ಬಡವರು ಸತ್ತರೆ ಹೂಳಲು ಪ್ರಯಾಸ!


Team Udayavani, Jan 3, 2020, 2:46 PM IST

rc-tdy-1

ರಾಯಚೂರು: ನಗರದ ವ್ಯಾಪ್ತಿ ದಿನೇದಿನೆ ವಿಸ್ತಾರಗೊಳ್ಳುತ್ತಿದ್ದು, ಮೂಲಭೂತ ಸೌಲಭ್ಯಗಳ ಜತೆ ಶವ ಸಂಸ್ಕಾರ ಮಾಡಲು ಸ್ಮಶಾನಕ್ಕೂ ಸ್ಥಳಾಭಾವ ಎದುರಾಗಿದೆ. ಅದರಲ್ಲೂ ನಿರಾಶ್ರಿತರಿಗೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನಗರ ಮಾತ್ರವಲ್ಲ ಜಿಲ್ಲೆಯ ಸಾಕಷ್ಟು ಹಳ್ಳಿಗಳಲ್ಲೂ ಸ್ಮಶಾನದ ಕೊರತೆ ಕಾಡುತ್ತಿದೆ. ನಗರದಲ್ಲಿ 37 ಘೋಷಿತ ಕೊಳಚೆ ಪ್ರದೇಶಗಳಿದ್ದು, 20ಕ್ಕೂ ಅಧಿ ಕ ಅಘೋಷಿತ ಕೊಳಚೆ ಪ್ರದೇಶಗಳಿವೆ. ಇವರಿಗೆ ಇರಲು ಸಣ್ಣ ಸೂರು ಬಿಟ್ಟರೆ ಮತ್ತೂಂದು ಆಸ್ತಿಗಳಿಲ್ಲ. ಅಂಥವರು ಮೃತಪಟ್ಟಲ್ಲಿ ಶವಸಂಸ್ಕಾರ ಮಾಡಬೇಕಾದರೆ ನಾನಾ ಪಡಿಪಾಟಲು ಪಡುವಂತಾಗಿದೆ. ಸರ್ಕಾರಿ ಸ್ಥಳದಲ್ಲಿರುವ ಬಹುತೇಕ ಸ್ಮಶಾನಗಳು ತುಂಬಿ ಹೋಗಿವೆ. ಕೆಲವರು ಸಂಸ್ಕಾರ ಮಾಡಿದ ಮೇಲೆ ಹಿರಿಯರ ಸ್ಮರಣಾರ್ಥ ಸಮಾಧಿಗಳನ್ನು ಕಟ್ಟುತ್ತಿದ್ದು, ಇದರಿಂದ ಸ್ಥಳಾಭಾವ ಎದುರಾಗುತ್ತಿದೆ.

ಬಹುತೇಕರು ನಗರ ಸುತ್ತಲಿನ ಬೆಟ್ಟ ಗುಡ್ಡಗಳಲ್ಲೇ ಸಂಸ್ಕಾರ ಮಾಡುತ್ತಿದ್ದಾರೆ. ಅಂಥ ವೇಳೆ ಹಿಂದೆ ಹೂತ ಶವಗಳ ಅಸ್ಥಿ ಹೊರ ತೆಗೆದೇ ಮಾಡಬೇಕಾದ ಸ್ಥಿತಿಯಿದೆ. ಇನ್ನೊಂದೆಡೆ ಬಹುತೇಕ ಸ್ಮಶಾನಗಳು ನಿರ್ವಹಣೆ ಇಲ್ಲದೆ ಜಾಲಿ ಕಂಟಿ ಬೆಳೆದಿವೆ. ತಾಲೂಕಿನ ಉಡುಮಗಲ್‌ ಖಾನಾಪುರ ಗ್ರಾಮಕ್ಕೆ ಸ್ಮಶಾನವೇ ಇಲ್ಲ. ಖಾಸಗಿಯವರ ಗುಂಟೆ ಸ್ಥಳದಲ್ಲೇ ಶವಸಂಸ್ಕಾರ ಮಾಡುತ್ತಿದ್ದಾರೆ. ನಗರದ ಆಶಾಪುರ ರಸ್ತೆ, ಅಂಬೇಡ್ಕರ್‌ ಬಡಾವಣೆ, ಜ್ಯೋತಿ ಕಾಲೋನಿ, ಎಲ್‌ಬಿಎಸ್‌ ನಗರ ಸೇರಿ ಕೆಲ ಬಡಾವಣೆ ನಿವಾಸಿಗಳಿಗೆ ಈ ಸಮಸ್ಯೆ ಬಾಧಿಸುತ್ತಿದೆ. ಆದರೆ, ಹರಿಜನವಾಡದಲ್ಲಿ ನಿವಾಸಿಗಳ ಬೇಡಿಕೆಯನುಸಾರ ಈಗಾಗಲೇ ಮತ್ತೂಂದು ರುದ್ರಭೂಮಿ ಸೌಲಭ್ಯ ಕಲ್ಪಿಸಲಾಗಿದೆ. ಸ್ಲಂಗಳಲ್ಲಿ ವಾಸಿಸುವ ಕೆಲವರು ತಮ್ಮ ತಮ್ಮ ಸಮುದಾಯದ ರುದ್ರಭೂಮಿಗಳಿಗೆ ನಿಗದಿ ಮಾಡಿದ ಸ್ಥಳದಲ್ಲೇ ಶವ ಸಂಸ್ಕಾರ ಮಾಡುತ್ತಾರೆ. ಆದರೆ, ಇನ್ನೂ ಸಾಕಷ್ಟು ಜನರಿಗೆ ಈ ಸಮಸ್ಯೆ ತಪ್ಪಿಲ್ಲ.

ಸಮಾಧಿ ಕಟ್ಟದಿರಿ: ಸರ್ಕಾರಿ ಸ್ಥಳಗಳಲ್ಲಿರುವ ಸ್ಮಶಾನಗಳಲ್ಲಿ ಶವ ಸಂಸ್ಕಾರ ಮಾಡಿದ ನಂತರ ಯಾವುದೇ ಸಮಾಜದವರಾಗಲಿ ಸಮಾಧಿ  ಕಟ್ಟದಂತೆ ತಡೆ ಹಿಡಿಯಬೇಕು ಎಂದು ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಒತ್ತಾಯಿಸಿದೆ. ಸಮಾಧಿ  ಕಟ್ಟಿದರೆ ಅದನ್ನು ತೆರವು ಮಾಡುವುದು ಕಷ್ಟ. ಮಣ್ಣು ಮಾಡಿದ ಮೇಲೆ ಹಾಗೆ ಬಿಟ್ಟರೆ ಕೆಲ ದಿನಗಳಲ್ಲೇ ಅದೇ ಸ್ಥಳದಲ್ಲಿ ಬೇರೆ ಶವ ಹೂಳಬಹುದು.

ಸರ್ಕಾರಿ ಸ್ಥಳ ಲಭ್ಯ: ನಗರದ ಆಸುಪಾಸು ನೂರಾರು ಎಕರೆ ಸರ್ಕಾರಿ ಸ್ಥಳವಿದ್ದರೂ ನಗರಾಡಳಿತ ಸ್ಮಶಾನಕ್ಕಾಗಿ ನೀಡಲು ಮೀನಮೇಷ ಎಣಿಸುತ್ತಿದೆ ಎಂಬ ಆರೋಪಗಳಿವೆ. ಸುತ್ತಲೂ ಬೆಟ್ಟಗಳಿರುವ ನಗರ ಪ್ರದೇಶದಲ್ಲಿ ಶವ ಸಂಸ್ಕಾರ ಮಾಡಬೇಕಾದರೆ ಅಲೆದಾಡುವ ಸ್ಥಿತಿ ಇದೆ. ಅದರ ಆಯಾ ಬಡಾವಣೆಗಳಿಗೆ ಹತ್ತಿರದ ಗೈರಾಣಿ ಭೂಮಿ ಗುರುತಿಸಿ ರುದ್ರಭೂಮಿಗೆ ನೀಡಬೇಕೆಂಬ ಬೇಡಿಕೆ ಇದೆ.

 

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು

2-manvi

Manvi: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

1-reeee

Low BP ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾ*ವು!

18-

Sindhanur: ಗುಂಪುಗಳ ನಡುವೆ ಘರ್ಷಣೆ; ಓರ್ವ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.