ಆಲಸಿಗಳೆಂದರೆ ಹೃದ್ರೋಗಕ್ಕೆ ಪಂಚಪ್ರಾಣ: ಡಾ.ಮಂಜುನಾಥ್‌


Team Udayavani, Jan 5, 2020, 3:09 AM IST

Dr-Manjunath-at-ISC2

ಬೆಂಗಳೂರು: ಭಾರತೀಯ ವದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ವರದಿ ಪ್ರಕಾರ ಭಾರತದ ಜನಸಂಖ್ಯೆ ಪೈಕಿ ಶೇ.51 ಮಂದಿ ಆಲಸಿಗರಿದ್ದು, ಈ ಅಂಶ ಕೂಡ ಹೃದ್ರೋಗ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಪದ್ಮಶ್ರೀ ಪುರಸ್ಕೃತ ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಭಾರತೀಯ ವಿಜ್ಞಾನ ಸಮ್ಮೇಳನ “ಭಾರತದಲ್ಲಿ ಹೃದ್ರೋಗ ವಿವರ; ಅಪಾಯ ಹಾಗೂ ಇತ್ತೀಚಿನ ಅಂಶಗಳು’ ಕುರಿತ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷಿಪ್ರ ಗತಿಯಲ್ಲಿ ಹೆಚ್ಚಾಗುತ್ತಿರುವ ಅಸಾಂಕ್ರಾಮಿಕ ರೋಗಗಳ ಪೈಕಿ ಹೃದ್ರೋಗ ಮೊದಲ ಸ್ಥಾನದಲ್ಲಿದೆ. ಭಾರತದಲ್ಲಿ ಪ್ರತಿ ನಿಮಿಷಕ್ಕೆ ನಾಲ್ಕು ಮಂದಿ ಹೃದ್ರೋಗ ದಿಂದ ಸಾವಿಗೀಡಾಗುತ್ತಿದ್ದು, ಈಸಂಖ್ಯೆ ಜಾಗತಿಕ ಮಟ್ಟದಲ್ಲೇ ಅತಿ ಹೆಚ್ಚು.

ಇತ್ತೀಚಿನ ದಿನಗಳಲ್ಲಿ ಹೃದ್ರೋಗಕ್ಕೆ ಒತ್ತಡ ಜತೆಗೆ ಆಲಸ್ಯದ ಜೀವನ ಶೈಲಿಯೂ ಪ್ರಮುಖ ಕಾರಣವಾಗಿದೆ. ಅಂತೆಯೇ ಐಸಿಆರ್‌ಎಸ್‌ ವರದಿಯು ಭಾರತದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.51 ಮಂದಿ ಆಲಸಿ ಗಳಿದ್ದಾರೆ ಎಂದು ಹೇಳಿದೆ. ಹೀಗಾಗಿ, ಸದಾ ಚಟುವಟಿಕೆ ಒಳಗೊಂಡ ಜೀವನ ಶೈಲಿ ಭಾರತೀಯರಿಗೆ ಅವಶ್ಯಕವಾಗಿದೆ ಎಂದರು.

ಯುವಜನತೆಯಲ್ಲಿ ಹೆಚ್ಚಾದ ಹೃದ್ರೋಗ: ಜಯದೇವ ಹೃದ್ರೋಗ ಸಂಶೋಧನಾ ಸಂಸ್ಥೆ ನಡೆದ ಸಂಶೋಧನೆಯಲ್ಲಿ 25-35 ವಯಸ್ಸಿನವರಲ್ಲಿ ಹೃದ್ರೋಗ ಹೆಚ್ಚಾಗುತ್ತಿರುವುದು ತಿಳಿದುಬಂದಿದೆ. ಕಳೆದ ಎರಡು ವರ್ಷದಲ್ಲಿ 35 ವರ್ಷದೊಳಗಿನ 2200 ಮಂದಿ ಹೃದ್ರೋಗ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಪ್ರಮಾಣ ಕಳೆದ ಐದು ವರ್ಷಗಳಲ್ಲಿ ಶೇ.22ರಷ್ಟು ಹೆಚ್ಚಳವಾಗಿದೆ. ಇನ್ನು ವಯಸ್ಸಿಗೆ ಮೊದಲೇ ಹೃದ್ರೋಗ ಕಾಣಿಸಿಕೊಳ್ಳುತ್ತಿರುವವರ ಪ್ರಮಾಣದಲ್ಲಿ ಶೇ.45 ಮಂದಿ 38-40 ವಯಸ್ಸಿನವರು, ಶೇ.33 ಮಂದಿ 31-35 ವಯಸ್ಸಿನವರು, ಶೇ.17 ಮಂದಿ 26-30 ವರ್ಷದವರಿದ್ದಾರೆ. ಇನ್ನು ಇವರ ಪೈಕಿ ಶೇ.51 ಮಂದಿಯ ಹೃದ್ರೋಗಕ್ಕೆ ಧೂಮಪಾನವೇ ಕಾಣವಾಗಿದೆ ಡಾ.ಮಂಜು ನಾಥ್‌ ಎಂದರು.

80 ವರ್ಷ ಬದುಕುವುದೇ ಮಕ್ಕಳಿಗೆ ನೀಡುವ ಕೊಡುಗೆ: ಭಾರತದಲ್ಲಿ ಶೇ.15 ಮಂದಿ ಕೌಟುಂಬಿಕ ಹಿನ್ನೆಲೆಯಿಂದ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಕುಟುಂಬದಲ್ಲಿ 50 ವರ್ಷದೊಳಗೆ ಯಾರಾದರೂ ಹೃದ್ರೋಗದಿಂದ ಸಾವಿಗೀಡಾಗಿದ್ದರೆ ಆ ಅಂಶವು ಮುಂದಿನ ಸಂತತಿಯಲ್ಲಿ ಕಂಡುಬರುತ್ತಿದೆ. ಹೀಗಾಗಿ, ಹಣ ಆಸ್ತಿಗಿಂತಲೂ 70-80 ವರ್ಷ ತಂದೆ ತಾಯಿ ಬದುಕಿದರೆ ಅದೇ ಅವರು ತಮ್ಮ ಕುಟುಂಬದ ಮುಂದಿನ ಪೀಳಿಗೆಗೆ ಹಾಗೂ ತಮ್ಮ ಮಕ್ಕಳಿಗೆ ನೀಡುವ ದೊಡ್ಡ ಕೊಡುಗೆ ಎಂದು ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

3 ತಾಸು ಕೂರುವುದು ಐದು ಸಿಗರೇಟಿಗೆ ಸಮ: ಜೀವನ ಶೈಲಿಯಿಂದ ಹೊಸ ರೋಗಗಳು ಹೆಚ್ಚಾಗುತ್ತಿದ್ದು, ಆ ಪೈಕಿ ಸಿಟ್ಟಿಂಗ್‌ ಡಿಸೀಸ್‌ ಕೂಡ ಒಂದು. ಒಂದೇ ಕಡೆ ಮೂರು ಗಂಟೆ ಕುಳಿತುಕೊಳ್ಳುವುದು ಐದು ಸಿಗರೇಟು ಸೇದುವುದಕ್ಕೆ ಸಮ. ಒಂದೇ ಕಡೆ ಹೆಚ್ಚು ಸಮಯ ಕುಳಿತುಕೊಳ್ಳುವುದು ಕೂಡ ಹೃದ್ರೋಗಕ್ಕೆ ಕಾರಣವಾಗುತ್ತಿದೆ.

ದಿನದಲ್ಲಿ 6 ಗಂಟೆ ಒಂದೇ ಕಡೆ ಕುಳಿತುಕೊಳ್ಳುವುದರಿಂದ ಪುರುಷರ ಜೀವಿತಾವಧಿಯಲ್ಲಿ ಶೇ.20, ಮಹಿಳೆಯರ ಜೀವಿತಾವಧಿಯಲ್ಲಿ ಶೇ.40ರಷ್ಟು ಕಡೆಮೆಯಾಗುತ್ತಿದೆ. ಜತೆಗೆ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚಾಗುತ್ತಿದೆ. ದಿನದ ಹೆಚ್ಚು ಸಮಯ ನಿಂತುಕೊಳ್ಳುವುದು, ಓಡಾಡುವುದರ ಜತೆಗೆ ಚಟುವಟಿಕೆಯಿಂದ ದಿನ ಕಳೆಯುವುದು ಒಂದು ರೀತಿಯ ಆರೋಗ್ಯ ಕಾಳಜಿಯಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.