ಕೋರೆಗಾಂವ್‌ ಇತಿಹಾಸ ತಿಳಿದುಕೊಳ್ಳಿ

ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಸೈನಿಕರು ಸೋಲಿಸಿದ ಕದನ

Team Udayavani, Jan 2, 2020, 4:49 PM IST

2-January-27

ಸಿಂದಗಿ: ಭೀಮಾ ಕೋರೆಗಾಂವ್‌ ವಿಜಯಸ್ತಂಭದ ಇತಿಹಾಸ ನಾವೆಲ್ಲರೂ ಅರಿಯುವುದು ಅವಶ್ಯ ಎಂದು ಧಾರವಾಡದ ಕೆಸಿಡಿ ಕಾಲೇಜಿನ ಉಪನ್ಯಾಸಕ ಸಿದ್ದರಾಮ ಕಾರ್ಣಿಕ ಹೇಳಿದರು.

ಬುಧವಾರ ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಭೀಮಾ ಕೋರೆಗಾಂವ್‌ ವಿಜಯದ 202ನೇ ವರ್ಷಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

1818ರಂದು ನಡೆದ ಕೋರೆಗಾಂವ್‌ ಯುದ್ಧದ ವಿಜಯೋತ್ಸವ ಸಿಂದಗಿ ಪಟ್ಟಣದಲ್ಲಿ ಆಚರಿಸುವ ಮೂಲಕ ಕೋರೆಗಾಂವ್‌ ವಿಜಯೋತ್ಸವದ ಇತಿಹಾಸ ಈ ಭಾಗದ ಜನತೆಗೆ ತಿಳಿಸಲು ಮುಂದಾದ ಯುವಕರ ಕಾರ್ಯ, ಅಂಬೇಡ್ಕರ್‌ ವೃತ್ತದ ಪಕ್ಕದಲ್ಲಿ ಯುವಕರು ಭೀಮಾ ಕೋರೆಗಾಂವ್‌ ವಿಜಯಸ್ತಂಭ ಮಾದರಿ ನಿರ್ಮಾಣ ಮಾಡಿ ಇತಿಹಾಸ ಯುವ ಜನಾಂಗಕ್ಕೆ ತಿಳಿಸುತ್ತಿರುವುದು ಹೆಮ್ಮೆ ವಿಷಯವಾಗಿದೆ ಎಂದರು.

ನಮ್ಮೆಲ್ಲರ ಸ್ವಾಭಿಮಾನದ ಸಂಕೇತ, ಚಾರಿತ್ರಿಕ ಅರಿವನ್ನು ಮೂಡಿಸಿದವರು ಡಾ| ಬಿ.ಆರ್‌. ಅಂಬೇಡ್ಕರ್‌. ಪ್ರತಿಯೊಂದು ಕಾರ್ಯಕ್ರಮಗಳು ಆತ್ಮಾವಲೋಕನ ಮಾಡಿಕೊಳ್ಳುವ ಸಭೆಯಾಗಬೇಕು. ಸಿಂದಗಿ ಪಟ್ಟಣದಲ್ಲಿ ಭೀಮಾ ಕೋರೆಗಾಂವ್‌ ವಿಜಯಸ್ತಂಭದ ಮಾದರಿ ಸ್ಥಾಪನೆ ಮಾಡಿರುವುದು ಒಳ್ಳೆ ಸಂಗತಿ. ಕೋರೆಗಾಂವ್‌ ಇತಿಹಾಸವನ್ನು ಅರಿಯಬೇಕು. ಆಗ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ ಎಂದು ಹೇಳಿದರು.

1818ರ ಹೊಸ ವರ್ಷದ ಸಂದರ್ಭದಲ್ಲಿ ನಡೆದ ಆ ಯುದ್ಧದ ವಿವರ ಹೇಳುವುದಕ್ಕೂ ಮುನ್ನ ಆ ಸಮಯದಲ್ಲಿ ಇದ್ದ ಸಾಮಾಜಿಕ ಸ್ಥಿತಿಗತಿಯನ್ನು ದಾಖಲಿಸುವುದು ಸೂಕ್ತವೆನಿಸುತ್ತದೆ. 1818 ಅದು ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತದ ಕಾಲ. ಆಗಿನ ಪೇಶ್ವೆ ಮಂತ್ರಿ 2ನೇ ಬಾಜೀರಾಯ. ಸಾಮಾಜಿಕ ದುಸ್ಥಿತಿ ಸಂದರ್ಭದಲ್ಲಿ ಸಾಮ್ರಾಜ್ಯದ ವಿರುದ್ಧ ಹೋರಾಡುವ ಅದ್ಭುತ ಅವಕಾಶವೊಂದು ಬರುತ್ತದೆ. ಅದುವೇ ಕೋರೆಗಾಂವ್‌ ಯುದ್ಧ ಎಂದು ಹೇಳಿದರು.

ಜಿಪಂ ಸದಸ್ಯ ಬಿ.ಆರ್‌. ಯಂಟಮನ ಮಾತನಾಡಿ, ಇತಿಹಾಸದಲ್ಲಿ ಮುಚ್ಚಿ ಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಿತರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ಭೀಮಾ ಕೋರೆಗಾಂವ್‌ ಯುದ್ಧವಾಗಿದೆ. ವಿಜಯಕ್ಕೆ ಕಾರಣರಾದ ಸೈನಿಕರಿಗೆ ಗೌರವಿಸೊಣ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ದಲಿತ ಸೇನೆ ರಾಜ್ಯಾಧ್ಯಕ್ಷ ಹನುಮಂತ ಯಳಸಂಗಿ, ಮೆರವಣಿಗೆ ಚಾಲನೆ ಮಾಡಿದ ಧಾರವಾಡದ ಜಿ.ಆರ್‌. ಗ್ರೂಪ್‌ನ ಶಿವಾನಂದ ಪಾಟೀಲ ಸೋಮಜಾಳ, ಡಿಎಸ್ಸೆಸ್‌ ಜಿಲ್ಲಾ ಸಂಘಟನಾ ಸಂಚಾಲಕ ವೈ.ಸಿ. ಮಯೂರ ಮಾತನಾಡಿದರು.

ಸಾನ್ನಿಧ್ಯ ವಹಿಸಿದ್ದ ಸಂಘಪಾಲ ಭಂತೇಜಿ, ದೇವರಗುಡ್ಡದ ಧರ್ಮದರ್ಶಿ ಡಾ| ಸಂದೀಪ ಪಾಟೀಲ, ಕರ್ನಾಟಕ ದಲಿತ ಸೇನೆ ರಾಜ್ಯ ಉಪಾಧ್ಯಕ್ಷ ರಾಜಶೇಖರ ಚೌರ, ತಾಲೂಕಾಧ್ಯಕ್ಷ ಶಿವಾನಂದ ಆಲಮೇಲ, ಕರವೇ ರಾಜ್ಯ ಸಂಚಾಲಕ ಸಂತೋಷ ಪಾಟೀಲ ಡಂಬಳ, ಸ್ಥಳಿಯ ಗಣ್ಯ ವ್ಯಾಪಾರಸ್ಥ ಅಶೋಕ ವಾರದ, ಆದರ್ಶ ಶಿಕ್ಷಕ ಎಂ.ಎಸ್‌. ಚೌರ, ಬಿಜೆಪಿ ಮುಖಂಡ ಸಿದ್ದು ಬುಳ್ಳಾ, ಈರಫಾನ್‌ ತಲಕಾರಿ, ಡಾ.ಅನೀಲ ನಾಯಕ, ಬಿಜೆಪಿ ಮಹಿಳಾ ಮುಖಂಡೆ ಸುನಂದಾ ಯಂಪೂರೆ, ಸಾಯಬಣ್ಣ ಪುರದಾಳ, ಪ್ರಧಾನಿ ಮೂಲಿಮನಿ, ಸಿಆರ್‌ಪಿ ಡಿ.ಎಂ. ಮಾವೂರ, ಆನಂದ ತೇರದಾಳ, ಸಂತೋಷ ಭಜಂತ್ರಿ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು.

ಅಜೀತ ಚೌರ, ಜೈಭೀಮ ನಾಯ್ಕೋಡಿ, ಸಂತೋಷ ಪೂಜಾರಿ, ಶರಣು ಬ್ಯಾಕ್ಯೋಡ, ಚನ್ನು ಬಳಗಾನೂರ, ಮೋಹನ ಬರಗಾಲ, ರವಿಕಾಂತ ನಡುವಿನಕೇರಿ, ಸಾಯಬಣ್ಣ ದೊಡಮನಿ, ಗೌತಮ ಮೇಟಿ, ಭೀಮು ಹೊಸಮನಿ, ಗೋಲ್ಲಾಳ ಬ್ಯಾಕೋಡ, ಮಹಾವೀರ ಸುಲ್ಪಿ, ಮಂಜು ಬಬಲೇಶ್ವರ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಶೇಖರ ಚೌರ ಸ್ವಾಗತಿಸಿದರು. ವಿಜಯಕುಮಾರ ಯಂಟಮಾನ, ಜಗದೀಶ ಸಿಂಗೆ ನಿರೂಪಿಸಿದರು. ಶಿವನಂದ ಆಲಮೇಲ ವಂದಿಸಿದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.