ದುರಸ್ತಿಯಾಗದ ಚರಂಡಿ: ವಿದ್ಯಾರ್ಥಿಗಳಿಗೆ ಸಂಕಷ್ಟ!


Team Udayavani, Jan 4, 2020, 2:37 PM IST

cm–tdy-1

ಕಡೂರು: ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಎರಡು ವಿದ್ಯಾರ್ಥಿ ನಿಲಯಗಳ ಮುಂದೆ ಕಳೆದ 20 ದಿನಗಳಿಂದ ಶೌಚಾಲಯದ ನೀರು ಕೊಳಚೆ ನಿಂತು ದುರ್ವಾಸನೆ ಬೀರುತ್ತಿದೆ. ಆದರೆ, ಅಧಿಕಾರಿಗಳ ಮಧ್ಯೆ ಗೊಂದಲ ಉಂಟಾಗಿ ಚರಂಡಿ ದುರಸ್ತಿ ಮಾಡಿಸಲು ಸಾಧ್ಯವಾಗದ ಕಾರಣ ಹಾಸ್ಟೆಲ್‌ ಮಕ್ಕಳು ಮೂಗು ಮುಚ್ಚಿಕೊಂಡೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮೆಟ್ರಿಕ್‌ ನಂತರದ 2 ವಿದ್ಯಾರ್ಥಿ ನಿಲಯಗಳಿಂದ ಸುಮಾರು 250ಕ್ಕೂ ಹೆಚ್ಚಿನ ಮಕ್ಕಳು ನಿಲಯದಲ್ಲಿದ್ದಾರೆ. ಶೌಚಾಲಯದ ನೀರು ಮತ್ತು ಕಸ ಹೊರ ಹೋಗುವ ಪೈಪ್‌ ಲೈನ್‌ ಇಲ್ಲದ ಕಾರಣ ಮುಂದಿನ ರಸ್ತೆಗೆ ಬಿಡಲಾಗುತ್ತಿದೆ. ಇದರಿಂದ ಬಿಆರ್‌ಸಿ ಕಚೇರಿ, ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿ ನಿಲಯದೊಳಗೆ ತೆರಳಲು ಸಮಸ್ಯೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಬಿಸಿಎಂ ಅಧಿಕಾರಿ ದುರಸ್ತಿಗೆ ಮುಂದಾದಾಗ ಕ್ಷೇತ್ರ ಶಿಕ್ಷಾಣಾಧಿಕಾರಿ ನಮ್ಮ ಕಚೇರಿಯ ಮುಂದೆ, ಹಿಂದೆ ಪೈಪ್‌ಲೈನ್‌ ತೆಗೆದುಕೊಂಡು ಹೋಗಬೇಡಿ ಎಂದರು.

ಪುರಸಭೆ ಮುಖ್ಯಾಧಿಕಾರಿ ಹಾಗೂ ಸಂಬಂಧಿಸಿದ ವಾರ್ಡ್‌ ಸದಸ್ಯರು ಕೆಲಸ ಮಾಡಬೇಡಿ. ಪುರಸಭೆಯಿಂದ ಮಾಡಿಸುತ್ತೇವೆ ಎಂದು ಹೇಳಿದ್ದರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಇಲ್ಲಿಯವರೆಗೂ ಅನೇಕ ಬಾರಿ ಮನವಿ ಮಾಡಿದರೂ ಯಾರೊಬ್ಬರು ಸಹ ಸ್ಪಂದಿಸುತ್ತಿಲ್ಲ ಎಂದು ಬಿಸಿಎಂ ಅಧಿಕಾರಿ ನಾಗವಲ್ಲಿ ತಿಳಿಸಿದರು. ಅಲ್ಲದೇ, ಒಂದೆರಡು ದಿನಗಳು ಕಳೆದರೆ ಇಲಾಖೆಯಿಂದಲೇ ಗುಂಡಿಯನ್ನು ಮುಚ್ಚಿಸುವುದಾಗಿ ನಾಗವಲ್ಲಿ ಹೇಳಿದರು. ಕಳೆದ 20 ದಿನಗಳ ಹಿಂದೆ ದುರಸ್ತಿಗೆ ಗುಂಡಿ ತೆಗೆಯಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಮತ್ತೂಂದು ವಿದ್ಯಾರ್ಥಿ ನಿಲಯ ಇಲ್ಲಿಯೇ ಕಾರ್ಯ ನಿರ್ವಹಿಸುತ್ತಿದೆ. ಬಾಲಕಿಯರು ಪ್ರತಿ ದಿನ ಚರಂಡಿ ದಾಟುವುದೇ ಕಷ್ಟವಾಗಿದೆ. ಗ್ಯಾಸ್‌ ಸಿಲಿಂಡರ್‌ ತರುವುದು, ತರಕಾರಿ, ರೇಷನ್‌ ಒಳಗೆ ತರುವುದು ಸಮಸ್ಯೆಯಾಗಿದೆ. ನೀರು ದುರ್ವಾಸನೆ ಬೀರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಮಸ್ಯೆಯಾಗಿದೆ ಎಂಬ ಅಳಲನ್ನು ಬಾಲಕಿಯರು ತೋಡಿಕೊಂಡರು.

ಬಿಆರ್‌ಸಿ ಕಚೇರಿಗೆ ತೆರಳುವ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಶಿಕ್ಷಕ ವೃಂದ ಅಧಿಕಾರಿಗಳಿಗೆ ಮನವಿ ಮಾಡಿದೆ. ಅಧಿಕಾರಿಗಳ ಮುಸುಕಿನ ಗುದ್ದಾಟದಿಂದ ಬಾಲಕಿಯರಿಗೆ ನಿತ್ಯ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವವರೇ ಇಲ್ಲವೇ ಎಂಬ ಪ್ರಶ್ನೆ ಪೋಷಕರಿಂದ ಕೇಳಿ ಬರುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು, ಇಲಾಖೆಯ ಮುಖ್ಯಸ್ಥರು ಗುಂಡಿ ಮುಚ್ಚಿಸಿ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಲಿ ಎಂಬ ಮಾತು ಕೇಳಿ ಬರುತ್ತಿದೆ.

 

-ಏ.ಜೆ.ಪ್ರಕಾಶ್‌ ಮೂರ್ತಿ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.