![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 3, 2020, 10:08 PM IST
ಮುಂಬಯಿ: ಮಹಾ ವಿಕಾಸ್ ಅಘಾಡಿಯ ಸಭೆ ವೇಳೆ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರ ನಡುವೆ ವಿವಾದ ನಡೆಯಿತು ಎಂದು ವರದಿಯಾಗಿತ್ತು. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅಜಿತ್ ಪವಾರ್ ಅವರು, ಹಾಗೇ ಏನೂ ಆಗಿಲ್ಲ, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವದಂತಿಯನ್ನು ಹರಡುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಉಂಟಾಗಲಿಲ್ಲ ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಈ ಹಿಂದೆ ಮಹಾ ವಿಕಾಸ್ ಅಘಾಡಿಯ ಸಭೆ ನಡೆದಾಗ ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದ ವಿಷಯದಲ್ಲಿ ಅಜಿತ್ ಪವಾರ್ ಹಾಗೂ ಕಾಂಗ್ರೆಸ್ನ ಅಶೋಕ್ ಚವಾಣ್ ನಡುವೆ ವಿವಾದ ಉಂಟಾಯಿತು ಎಂದು ಹೇಳಲಾಗಿತ್ತು. ವಿವಾದದ ಅನಂತರ ಅಜಿತ್ ಮತ್ತು ಚವಾಣ್ ಅವರು ಸಭೆಯಿಂದ ಹೊರ ನಡೆದದಿದ್ದರು. ಸಭೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದ ಕೃಷಿ, ಗ್ರಾಮೀಣಾಭಿವೃದ್ಧಿ ಅಥವಾ ಸಹಕಾರಿ ಖಾತೆಗಳನ್ನು ಪಡೆಯಲು ಕಾಂಗ್ರೆಸ್ ವತಿಯಿಂದ ಬೇಡಿಕೆ ಇರಿಸಲಾಯಿತು.
ಈ ವಿವಾದದ ಬಗ್ಗೆ ಮಾಧ್ಯಮಗಳು ಅಜಿತ್ ಪವಾರ್ ಅವರನ್ನು ವಿಚಾರಿಸಿದಾಗ, ನನ್ನ ಹಾಗೂ ಅಶೋಕ್ ಚವಾಣ್ ನಡುವೆ ಬಹಳ ಒಳ್ಳೆಯ ಸಂಬಂಧವಿದೆ. ನಮ್ಮ ನಡುವೆ ಯಾವುದೇ ವಿವಾದ ನಡೆಯಲಿಲ್ಲ ಎಂದು ಅಜಿತ್ ಪವಾರ್ ಹೇಳಿದ್ದಾರೆ. ಅಶೋಕ್ ಚವಾಣ್ ಹಿರಿಯ ನಾಯಕ, ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ಅವರೊಂದಿಗೆ ಸಚಿವರಾಗಿ ಕೆಲಸ ಮಾಡಿದ್ದೇನೆ. ನಮಗೆ ಉತ್ತಮ ಸಂಬಂಧವಿದೆ. ಅಶೋಕ ಚವಾಣ್ ಹಾಗೂ ನಮ್ಮ ನಡುವೆ ಸುದ್ದಿಗಳೊಂದಿಗೆ ವಿವಾದವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.