ದಶಕದ ಬಳಿಕ ದ್ವಾರಸಮುದ್ರ ಕೆರೆ ಭರ್ತಿ


Team Udayavani, Jan 4, 2020, 3:58 PM IST

hasan-tdy-1

ಹಳೇಬೀಡು: ದಶಕಗಳಿಂದ ಭರ್ತಿಯಾಗದೇ ಬರಡಾಗಿದ್ದ ವಿಶ್ವ ಪ್ರಸಿದ್ಧ ದ್ವಾರಸಮುದ್ರ ಕೆರೆ ಸಂಪೂರ್ಣ ಭರ್ತಿಯಾಗಿದ್ದು, ಜೀವಕಳೆ ಬಂದಿದೆ. ಜತೆಗೆ ಸುತ್ತಲಿನ ಪ್ರದೇಶದಲ್ಲಿ ಅಂತರ್ಜಲ, ಕೃಷಿ ಚಟುವಟಿಕೆಗಳಿಗೆ ಮರುಜೀವ ಬಂದಂತಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬರಪೀಡಿತ ಪ್ರದೇಶವಾಗಿದ್ದ ಹಳೇಬೀಡು, ಜಾವಗಲ್‌, ಮಾದಿಹಳ್ಳಿ ಹೋಬಳಿಗಳ ಕೆರೆಗಳಿಗೆ ಯಗಚಿ ನದಿಯಿಂದ ರಣಘಟ್ಟ ಯೋಜನೆ ಮುಖಾಂತರ ನೀರು ಹರಿಸಲು ದೊಡ್ಡ ಮಟ್ಟದ ಹೋರಾಟವನ್ನು ರೈತ ಮುಖಂಡರು ದಶಕಗಳಿಂದ ಮಾಡಿಕೊಂಡು ಬಂದಿದ್ದರು. ಅಂದಿನ ಹೋರಾಟಕ್ಕೆ ಇಂದು ಫ‌ಲ ಸಿಕ್ಕಿದ್ದು, ಏತ ನೀರಾವರಿ ಯೋಜನೆ ಮತ್ತು ವರುಣನ ಕೃಪೆಗೆ ದ್ವಾರ ಸಮುದ್ರ ಕೆರೆ ಮೈದುಂಬಿಕೊಂಡಿದೆ.

750 ಹೆಕ್ಟೇರ್‌ ಪ್ರದೇಶದಲ್ಲಿ ಕೆರೆ: 9ನೇ ಶತಮಾನದಲ್ಲಿ ರಾಷ್ಟ್ರ ಕೂಟ ದೊರೆ ಧ್ರುವ ಅರಸನಿಂದ ನಿರ್ಮಿಸಲಾದ ದ್ವಾರಸಮುದ್ರ ಕೆರೆ, ಈ ಭಾಗದ ರೈತರ ಜೀವನಾಡಿಯಾಗಿದೆ. ಕೆರೆ ಸುಮಾರು 12 ವರ್ಷಗಳಿಂದ ನೀರಿಲ್ಲದೇ ಭಣಗುಡುತ್ತಿತ್ತು. ಈ ಭಾಗದ ಸುತ್ತ ಮುತ್ತ ಪ್ರದೇಶಗಳಲ್ಲಿ ಅಂತರ್ಜಲ ಕುಸಿದು ಸಾವಿರ ಅಡಿಗಳಷ್ಟು ಬೋರವೆಲ್‌ ಕೊರೆಸಿದರೂ ನೀರು ಬಾರದೇ ರೈತರು ಮಳೆಯನ್ನಾಧರಿಸಿ ಬೆಳೆಗಳನ್ನು ಬೆಳೆದು ಜೀವನ ಸಾಗಿಸಬೇಕಾದ ದುಸ್ಥಿತಿ ಒದಗಿ ಬಂದು ರೈತರು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಶೇ.75ರಷ್ಟು ಮಳೆಯಿಂದ ಮತ್ತು ಶೇ.25ರಷ್ಟು ಏತ ನೀರಾವರಿ ಯೋಜನೆ ಫ‌ಲದಿಂದ ನದಿಯಂತಿರುವ, ಇಷ್ಟೊಂದು ದೊಡ್ಡ ದ್ವಾರಸಮುದ್ರ ಕೆರೆ ತುಂಬುವ ಹಂತಕ್ಕೆ ತಲುಪಿದೆ.

85 ಮಂದಿ ವಿರುದ್ಧ ಪ್ರಕರಣ ದಾಖಲು: ಸುಮಾರು 4 ವರ್ಷಗಳ ಹಿಂದೆ ಹಳೇಬೀಡಿನ ಪುಷ್ಪಗಿರಿ ಡಾ.ಶ್ರೀ ಸೋಮಶೇಖರ ಸ್ವಾಮೀಜಿ ಹಾಗೂ 7 ಮಂದಿ ಸ್ವಾಮೀಜಿಯವರು ಸೇರಿ ಒಟ್ಟು 85 ಮಂದಿ ನೀರಾವರಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಇಂದಿಗೂ ಕೂಡ ಇತ್ಯರ್ಥವಾಗಿಲ್ಲ. ಆದರೆ ಅವರೆಲ್ಲರ ಹೋರಾಟದ ಫ‌ಲವಾಗಿ ಇಂದು ರಣಘಟ್ಟ ಯೋಜನೆ ಮುಖಾಂತರ ಹಳೇಬೀಡಿನ ಕೆರೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳ್ಳುವ ಆಶಾಭಾವನೆ ಜನರಲ್ಲಿ ಮೂಡಿದೆ.

ಪ್ರವಾಸಿಗರ ಆಕರ್ಷಣೆ: ದಿನಂಪ್ರತಿ ವಿಶ್ವ ಪ್ರಸಿದ್ಧ ಹೊಯ್ಸಳೇಶ್ವರ ದೇವಾಲಯ ವೀಕ್ಷಣೆಗೆ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಆಗಮಿಸುತ್ತಾರೆ. ಹೊಯ್ಸಳೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವಂತಹ ದ್ವಾರಸಮುದ್ರ ಕೆರೆ ತುಂಬಿರುವುದರಿಂದ ಕೆರೆಗೆ ಬೋಟಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಪಾದಯಾತ್ರೆ ಮಾಡಿದ್ದ ಯಡಿಯೂರಪ್ಪ  : ಹಳೇಬೀಡು, ಜಾವಗಲ್‌ ಕೆರೆಗಳಿಗೆ ನೀರು ತುಂಬಿಸುವ ಹೋರಾಟದಲ್ಲಿ ಸುಮಾರು 15 ವರ್ಷಗಳ ಹಿಂದೆ ಬಿಜೆಪಿ ಪ್ರತಿ ಪಕ್ಷ ಮುಖಂಡ ಯಡಿಯೂರಪ್ಪ ಹೋರಾಟ ನಡೆಸಿದ್ದರು. ನೀರಾವರಿ ಹೋರಾಟದಲ್ಲಿ ಪಾಲ್ಗೊಂಡು ಹಳೇಬೀಡಿನಲ್ಲಿ ಪಾದಯಾತ್ರೆ ಮಾಡಿದ್ದರು. ನಂತರ ಅವರೇ ಮುಖ್ಯಮಂತ್ರಿಯಾದ ನಂತರ ಮೊಟ್ಟ ಮೊದಲಿಗೆ ಏತ ನೀರಾವರಿಗೆ ಅಡಿಗಲ್ಲನ್ನು ಹಾಕಿ, ಮೊದಲ ಹಂತದಲ್ಲಿ 10 ಕೋಟಿ ರೂ. ಮತ್ತು ನಂತರದಲ್ಲಿ 4.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಏತ ನೀರಾವರಿ ಯೋಜನೆ ಮುಖಾಂತರ ಯಗಚಿ ನದಿಯಿಂದ ಹಳೇಬೀಡು, ಅಡಗೂರು ಕೆರೆಗಳಿಗೆ ನೀರು ಹರಿಸುವ ಕಾರ್ಯ ಯಶಸ್ವಿಗೊಳಿಸಿದರು. ಈ ಮಹತ್ತರ ಕಾರ್ಯದಿಂದ ಈ ಭಾಗದ ರೈತರಿಗೆ ಮರುಭೂಮಿಯಲ್ಲಿ ಓಯಸಿಸ್‌ ದೊರೆತಂತಾಯಿತು ಎನ್ನುತ್ತಾರೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಳ್ಳಿ ಸುರೇಶ್‌.

100 ಕೋಟಿ ರೂ. ಅನುದಾನ : ನೀರಾವರಿ ಹೋರಾಟದಲ್ಲಿ ತೊಡಗಿಸಿ ಕೊಂಡಿದ್ದ ಜೆಡಿಎಸ್‌ ಮುಖಂಡ ಕೆ.ಎಸ್‌. ಲಿಂಗೇಶ್‌ ಅವರು ಬೇಲೂರು ಕ್ಷೇತ್ರದ ಶಾಸಕ ರಾದ ಮೇಲೆ ಅವರ ಇಚ್ಛಾಶಕ್ತಿ ಮತ್ತು ನಿರಂತರ ಪರಿಶ್ರಮದಿಂದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವಿದ್ದಾಗ ಮುಖ್ಯಮಂತ್ರಿ ಯಾಗಿದ್ದ ಕುಮಾರಸ್ವಾಮಿ ಅವರ ಮನವೊಲಿಸಿ 100 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಬಿಡುಗಡೆ ಮಾಡಿಸಿಕೊಂಡು ಬಂದು ಈ ಭಾಗಕ್ಕೆ ಶಾಶ್ವತ ನೀರಾವರಿ ವ್ಯವಸ್ಥೆಗೆ ಅಡಿಗಲ್ಲು ಹಾಕಲಾಗಿತ್ತು. ಮುಂದಿನ ದಿನಗಳಲ್ಲಿ ಸುಮಾರು ಹಳೇಬೀಡಿನ ಸುತ್ತಮುತ್ತಲಿನ 50ಕ್ಕೂ ಹೆಚ್ಚು ಕೆರೆಗೆಳಿಗೆ ನೀರಾವರಿ ಸೌಲಭ್ಯ ದೊರೆಯುವಂತಾಗುತ್ತಿದೆ.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.