ಅಧಿಕಾರಿಗಳ ವಿರುದ್ಧ ಜನಪ್ರತಿನಿಧಿಗಳ ಆಕ್ರೋಶ


Team Udayavani, Jan 4, 2020, 3:50 PM IST

uk-tdy-1

ಜೋಯಿಡಾ: ತಾಲೂಕಿನಲ್ಲಿ ಮನುಷ್ಯರು ಪ್ರಾಣಿಗಳಿಗಿಂತ ಕಡೆಯಾಗಿದ್ದಾರೆ. ಇಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ. ಪ್ರತಿಬಾರಿಯೂ ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ ಬಿಟ್ಟರೆ ಯಾವುದೇ ತಿರ್ಮಾನವಾಗುತ್ತಿಲ್ಲ.ಅರಣ್ಯ ಇಲಾಖೆ ಅಭಿವೃದ್ಧಿಗೆ ಅವಕಾಶ ನೀಡುವ ಸ ಷ್ಟ ತಿರ್ಮಾನ ಕೈಗೊಳ್ಳುವವರೆಗೂ ಸಭೆಗೆ ಬಹಿಷ್ಕಾರ ಹಾಕುವುದಾಗಿ ತಾಪಂ ಸದಸ್ಯರು ಕೆಡಿಪಿ ಸಭೆಯಿಂದ ಹೊರನಡೆದರು.

ಅರಣ್ಯಾಧಿಕಾರಿಗಳು ಸಮಸ್ಯೆ ಬಗೆಹಿರಿಸುವ ಗಡವು ನೀಡಿದ ನಂತರ ಪುನಃ ಸಭೆ ಆರಂಭಿಸಲಾಯಿತು. ಶುಕ್ರವಾರ ಜೋಯಿಡಾ ತಾಪಂ ಅಧ್ಯಕ್ಷೆ ನರ್ಮದಾ ಪಾಕ್ಲೃಕರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ ಇಲಾಖೆ ವಿಷಯ ಚರ್ಚೆಗೆ ಬಂದಾಗ ಸಭೆಯಲ್ಲಿದ್ದ ಎಲ್ಲಾ ಸದಸ್ಯರು ಒಕ್ಕೂರಲಿನಿಂದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಮುಗಿಬಿದ್ದು, ಅಭಿವೃದ್ಧಿ ಕೆಲಸಕ್ಕೆ ಆಪಾದಿಸುತ್ತಿರುವ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಪಂ ಒಕ್ಕೂಟದ ಅಧ್ಯಕ್ಷ ಮಂಗೇಶ ಕಾಮತ್‌ ಮಾತನಾಡಿ, ಅರಣ್ಯಾಧಿಕಾರಿಗಳು ತಾಲೂಕಿನ ಅಭಿವೃದ್ಧಿ ಕಾಮಗಾರಿಗೆ ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದಾಗಿ ತಾಲೂಕಿನ 11 ಗ್ರಾಪಂಗಳಲ್ಲಿ ಸುಮಾರು 74 ಕಾಮಗಾರಿಗಳು ಸ್ಥಗಿತವಾಗಿದೆ. ಅಭಿವೃದ್ಧಿ ಮಾಡುವುದು ಬೇಡ ಎಂದರೆ ಇಲ್ಲಿ ಜನರು ಬದುಕುವುದು ಬೇಡವೇ ಎಂದು ಪ್ರಶ್ನಿಸಿದರು.

ಪ್ರಮುಖರಾದ ತಾಪಂ ಸದಸ್ಯ ಶರತ ಗುರ್ಜರ, ಗ್ರಾಪಂ ಅಧ್ಯಕ್ಷ ಮಂಜುನಾಥ ಮೋಕಾಶಿ, ಗ್ರಾಪಂ ಸದಸ್ಯ ಸಂತೋಷ ಮಂಥೇರೊ ಮುಂತಾದವರು ಅರಣ್ಯ ಇಲಾಖೆ ಅಭಿವೃದ್ಧಿಗೆ ಅಡ್ಡಿಪಡಿಸುವ ವಿರೋಧಿ ನೀತಿ ಖಂಡಿಸಿದರು.

ಅರಣ್ಯ ಇಲಾಖೆ ತಮಗೆ ಬೇಕಾದೆಡೆ ರಸ್ತೆಗಳನ್ನು ನಿರ್ಮಿಸಿಕೊಳ್ಳುತ್ತಿದೆ. ಆದರೆ ಸಾರ್ವಜಜನಿಕರಿಗೆ ರಸ್ತೆ ನಿರ್ಮಿಸಲು ಅಡ್ಡಿಪಡಿಸುತ್ತಿದೆ.  ಈ ರೀತಿ ಪ್ರಗತಿಗೆ ಅಡ್ಡಿಪಡಿಸುವುದಾದರೆ, ಈ ಕೆಡಿಪಿ ಸಭೆ ಏಕೆ?. ಕಳೆದೊಂದು ವರ್ಷದಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ತಿರ್ಮಾನ ಕೈಗೊಳ್ಳಲಾಗುತ್ತಿಲ್ಲ. ಆದ್ದರಿಂದ ಅಭಿವೃದ್ಧಿ ಕೆಲಸದ ಬಗೆ ಅರಣ್ಯ ಇಲಾಖೆ ನಿಲುವು ಸ್ಪಷಪ್ಟವಾಗಲಿ, ಅರಣ್ಯಾಧಿಕಾರಿಗಳು ಕೆಲಸ ಮಾಡಲು ಬಿಡುತ್ತಾರೋ ಇಲ್ಲವೋ ಸ್ಪಷ್ಟಪಡಿಸಲಿ, ಇಲ್ಲವಾದರೆ ನಾವು ಸಭೆ ಬಹಿಷ್ಕರಿಸಿ ಹೊರ ನಡೆಯುತ್ತೇವೆಂದು ಕಾಮತ್‌ ಹೇಳುತ್ತಿದ್ದತೆ ಎಲ್ಲಾ ಜನಪ್ರತಿನಿಧಿಗಳು ಸಭೆಯಿಂದ ಹೊರನಡೆದರು.

ಅಷ್ಟರಲ್ಲೆ, ತಾಲೂಕು ಅಧಿಕಾರಿಗಳು ಹಾಗೂ ಜಿಪಂ ಸದಸ್ಯ ರಮೇಶ ನಾಯ್ಕ ಹೊರನಡೆದ ಸದಸ್ಯರನ್ನು ಮನವರಿಕೆ ಮಾಡಿಸಿ, ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಲಾಗಿ, ಅರಣ್ಯಾಧಿಕಾರಿಗಳು ತಮ್ಮ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಜ. 7ರೊಳಗೆ ತಿರ್ಮಾನ ಕೈಗೊಂಡು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಮತ್ತೆ ಕೆಡಿಪಿ ಸಭೆ ಆರಂಭಗೊಂಡಿತು.

ಆರೋಗ್ಯ ಕೇಂದ್ರ ಮುಚ್ಚಿ: ತಾಲೂಕಿನ ಗುಂದ, ಕುಂಬಾರವಾಡಾ, ಉಳವಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಕೊರತೆ ಇದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಮೇಲಧಿಕಾರಿಗಳು ಯಾವುದೇ ಸೂಕ್ತ ಕ್ರಮಕೈಗೊಳ್ಳದೆ ಕೆಡಿಪಿ ಸಭೆಗೆ ಭರವಸೆ ನೀಡುತ್ತಲೇ ಕಾಲಕಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಾ| ಕೀರ್ತಿ ತಾಲೂಕು ಕೇಂದ್ರದಲ್ಲೆ ಕೆಲಸ ಮಾಡಲಿ. ಉಳಿದ ಆಸ್ಪತ್ರೆಗೆ ವೈದ್ಯರನ್ನು ನೇಮಕ ಮಾಡಲಾಗದಿದ್ದರೆ ಆಸ್ಪತ್ರೆ ಬಾಗಿಲು ಮುಚ್ಚಿ ಎಂದು ಮಂಗೇಶ ಕಾಮತ್‌ ಹೇಳಿ ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ತಾಲೂಕು ವೈದ್ಯಾಧಿ ಕಾರಿ ಸುಜಾತಾ ಉಕ್ಕಲಿ ಪ್ರತಿಕ್ರಿಯಿಸಿ, ಹೊಸ ವೈದ್ಯಾಧಿಕಾರಿಗಳು ಬಂದ ಕೆಲವೇ ದಿನದಲ್ಲಿ ಪುನಃ ವರ್ಗಾವಣೆ ಪಡೆಯುತ್ತಾರೆ. ಆಸ್ಪತ್ರೆ ಸಮಸ್ಯೆಗೆ ಸಾಧ್ಯವಾದಷ್ಟು ಸ್ಪಂದಿಸುವ ಪ್ರಯತ್ನ ಮಾಡುತ್ತಿದ್ದೇವೆ. ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುತ್ತೇವೆ ಎಂದರು.

ಜಿಪಂ ಸದಸ್ಯ ರಮೇಶ ನಾಯ್ಕ, ತಾಪಂ ಇಒ ಆನಂದ ಬಾಡಕುಂದ್ರಿ, ತಾಪಂ ಉಪಾಧ್ಯಕ್ಷ ವಿಜಯ ಪಂಡಿತ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.