ದೇಗುಲಕ್ಕೆ ನಾಮಫ‌ಲಕ ಅಳವಡಿಕೆ ವಿವಾದ


Team Udayavani, Jan 4, 2020, 4:16 PM IST

mandya-tdy-1

ಮಳವಳ್ಳಿ: ತಾಲೂಕಿನ ಮಾದಹಳ್ಳಿಯಲ್ಲಿ ಶ್ರೀಬಸವೇಶ್ವರ ದೇವಾಲಯ ಉದ್ಘಾಟನೆಗೆ ನಾಮಫ‌ಲಕ ಹಾಕಿಸುವ ವಿಚಾರ ವಿವಾದದ ಸ್ವರೂಪ ತಾಳಿದೆ. ನಾಮಫ‌ಲಕ ಅಳವಡಿಸಲು ತಹಶೀಲ್ದಾರ್‌ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ನಾಮಫ‌ಲಕ ಹಾಕಿದಲ್ಲಿ ಮುಂದಾಗುವ ಅನಾಹುತಕ್ಕೆ ತಹಶೀಲ್ದಾರರೇ ಹೊಣೆ ಎಂದು ಎಚ್ಚರಿಸಿದ ಘಟನೆ ನಡೆದಿದೆ.

ಗ್ರಾಮದಲ್ಲಿ ಮುಜರಾಯಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶ್ರೀ ಬಸವೇಶ್ವರ ದೇವಸ್ಥಾನಸರ್ಕಾರದಅನುದಾನ ಪಡೆಯದೆ ಗ್ರಾಮಸ್ಥರು ಹಾಗೂ ದಾನಿಗಳ ನೆರವಿನಿಂದ ದೇವಾಲಯ ನಿರ್ಮಾಣಗೊಂಡಿದೆ. ಕೆ.ಆರ್‌.ಪೇಟೆ ಉಪ ಚುನಾವಣೆಗೆ ಸಂದರ್ಭದಲ್ಲಿ ನೀತಿ ಸಂಹಿತೆ ಇದ್ದು ಶ್ರೀ ಚುಂಚನಗಿರಿ ಸ್ವಾಮೀಜಿಯಿಂದ ಉದ್ಘಾಟನೆ ಮಾಡಿಸಲಾಗಿತ್ತು. ಆದರೆ, ದೇವಾಲಯ ಉದ್ಘಾಟನೆಗೊಂಡು ಹಲವು ದಿನಗಳ ನಂತರ ಶಿಷ್ಟಾಚಾರದ ಪ್ರಕಾರ ನಾಮಫ‌ಲಕ ಹಾಕಬೇಕು ಎಂದು ತಹಶೀಲ್ದಾರ್‌ ಚಂದ್ರಮೌಳಿ ತಿಳಿಸಿದ್ದು, ಗ್ರಾಮಸ್ಥರು ಯಾವುದೇ ಕಾರಣಕ್ಕೂ ಸ್ವಾಮೀಜಿ ಹೆಸರು ಬಿಟ್ಟು ಇನ್ನಾವುದೇ ಜನಪ್ರತಿನಿಧಿಗಳ ಹೆಸರಿರುವ ನಾಮಫ‌ಲಕ ಹಾಕಬಾರದು ಎಂದು ಬಿಗಿ ಪಟ್ಟುಹಿಡಿದರು.

ಶಿಷ್ಠಾಚಾರದ ಪ್ರಕಾರ ಹಾಕುವುದಾದರೂ ನಮಗೆ ಕಾಲಾವಕಾಶ ನೀಡಬೇಕು. ನಾವೂ ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಮನವಿ ನೀಡುತ್ತೇವೆ. ಅವರಿಂದ ಯಾವ ಸೂಚನೆ ಬರುತ್ತದೆ ಎಂದು ತಿಳಿದ ನಂತರ ಹಾಕಿಸಿ. ಅಲ್ಲಿಯವರಗೆ ಹಾಕಿಸಬಾರದೆಂದು ಎರಡು ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಯಿತು.

ದಾನಿಗಳ ಹೆಸರು ಹಾಕಿ: ನೀತಿ ಸಂಹಿತೆ ಇದ್ದು ಜನಪ್ರತಿನಿಧಿಗಳು ವೇದಿಕೆಯಲ್ಲೇ ಇರಲಿಲ್ಲ. ಜೊತೆಗೆ ಯಾರೂ ದೇವಾಲಯ ನಿರ್ಮಾಣಕ್ಕೆ ಅನುದಾನ ನೀಡಿಲ್ಲ. ಕೇವಲ ಅಧಿಕಾರ ಇದೆ ಎಂದು ನಾಮಫ‌ಲಕ ಹಾಕಬಾರದು. ಜೊತೆಗೆ ದೇವಾಲಯಕ್ಕೆ ಹಲವರು ಧನ ಸಹಾಯ ನೀಡಿದ್ದು ಅವರ ಹೆಸರು ಹಾಕಿಸಿ. ಅಲ್ಲಿಯವರೆಗೆ ಹಾಕಿಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಇಡೀ ಗ್ರಾಮವೇ ಬೇಡವೆಂದರೂ ಯಾರದೋ ಒತ್ತಡಕ್ಕೆ ಮಣಿದು ನಾಮಫ‌ಲಕ ಹಾಕಿಸುವುದಾದರ ಮುಂದೆ ಆಗುವ ಯಾವುದೇ ಅನಾಹುತಕ್ಕೆ ನಮ್ಮನ್ನು ಹೊಣೆ ಮಾಡಬಾರದು. ಒಂದು ವೇಳೆ ಕಿಡಿಗೇಡಿಗಳು ಅನಾಹುತ ಮಾಡಿ ಅದನ್ನು ನಮ್ಮ ಮೇಲೆ ಹೊರಿಸಬಾರದು. ಹಾಗಿದ್ದರೆ ಜವಾಬ್ದಾರಿ ಹೊತ್ತು ಹಾಕಿಸಿ ಎಂದರು.

ಶಿಷ್ಠಾಚಾರವನ್ನೇ ಪಾಲನೆ ಮಾಡಬೇಕೆಂದರೆ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಏಕಿಲ್ಲ ಎಂದು ಪ್ರಶ್ನಿಸಿದರು. ಅದಕ್ಕೆ ತಹಶೀಲ್ದಾರ್‌ ಸಮರ್ಪಕ ಉತ್ತರ ನೀಡಲಿಲ್ಲ. ಎರಡು ಗಂಟೆ ಚರ್ಚೆ ನಡೆದು ಕಾಲಾವಕಾಶ ನೀಡದೆ ನಾಮಫ‌ಲಕ ಅಳವಡಿಸಲು ಮುಂದಾದಾಗ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು.

ಗ್ರಾಮದಲ್ಲಿ ಒಂದೇ ಬಾರಿ ಮೂರು ದೇವಾಲಯ ನಿರ್ಮಿಸಿ ಉದ್ಘಾಟಿಸಿದ್ದು, ಉಳಿದ ಎರಡು ದೇವಾಲಯಕ್ಕೆ ನಾಮಫ‌ಲಕ ಹಾಕಿಸದೆ ಶ್ರೀಬಸವೇಶ್ವರ ದೇವಸ್ಥಾನಕ್ಕೆ ಮಾತ್ರ ಏಕೆ ಹಾಕಿಸಬೇಕು. ನಿಯಮ ಇದೆಯಾ. ಹಾಗಿದ್ದರೆ ಮೂರು ದೇವಾಲಯಕ್ಕೂ ಹಾಕಿಸಿ ಇಲ್ಲದಿದ್ದರೆ ಯಾವುದೇ ದೇವಸ್ಥಾನಕ್ಕೂ ಹಾಕಸಬೇಡಿ ಎಂದು ಮನವಿ ಮಾಡಿದರೂ ತಹಶೀಲ್ದಾರ್‌ ನಾನು ಕಾನೂನು ಪಾಲನೇ ಮಾಡಬೇಕಿದೆ ಈ ಹಿನ್ನೆಲೆಯಲ್ಲಿ ಹಾಕಿಸು ವುದಾಗಿ ಹೇಳಿ ಅಂತಿಮವಾಗಿ ಅಳವಡಿಸಿ ತೆರಳಿದರು.

ಗ್ರಾಮಾಂತರ ಸರ್ಕಲ್‌ ಇನ್ಸ್‌ಪೆಕ್ಟರ್‌ ಧರ್ಮೇಂದ್ರ ಮಾತನಾಡಿ, ಗ್ರಾಮದಲ್ಲಿ ಶಾಂತಿಯುತವಾಗಿ ದೇವಸ್ಥಾನ ನಿರ್ಮಿಸಿದ್ದು, ಅಹಿತಕರ ಘಟನೆಗೆ ಅವಕಾಶ ನೀಡದಂತೆ ನಾಮಫ‌ಲಕ ಅಳವಡಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು. ಪಿಎಸ್‌ಐ ಮಂಜು ಸೇರಿದಂತೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.