ದುರಸ್ತಿಯಾಗದ ಚರಂಡಿ: ವಿದ್ಯಾರ್ಥಿಗಳಿಗೆ ಸಂಕಷ್ಟ!


Team Udayavani, Jan 4, 2020, 2:37 PM IST

cm–tdy-1

ಕಡೂರು: ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಎರಡು ವಿದ್ಯಾರ್ಥಿ ನಿಲಯಗಳ ಮುಂದೆ ಕಳೆದ 20 ದಿನಗಳಿಂದ ಶೌಚಾಲಯದ ನೀರು ಕೊಳಚೆ ನಿಂತು ದುರ್ವಾಸನೆ ಬೀರುತ್ತಿದೆ. ಆದರೆ, ಅಧಿಕಾರಿಗಳ ಮಧ್ಯೆ ಗೊಂದಲ ಉಂಟಾಗಿ ಚರಂಡಿ ದುರಸ್ತಿ ಮಾಡಿಸಲು ಸಾಧ್ಯವಾಗದ ಕಾರಣ ಹಾಸ್ಟೆಲ್‌ ಮಕ್ಕಳು ಮೂಗು ಮುಚ್ಚಿಕೊಂಡೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮೆಟ್ರಿಕ್‌ ನಂತರದ 2 ವಿದ್ಯಾರ್ಥಿ ನಿಲಯಗಳಿಂದ ಸುಮಾರು 250ಕ್ಕೂ ಹೆಚ್ಚಿನ ಮಕ್ಕಳು ನಿಲಯದಲ್ಲಿದ್ದಾರೆ. ಶೌಚಾಲಯದ ನೀರು ಮತ್ತು ಕಸ ಹೊರ ಹೋಗುವ ಪೈಪ್‌ ಲೈನ್‌ ಇಲ್ಲದ ಕಾರಣ ಮುಂದಿನ ರಸ್ತೆಗೆ ಬಿಡಲಾಗುತ್ತಿದೆ. ಇದರಿಂದ ಬಿಆರ್‌ಸಿ ಕಚೇರಿ, ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿ ನಿಲಯದೊಳಗೆ ತೆರಳಲು ಸಮಸ್ಯೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಬಿಸಿಎಂ ಅಧಿಕಾರಿ ದುರಸ್ತಿಗೆ ಮುಂದಾದಾಗ ಕ್ಷೇತ್ರ ಶಿಕ್ಷಾಣಾಧಿಕಾರಿ ನಮ್ಮ ಕಚೇರಿಯ ಮುಂದೆ, ಹಿಂದೆ ಪೈಪ್‌ಲೈನ್‌ ತೆಗೆದುಕೊಂಡು ಹೋಗಬೇಡಿ ಎಂದರು.

ಪುರಸಭೆ ಮುಖ್ಯಾಧಿಕಾರಿ ಹಾಗೂ ಸಂಬಂಧಿಸಿದ ವಾರ್ಡ್‌ ಸದಸ್ಯರು ಕೆಲಸ ಮಾಡಬೇಡಿ. ಪುರಸಭೆಯಿಂದ ಮಾಡಿಸುತ್ತೇವೆ ಎಂದು ಹೇಳಿದ್ದರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಇಲ್ಲಿಯವರೆಗೂ ಅನೇಕ ಬಾರಿ ಮನವಿ ಮಾಡಿದರೂ ಯಾರೊಬ್ಬರು ಸಹ ಸ್ಪಂದಿಸುತ್ತಿಲ್ಲ ಎಂದು ಬಿಸಿಎಂ ಅಧಿಕಾರಿ ನಾಗವಲ್ಲಿ ತಿಳಿಸಿದರು. ಅಲ್ಲದೇ, ಒಂದೆರಡು ದಿನಗಳು ಕಳೆದರೆ ಇಲಾಖೆಯಿಂದಲೇ ಗುಂಡಿಯನ್ನು ಮುಚ್ಚಿಸುವುದಾಗಿ ನಾಗವಲ್ಲಿ ಹೇಳಿದರು. ಕಳೆದ 20 ದಿನಗಳ ಹಿಂದೆ ದುರಸ್ತಿಗೆ ಗುಂಡಿ ತೆಗೆಯಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಮತ್ತೂಂದು ವಿದ್ಯಾರ್ಥಿ ನಿಲಯ ಇಲ್ಲಿಯೇ ಕಾರ್ಯ ನಿರ್ವಹಿಸುತ್ತಿದೆ. ಬಾಲಕಿಯರು ಪ್ರತಿ ದಿನ ಚರಂಡಿ ದಾಟುವುದೇ ಕಷ್ಟವಾಗಿದೆ. ಗ್ಯಾಸ್‌ ಸಿಲಿಂಡರ್‌ ತರುವುದು, ತರಕಾರಿ, ರೇಷನ್‌ ಒಳಗೆ ತರುವುದು ಸಮಸ್ಯೆಯಾಗಿದೆ. ನೀರು ದುರ್ವಾಸನೆ ಬೀರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಮಸ್ಯೆಯಾಗಿದೆ ಎಂಬ ಅಳಲನ್ನು ಬಾಲಕಿಯರು ತೋಡಿಕೊಂಡರು.

ಬಿಆರ್‌ಸಿ ಕಚೇರಿಗೆ ತೆರಳುವ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಶಿಕ್ಷಕ ವೃಂದ ಅಧಿಕಾರಿಗಳಿಗೆ ಮನವಿ ಮಾಡಿದೆ. ಅಧಿಕಾರಿಗಳ ಮುಸುಕಿನ ಗುದ್ದಾಟದಿಂದ ಬಾಲಕಿಯರಿಗೆ ನಿತ್ಯ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವವರೇ ಇಲ್ಲವೇ ಎಂಬ ಪ್ರಶ್ನೆ ಪೋಷಕರಿಂದ ಕೇಳಿ ಬರುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು, ಇಲಾಖೆಯ ಮುಖ್ಯಸ್ಥರು ಗುಂಡಿ ಮುಚ್ಚಿಸಿ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಲಿ ಎಂಬ ಮಾತು ಕೇಳಿ ಬರುತ್ತಿದೆ.

 

-ಏ.ಜೆ.ಪ್ರಕಾಶ್‌ ಮೂರ್ತಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

3-chikkamagaluru

Chikkamagaluru: ಟಾಟಾ ಏಸ್ ಆಟೋ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು

4-chikkamagaluru

Chikkamagaluru: ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಗೂಡ್ಸ್ ವಾಹನ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.