ಸೂಡಿ ಉತ್ಸವ ನಡೆಸುವುದೇ ಸರ್ಕಾರ?


Team Udayavani, Jan 3, 2020, 4:05 PM IST

gadaga-tdy-1

ಗಜೇಂದ್ರಗಡ: ನಾಡಿನ ಪ್ರವಾಸಿ ಆಕರ್ಷಕ ತಾಣಗಳಲ್ಲೊಂದಾದ ಸೂಡಿಯಲ್ಲಿ ಉತ್ಸವ ಆಗಬೇಕೆನ್ನುವ ಆಸೆ-ಒತ್ತಾಯ ಇಂದು ನಿನ್ನೆಯದಲ್ಲ. ಇದಕ್ಕೆ ದಶಕಗಳ ಬೇಡಿಕೆ ಇದೆ. ಈವರ್ಷವಾದರೂ ಸರ್ಕಾರ “ಸೂಡಿ ಉತ್ಸವ’ ಆಚರಿಸಲು ಮುಂದಾಗುವುದೇ ಎಂಬುದು ಇತಿಹಾಸ ಪ್ರಿಯರ, ಈ ನಾಡಿನ ಜನರ ಒತ್ತಾಸೆಯಾಗಿದೆ

ಕಲ್ಯಾಣ ಚಾಲುಕ್ಯರ ಕಾಲದ ಅಕ್ಕಾದೇವಿ ಆಡಳಿತದಲ್ಲಿ ವಿದ್ಯಾ ಕೇಂದ್ರವಾಗಿದ್ದ ಸೂಡಿ ಗ್ರಾಮವನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ನಿಟ್ಟಿನಲ್ಲಿ ಸರ್ಕಾರ “ಸೂಡಿ ಉತ್ಸವ’ ಮಾಡಬೇಕೆಂಬ ಕೂಗು ಬಲವಾಗಿ ಕೇಳಿ ಬಂದಿದೆ. ಕಲೆ, ಇತಿಹಾಸ, ಧಾರ್ಮಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಭವ್ಯ ಪರಂಪರೆ ಬಿಂಬಿಸುವಂತಹ “ಸೂಡಿ ಉತ್ಸವ’ವನ್ನು ಜಿಲ್ಲಾಡಳಿತ ನಡೆಸಬೇಕೆನ್ನುವುದು ದಶಕದ ಕನಸಾಗಿದೆ

ಅಕ್ಕಾದೇವಿ ರಾಜಧಾನಿಯಾಗಿತ್ತು: 10ನೇ ಶತಮಾನದ ಕಲ್ಯಾಣರ ಚಾಲುಕ್ಯ ರಾಣಿ ಅಕ್ಕಾದೇವಿ ರಾಜಧಾನಿಯಾಗಿದ್ದ ಸೂಡಿ ಅತ್ಯಂತ ಉಚ್ಚಾಯ ಸ್ಥಿತಿಯಲ್ಲಿದ್ದಾಗ ನಿರ್ಮಾಣವಾಗಿರುವ ಜೋಡು ಕಳಸದ ದೇಗುಲ, ಅಕ್ಕೇಶ್ವರ (ಅನಂತಶಯನ,ಮಲ್ಲಿಕಾರ್ಜುನ) ದೇವಾಲಯ, ನಗರೇಶ್ವರ ದೇವಾಲಯ, ನಾಗಕುಂಡ ಪುಷ್ಕರಣಿ, ಹಂಪಿ ಸ್ವರೂಪದ ಬೃಹದಾಕಾರದ ಏಕಶಿಲೆ ಕಡಲೆಕಾಳು ಗಣಪತಿ, ನಂದಿ ಹಾಗೂ ಈಶ್ವರ ವಿಗ್ರಹ ಇರುವ ಮಂಟಪಗಳು, ಅರವತ್ತು ಅಡಿ ಎತ್ತರದ ಹುಡೆ ಸೇರಿ ಗ್ರಾಮದಲ್ಲಿ ಎಲ್ಲೇ ನೋಡಿದರಲ್ಲಿ ಮೈ ನವಿರೇಳಿಸುವಂತಹ ಶಿಲ್ಪಕಲೆಗಳು ಕಲ್ಯಾಣ ಚಾಲುಕ್ಯರ ಇತಿಹಾಸ ಸಾರಿ ಹೇಳುವಂತಿವೆ.

ಉತ್ಸವ ಹಲವರ ಆಸೆ: ಸ್ವಾತಂತ್ರ್ಯ ಹೋರಾಟಗಾರ ಸೂಡಿ ಗ್ರಾಮದ ದಿ| ವಿರುಪಾಕ್ಷಪ್ಪ ಅಬ್ಬಿಗೇರಿ ಅವರು ಅಂದಿನ ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ಡಾ| ಶಂಕರಲಿಂಗೇಗೌಡ ಅವರಿಗೆ “ಸೂಡಿ ಉತ್ಸವ’ ನಡೆಸಬೇಕೆಂದು ಮನವಿ ಮಾಡಿದ್ದರು. ಹಿಂದೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹಾಗೂ ಹಾಲಿ ಸಚಿವ ಬಿ. ಶ್ರೀರಾಮಲು, ಮತ್ತು ಶಾಸಕ ಕಳಕಪ್ಪ ಬಂಡಿ ಅವರ ಮೂಲಕವೂ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಹಲವರ ಆಸೆ-ಕನಸು ಇಂದಿಗೂ ಈಡೇರಿಲ್ಲ.

ಉತ್ಸವ ವಿಶೇಷತೆ: ಸರ್ಕಾರ ನಡೆಸುವ ಉತ್ಸವಗಳಲ್ಲಿ ಕಲೆ, ಸಂಗೀತ, ಸಾಹಿತ್ಯ, ನಾಟಕ, ನೃತ್ಯ, ಜಾನಪದ ಹಾಗೂ ಕಲಾ ಮಾಧ್ಯಮ ಅಲ್ಲದೇ ದೇಶದ ಹೆಸರಾಂತ ಕವಿಗಳು, ವಿದ್ವಾಂಸರು, ನೃತ್ಯ ಪಟುಗಳು, ಅಭಿನಯ ಚತುರರು, ಸಂಗೀತಗಾರರು ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ಬೆಳಗಿಸಿ ಜನರ ಮನದಾಳದಲ್ಲಿ ಬೇರೂರುವಂತೆ ಮಾಡುವುದೇ ಉತ್ಸವದ ಉದ್ದೇಶ. ಜಿಲ್ಲಾಡಳಿತ ಮತ್ತು ಶಾಸಕರು ಗ್ರಾಮದಲ್ಲಿ ಉತ್ಸವ ಆಚರಿಸಿ ಇಲ್ಲಿನ ಇತಿಹಾಸ ಪರಿಚಯಿಸುವ ಕಾರ್ಯ ಆಗಬೇಕಿದೆ ಎನ್ನುವುದು ಇತಿಹಾಸ ತಜ್ಞರ ಅಭಿಪ್ರಾಯ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.