ಅಮೆರಿಕ- ಇರಾನ್‌ ಸಂಯಮ ಕಾಪಾಡಲಿ


Team Udayavani, Jan 4, 2020, 6:09 AM IST

40

ಇರಾನ್‌ನ ಮಿಲಿಟರಿ ಜನರಲ್‌ ಖಾಸೆಮ್‌ ಸೊಲೈಮಾನಿಯನ್ನು ಅಮೆರಿಕ ಪಡೆಗಳು ಹತ್ಯೆ ಮಾಡಿದ ಬಳಿಕ ತೈಲ ಸಮೃದ್ಧ ರಾಷ್ಟ್ರದಲ್ಲಿ ಮತ್ತೂಮ್ಮೆ ಯುದ್ಧದ ಕಾರ್ಮೋಡ ಕವಿದಿದೆ. ಇರಾನ್‌ ಈಗಾಗಲೇ ಅಮೆರಿಕದ ಈ ಕ್ರಮವನ್ನು ಯುದ್ಧ ಘೋಷಣೆ ಎಂದು ಬಣ್ಣಿಸಿ ತೀವ್ರ ಪ್ರತೀಕಾರ ಕೈಗೊಳ್ಳುವ ಪ್ರತಿಜ್ಞೆ ಮಾಡಿದೆ. ಬಾಗ್ಧಾದ್‌ ವಿಮಾನ ನಿಲ್ದಾಣಕ್ಕೆ ವೈಮಾನಿಕ ದಾಳಿ ಮಾಡುವ ಮೂಲಕ ಅಮೆರಿಕ ಪಡೆ ಖಾಸೆಮ್‌ ಸೊಲೈಮನಿ ಸೇರಿ ಎಂಟು ಮಂದಿಯನ್ನು ಸಾಯಿಸಿದೆ.

ಇರಾನ್‌ ಮತ್ತು ಅಮೆರಿಕ ನಡುವೆ ಮುಸುಕಿನ ಯುದ್ಧ ಶುರುವಾಗಿ ತಿಂಗಳುಗಳೇ ಕಳೆದಿವೆ. ಇರಾಕ್‌ನಲ್ಲಿರುವ ತನ್ನ ಪಡೆಗಳ ಮೇಲೆ ಇರಾನ್‌ ರಾಕೆಟ್‌ ದಾಳಿ ನಡೆಸಿದೆ ಮತ್ತು ಬಾಗ್ಧಾದ್‌ನಲ್ಲಿರುವ ದೂತವಾಸದ ಮೇಲೆ ದಾಳಿ ಮಾಡಲು ಕುಮ್ಮಕ್ಕು ನೀಡಿದೆ ಎಂದು ಅಮೆರಿಕ ಇತ್ತೀಚೆಗಷ್ಟೆ ಆರೋಪಿಸಿತ್ತು. ಇದಕ್ಕೂ ಮುಂಚೆ ಅಮೆರಿಕದ ಒಂದು ಡ್ರೋನ್‌ ಅನ್ನು ಇರಾನ್‌ ಹೊಡೆದುರುಳಿಸಿದಾಗಲೂ ಯುದ್ಧ ಸದೃಶ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಕಳೆದೊಂದು ವಾರದಿಂದ ಎರಡೂ ದೇಶಗಳು ಬಹಿರಂಗವಾಗಿಯೇ ಯುದೊœàನ್ಮಾದವನ್ನು ಪ್ರದರ್ಶಿಸುತ್ತಿದ್ದವು. ಡಿ.27ರಂದು ಇರಾನ್‌ ರಾಕೆಟ್‌ ದಾಳಿಗೆ ಸಿಲುಕಿ ಅಮೆರಿಕದ ಗುತ್ತಿಗೆದಾರರೊಬ್ಬರು ಸಾವಿಗೀಡಾಗಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಅಮೆರಿಕ ಮಿಲಿಟರಿ ಜನರಲ್‌ ಅವರನ್ನೇ ಗುರಿ ಮಾಡಿಕೊಂಡು ದಾಳಿ ಮಾಡಿದೆ.

ಗಲ್ಫ್ ರಾಷ್ಟ್ರಗಲ್ಲಾಗುವ ಯಾವುದೇ ಕ್ಷೋಭೆಯ ಪರಿಣಾಮ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಭಾರತವೂ ಸೇರಿದಂತೆ ಹಲವು ದೇಶಗಳಿಗೆ ತಟ್ಟುತ್ತದೆ. ಈ ಕಾರಣಕ್ಕೆ ಇರಾನ್‌ ಮತ್ತು ಅಮೆರಿಕದ ಸಂಘರ್ಷ ಉಳಿದ ರಾಷ್ಟ್ರಗಳನ್ನು ಚಿಂತೆಗೀಡು ಮಾಡಿವೆ. ಇರಾನ್‌ ಮತ್ತು ಅಮೆರಿಕದ ನಡುವಿನ ಸಂಘರ್ಷ ತಾರಕಕ್ಕೇರಿದ ಬೆನ್ನಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ.4 ಹೆಚ್ಚಳವಾಗಿದೆ. ಎಲ್ಲಿಯಾದರೂ ನಿಜವಾದ ಯುದ್ಧವೇ ನಡೆದರೆ ತೈಲ ಬೆಲೆ ನಿಯಂತ್ರಣಕ್ಕೆ ಸಿಗದು. ಭಾರತಕ್ಕೆ ಇದರಿಂದ ಸಮಸ್ಯೆಗಳ ಸರಮಾಲೆಯೇ ಪ್ರಾರಂಭವಾಗಲಿದೆ. ಈಗಾಗಲೇ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಕೈಸುಡುತ್ತಿದ್ದು, ಇನ್ನಷ್ಟು ಬೆಲೆ ಹೆಚ್ಚಳವನ್ನು ಸಹಿಸಿಕೊಳ್ಳುವ ಸ್ಥಿತಿಯಲ್ಲಿ ಜನರಿಲ್ಲ. ಯುದ್ಧದಿಂದಾಗಿ ತೈಲ ಪೂರೈಕೆ ವ್ಯತ್ಯಯಗೊಂಡು ಬೆಲೆ ಹೆಚ್ಚಿದರೆ ಸರಕಾರವೂ ಏನೂ ಮಾಡಲಾಗದು. ನಮ್ಮಲ್ಲಿರುವ ದಾಸ್ತಾನು ಒಂದು ವಾರದ ಮಟ್ಟಿಗೂ ಸಾಕಾಗದು. ಇರಾನ್‌ ನಮ್ಮ ಮುಖ್ಯ ತೈಲ ಪೂರೈಕೆದಾರ ರಾಷ್ಟ್ರ.

ಇದೊಂದು ಕಾರಣವಾದರೆ ಪಶ್ಚಿಮ ಏಷ್ಯಾದಲ್ಲಿರುವ ಸುಮಾರು 80 ಲಕ್ಷ ಭಾರತೀಯರ ಸ್ಥಿತಿಯೂ ಅತಂತ್ರವಾಗಲಿದೆ. ಈ ಪೈಕಿ ಸುಮಾರು 30 ಲಕ್ಷ ಭಾರತೀಯರು ಸೌದಿ ಅರೇಬಿಯಾದಲ್ಲೇ ಇದ್ದಾರೆ. ಈ ಭಾಗದಲ್ಲಿ ಹಿಂದೆ ಯುದ್ಧದಂಥ ಪರಿಸ್ಥಿತಿ ತಲೆದೋರಿದಾಗ ಭಾರೀ ಪ್ರಮಾಣದಲ್ಲಿ ಜನರು ವಾಪಾಸು ಬಂದಿದ್ದರು. ಈಗ ದೇಶ ಆರ್ಥಿಕವಾಗಿಯೂ ಸಂಕಷ್ಟದ ಸ್ಥಿತಿಯಲ್ಲಿದ್ದು, ಈ ಪರಿಸ್ಥಿತಿಯಲ್ಲಿ ಈ ಮಾದರಿಯ ಬಿಕ್ಕಟ್ಟನ್ನು ಸಹಿಸಿಕೊಳ್ಳುವುದು ಕಷ್ಟವಾಗಬಹುದು. ಅನಿವಾಸಿ ಭಾರತೀಯರು, ನಿರ್ದಿಷ್ಟವಾಗಿ ಕೊಲ್ಲಿ ರಾಷ್ಟ್ರಗಳಲ್ಲಿರುವ ಭಾರತೀಯರು ವಾರ್ಷಿಕ ಸುಮಾರು 1 ಲಕ್ಷ ಕೋ. ರೂ.ಯಷ್ಟು ಮೊತ್ತವನ್ನು ತವರು ದೇಶಕ್ಕೆ ರವಾನಿಸಿಕೊಡುತ್ತಾರೆ. ಕೊಲ್ಲಿ ದೇಶಗಳ ಬಿಕ್ಕಟ್ಟು ಇದರ ಮೇಲೆ ದೊಡ್ಡ ಮಟ್ಟದ ಹೊಡೆತ ನೀಡಲಿದೆ.

ಇರಾನ್‌ನ ಚಾಬಹರ್‌ ಅಭಿವೃದ್ಧಿ ಯೋಜನೆಗೂ ಹಿನ್ನಡೆಯಾಗಬಹುದು. ಪಾಕಿಸ್ತಾನದ ಮಾರ್ಗವನ್ನು ತಪ್ಪಿಸಿ ಅಫ್ಘಾನಿಸ್ತಾನ ಮತ್ತು ಮಧ್ಯ ಏಷ್ಯಾದ ಮಾರುಕಟ್ಟೆಗಳಿಗೆ ನೇರ ಸಂಪರ್ಕ ಕಲ್ಪಿಸುವ ಸಲುವಾಗಿ ಭಾರತ ಇರಾನ್‌ನ ಚಾಬಹರ್‌ ಬಂದರನ್ನು ಅಭಿವೃದ್ಧಿಪಡಿಸುತ್ತಿದೆ. ಇಷ್ಟರ ತನಕ ಅಮೆರಿಕದ ಆರ್ಥಿಕ ದಿಗ್ಬಂಧನಗಳಿಂದ ಈ ಬಂದರನ್ನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಆದರೆ ಯುದ್ಧವೇನಾದರೂ ಸ್ಫೋಟಗೊಂಡರೆ ಈ ಯೋಜನೆ ಬಾಧಿತವಾಗಬಹುದು. ಅಲ್ಲದೆ ಯುದ್ಧ ಶೀಘ್ರವಾಗಿ ಇತರ ದೇಶಗಳಿಗೂ ಹರಡುವ ಸಾಧ್ಯತೆ ಇರುವುದರಿಂದ ಅದರ ಒಟ್ಟಾರೆ ಪರಿಣಾಮ ಭೀಕರವಾಗಬಹುದು. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳು ಸಂಯಮ ವಹಿಸುವಂತೆ ಮಾಡುವುದು ಈಗ ಅಂತಾರಾಷ್ಟ್ರೀಯ ಸಮುದಾಯದ ಆದ್ಯತೆಯ ನಡೆಯಾಗಬೇಕು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

BAnga

Bangladesh Unrest: ಹಿಂದೂ ಸಮುದಾಯದ ರಕ್ಷಣೆ: ಬಾಂಗ್ಲಾ ಸರಕಾರ ಬದ್ಧತೆ ತೋರಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.