವಲಯದಲ್ಲಿ ಅಗ್ನಿಶಾಮಕ ಠಾಣೆಯ ಬಳಿ ತುರ್ತು ಅಗತ್ಯತೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ವಾಹನ ಸಂಚರಿಸಲು ಸದರಿ ಡಿವೈಡರ್‌ ಗೆ ಯು-ಟರ್ನ್ ನಿರ್ಮಿಸಬೇಕೆಂಬುದು ದಶಕದ ಹಿಂದೆ ಹೆದ್ದಾರಿ ಅಗಲೀಕರಣ ವೇಳೆ ಅಗ್ನಿಶಾಮಕ ಠಾಣೆಯ ಮನವಿಗೆ ಹೆದ್ದಾರಿ ಪ್ರಾಧಿಕಾರ ಸ್ಪಂದಿಸಿರಲಿಲ್ಲ. ಹೀಗಾಗಿ ಅಗ್ನಿ ವಿಪತ್ತು ಸಂಭಂ ಸಿದರೆ ಅಗ್ನಿಶಾಮಕ ವಾಹನ ಸರ್ವಿಸ್‌ ರಸ್ತೆಯಲ್ಲಿ ಇಲ್ಲವೇ ಟ್ರಕ್‌ ರೆಸ್ಟ್‌ ಏರಿಯಾ ಬಳಿ ಇರುವ ಯು ಟರ್ನ್ ಮಾಡಿಕೊಂಡು ಹೋಗಬೇಕಿದ್ದು, ಅಗ್ನಿಶಾಮಕ ಕಾರ್ಯಚರಣೆಗೆ ವಿಳಂಬವಾಗುತ್ತಿದೆ.

ಡಿವೈಡರ್‌ ಮೂಲಕ ಅಡ್ಡದಾರಿ: ಈ ಸ್ಥಳದಲ್ಲಿ ಹೆದ್ದಾರಿ ಕ್ರಾಸ್‌ ಮಾಡಬೇಕಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರೇ ಡಿವೈಡರ್‌ ಒಡೆದು ಅಡ್ಡದಾರಿ ಮಾಡಿಕೊಂಡಿದ್ದಾರೆ. ಇದರಲ್ಲಿ ಬೈಕ್‌ಗಳು ಸುತ್ತುವರಿದು ಹೋಗುವುದನ್ನು ತಪ್ಪಿಸಲು ಈ ಅಡ್ಡದಾರಿ ಅನುಕೂಲವಾಗಿದೆ. ಈ ಅಡ್ಡದಾರಿ ಎಷ್ಟು ಅನುಕೂಲವಾಗಿದೆಯೋ ಅಷ್ಟೇ ಅಪಾಯಕಾರಿಯಾಗಿದೆ. ಹೆದ್ದಾರಿಯಲ್ಲಿ ಶರವೇಗದಲ್ಲಿ ವಾಹನಗಳು ಸಂಚರಿಸುತ್ತಿದ್ದು, ಸದರಿ ಡಿವೈಡರ್‌ ಅಡ್ಡದಾರಿಯಲ್ಲಿ ಸಾಗುವವರು, ವಾಹನಗಳ ಬರುವಿಕೆ ಗಮನಿಸಿ ದಾಟಿದರೆ ಯಾವೂದೇ ಅಪಾಯವಿಲ್ಲ. ಇದರ ಪರಿವೇ ಇಲ್ಲದೇ ಏಕಾಏಕಿ ದಾಟಿದರೆ ಅಪಘಾತಗಳು ಸಂಭವಿಸುವುದು ಖಚಿತವಾಗಿದೆ. ಇಲ್ಲಿನ ಪರಿಸ್ಥಿತಿ ಅರಿತು ಹೆದ್ದಾರಿ ನಿರ್ವಹಣೆ ಗುತ್ತಿಗೆ ವಹಿಸಿಕೊಂಡಿರುವ ಓರಿಯಂಟಲ್‌ ಸಂಸ್ಥೆಯವರು, ಡಿವೈಡರ್‌ ಅಡ್ಡದಾರಿಗೆ ಬಂದ್‌ ಮಾಡಲು ಯತ್ನಿಸಿದ್ದರೂ, ತೀರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಡಿವೈಡರ್‌ ಒಡೆದು ದಾರಿ ಮಾಡಿಕೊಂಡಿದ್ದು ಸದರಿ ಸಂಸ್ಥೆಯವರಿಗೂ ತಲೆ ನೋವಾಗಿದೆ.

ಮನವಿ ಸಲ್ಲಿಕೆ: ಕಳೆದ ಡಿ. 30ರಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಕಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರಿಬ್ಬರು ಕಾಲು ಮುರಿತದ ಗಾಯವಾಗಿದೆ. ಇಂತಹ ಪ್ರಕರಣ ಮರುಕಳಿಸದಂತೆ ಸ್ಥಳೀಯ ಹೈದ್ರಾಬಾದ್‌ ಕರ್ನಾಟಕ ರಕ್ಷಣಾ ವೇದಿಕೆ ಸ್ಥಳೀಯ ಓರಿಯಂಟಲ್‌ ಅಧಿಕಾರಿಗಳ ಮೂಲಕ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯವಸ್ಥಾಪಕರಿಗೆ ಹಾಗೂ ಸಂಸದ ಕರಡಿ ಸಂಗಣ್ಣ ಅವರಿಗೆ ಮನವಿ ಸಲ್ಲಿಸಿದೆ.

ಯು ಟರ್ನ್ ಬೇಡಿಕೆ: ಸದರಿ ಪ್ರದೇಶದ ಹೆದ್ದಾರಿಯ ಒಂದು ಬದಿಯಲ್ಲಿ ಪೆಟ್ರೋಲ್‌ ಬಂಕ್‌, ಪ್ರವಾಸೋದ್ಯಮದಿಂದ ಅನುಮತಿ ಪಡೆದ ಖಾಸಗಿ ಹೋಟೆಲ್‌ ಸೇರಿದಂತೆ ವಿಜಯ ಚಂದ್ರಶೇಖರ ನಗರ, ಗೌರಿ ನಗರ, ಅನ್ನದಾನೇಶ್ವರ ನಗರಗಳಿದ್ದು, ಇನ್ನೊಂದು ಬದಿಯಲ್ಲಿ ಕೃಷ್ಣಗಿರಿ ಕಾಲೋನಿ, ಸಂತ ಶಿಶುನಾಳ ಶರೀಪ ನಗರ, ಕೆಐಡಿಬಿಯ ಗ್ರಾನೈಟ್‌ ಕಾರ್ಖಾನೆಗಳ ಸಮೂಹ, ಶಿತಲೀಕರಣ ಘಟಕ, ಅಗ್ನಿ ಶಾಮ ಠಾಣೆಗಳಿದ್ದು, ಸದ್ಯ ಕೃಷ್ಣಗಿರಿ ಮೂಲಕ ಹೆದ್ದಾರಿ ಕ್ರಾಸ್‌ ಮಾಡಲಾಗುತ್ತಿದೆ. ಮುಂದೆ ಫ್ಲೈ ಓವರ್‌ ಸಂಚಾರ ಮುಕ್ತವಾದರೆ, ಕೃಷ್ಣಗಿರಿಯ ಮೂಲಕ ಹೆದ್ದಾರಿ ಕ್ರಾಸ್‌ ಮಾಡುವುದನ್ನು ಬಂದ್‌ ಮಾಡಿದರೆ ಪುನಃ ಸಾರ್ವಜನಿಕರ ವಿರೋಧ ಎದುರಿಸುವ ಸಾಧ್ಯತೆಗಳಿವೆ. ಸದರಿ ಪರಿಸ್ಥಿತಿ ಅರಿತು ಅಗ್ನಿಶಾಮಕ ಠಾಣೆ ಹಾಗೂ ಕೃಷ್ಣಗಿರಿ ಕಾಲೋನಿ ಬಳಿ ಯು-ಟರ್ನ್ ನಿರ್ಮಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.